BJP ಶಾಸಕ ಶಿವರಾಜ್ ಪಾಟೀಲ್ ಮೇಲೆ ಹಲ್ಲೆಗೆ ಯತ್ನ: ಓರ್ವನ ಬಂಧನ
Team Udayavani, Apr 2, 2024, 12:27 AM IST
ರಾಯಚೂರು: ಮದುವೆ ಸಮಾರಂಭಕ್ಕೆ ತೆರಳಿದ್ದ ಬಿಜೆಪಿ ಶಾಸಕ ಡಾ| ಶಿವರಾಜ್ ಪಾಟೀಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಹೊಂಚು ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಗದ್ವಾಲ್ ರಸ್ತೆಯ ಬಳಿ ಶಾಸಕ ಡಾ| ಶಿವರಾಜ್ ಪಾಟೀಲ್ ಮದುವೆ ಸಮಾರಂಭಕ್ಕೆ ಹೋಗಿದ್ದರು. ಈ ವೇಳೆ ತನ್ನ ಮನೆಗೆ ನಳ್ಳಿ ಹಾಕಿಸುವಂತೆ ಚಾಂದ್ಪಾಷಾ ಎನ್ನುವ ವ್ಯಕ್ತಿ ಕೋರಿದ್ದಾನೆ. ಆಗ ಶಾಸಕರು ವಿಳಾಸ ನೀಡುವಂತೆ ಹೇಳಿದಾಗ ಶಾಸಕರ ಹತ್ತಿರಕ್ಕೆ ಹೋಗುವ ಯತ್ನ ಮಾಡಿದ್ದಾನೆ. ಆಗ ಆತ ಮದ್ಯ ಸೇವಿಸಿದ ವಾಸನೆ ಬಂದಿದ್ದು, ಶಾಸಕರ ಅಂಗರಕ್ಷಕರು ಮತ್ತು ಬೆಂಬಲಿಗರು ವ್ಯಕ್ತಿಯನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿದ್ದಾರೆ.
ತಪಾಸಣೆ ಮಾಡಿದಾಗ ಆತನಲ್ಲಿ ಚಾಕು ಇಟ್ಟುಕೊಂಡಿರುವುದು ಬೆಳಕಿಗೆ ಬಂದಿದೆ. ವ್ಯಕ್ತಿಯನ್ನು ಮಾರ್ಕೆಟ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದು, ಪ್ರಕರಣ ದಾಖಲಿಸಲಾಗಿದೆ.
ಘಟನೆ ಕುರಿತು ಸೋಮವಾರ ಪ್ರತಿಕ್ರಿಯಿಸಿದ ಶಾಸಕ ಪಾಟೀಲ್, ಆ ವ್ಯಕ್ತಿ ಮದ್ಯವ್ಯಸನಿಯಾಗಿದ್ದಾನೆ. ಮನೆಯಲ್ಲೂ ಪತ್ನಿಯೊಂದಿಗೆ ಜಗಳವಾಡುತ್ತಾನೆ ಎಂಬುದು ತಿಳಿದು ಬಂದಿದೆ. ಆದರೂ ತನಿಖೆ ಮಾಡುವಂತೆ ಎಸ್ಪಿಗೆ ತಿಳಿಸಲಾಗಿದ್ದು, ಎರಡು ದಿನಗಳಲ್ಲಿ ವರದಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hospital: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗಾಗಿ ಕೇಂದ್ರಕ್ಕೆ ಮನವಿ: ಸಚಿವ ಡಾ. ಶರಣಪ್ರಕಾಶ
Raichuru: ಅಪಘಾತದಲ್ಲಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ: ಸಿಎಂ ಸಿದ್ದರಾಮಯ್ಯ
Manvi: ಶಾಲಾ ಬಸ್- ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು
Muda Case: ಮುಡಾ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ
Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.