ಜಾಗೀರನಂದಿಹಾಳ ಜನರಿಗೆ ಬಸಿ ನೀರಿನ ಬಿಸಿ!


Team Udayavani, Oct 22, 2019, 3:30 PM IST

rc-tdy-1

ಲಿಂಗಸುಗೂರು: ತಾಲೂಕಿನ ಜಾಗೀರ ನಂದಿಹಾಳ ಗ್ರಾಮದಲ್ಲಿ ಬಸಿ ನೀರಿನಿಂದಾಗಿ ಗ್ರಾಮಸ್ಥರು ನೂರೆಂಟು ಸಮಸ್ಯೆ ಎದುರಿಸುವಂತಾಗಿದೆ.

ಚಿತ್ತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾಗೀರ ನಂದಿಹಾಳ ಗ್ರಾಮ ತಗ್ಗು ಪ್ರದೇಶದಲ್ಲಿದೆ. ಗ್ರಾಮದಲ್ಲಿ 170ಕ್ಕೂ ಹೆಚ್ಚು ಮನೆಗಳಿವೆ. ಈ ಪೈಕಿ ಸುಮಾರು 90ಕ್ಕೂ ಅಧಿಕ ಮನೆಗಳಲ್ಲಿ ನೀರು ಬಸಿಯುತ್ತತ್ತಿದ್ದು, ಗ್ರಾಮಸ್ಥರು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ.

ಗ್ರಾಮಕ್ಕೆ ಹೊಂದಿಕೊಂಡು ಹಳ್ಳವಿದೆ. ಅಲ್ಲದೇ ರಾಂಪುರ ಏತ ನೀರಾವರಿ ಯೋಜನೆಯ ನಾಲೆ ನಿರ್ಮಿಸಲಾಗಿದೆ. ನಾಲೆಯಲ್ಲಿ ನೀರಿದ್ದಾಗ ಮತ್ತು ನಿರಂತರ ಮಳೆ ಸುರಿಯಲು ಆರಂಭಿಸಿದರೆ ಗ್ರಾಮದ 90ಕ್ಕೂ ಹೆಚ್ಚು ಮನೆಗಳ ಗೋಡೆಗಳಿಂದ ನೀರು ಚಿಮ್ಮುತ್ತಿದೆ. ಇದರಿಂದ ಮನೆ ಒಳಗೆ ಮತ್ತು ಅಂಗಳದಲ್ಲಿ ನೀರು ನಿಲ್ಲುತ್ತದೆ. ಮನೆಯೊಳಗೆ ಎರಡು ಅಡಿವರೆಗೂ ನೀರು ಸಂಗ್ರಹವಾಗುತ್ತದೆ. ನಿವಾಸಿಗಳು ಈ ನೀರನ್ನು ಮೋಟಾರ್‌ ಇಲ್ಲವೇ ಬಕೆಟ್‌ ನಿಂದ ತುಂಬಿ ಹೊರಚೆಲ್ಲುವುದು ನಿತ್ಯ ಕಾಯಕವಾಗಿದೆ.

ಮನೆಯ ಗೋಡೆಗಳು ಕನಿಷ್ಠವೆಂದರೂ ಮೂರು ಅಡಿ ಎತ್ತರದವರೆಗೆ ತೇವಾಂಶ ಹೊಂದಿರುತ್ತವೆ. ಹೀಗಾಗಿ ಅನೇಕ ಮನೆಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡು ನೆಲಕ್ಕುರುಳಿವೆ. ಸ್ವಂತ ಮನೆ ಬಿಟ್ಟು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸುತ್ತಾರೆ ಬಸಿ ನೀರಿನಿಂದ ಬಾಧಿತರಾದ ಗ್ರಾಮಸ್ಥರು. ಮನೆಗಳಲ್ಲಿ ನಿಲ್ಲುವ ನೀರನ್ನು ನಿವಾಸಿಗಳು ಹೊರ ಚೆಲ್ಲುವುದರಿಂದ ಮತ್ತು ರಸ್ತೆಗಳಲ್ಲೂ ಬಸಿ ನೀರು ನಿಲ್ಲುವುದರಿಂದ ರಸ್ತೆಗಳು ಕೆಸರುಗದ್ದೆಯಂತಾಗಿದೆ.  ಜನ, ವಾಹನ ಸಂಚಾರಕ್ಕೆ ಪರದಾಡುವಂತಾಗಿದೆ.

ಇನ್ನು ಗ್ರಾಮದಲ್ಲಿನ ಚರಂಡಿ ಸ್ವತ್ಛ ಮಾಡದ್ದರಿಂದ ರಸ್ತೆಗಳಲ್ಲಿ ನೀರು ನಿಲ್ಲುವುದರಿಂದ ಸೊಳ್ಳೆ ಹಾವಳಿ ಹೆಚ್ಚಿದೆ. ಡೆಂಘೀ, ಚಿಕೂನ್‌ ಗುನ್ಯಾ ಸೇರಿ ವಿವಿಧ ಸಾಂಕ್ರಾಮಿಕ ರೋಗ ಭೀತಿ ಗ್ರಾಮಸ್ಥರನ್ನು ಕಾಡುತ್ತಿದೆ. ಸದಾ ತೇವಾಂಶದಿಂದಾಗಿ ಗ್ರಾಮಸ್ಥರಿಗೆ ಚರ್ಮರೋಗ ಕೂಡ ಕಾಡುತ್ತಿದೆ. ಇಷ್ಟೆಲ್ಲ ಸಮಸ್ಯೆಯಿದ್ದರೂ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಗ್ರಾಮವನ್ನು ತಾತ್ಸಾರದಿಂದ ಕಾಣುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಬಸಿ ನೀರಿನ ಸಮಸ್ಯೆ ಇಂದು, ನಿನ್ನೆಯದಲ್ಲಾ ಇದು ರಾಂಪುರ ಏತ ನೀರಾವರಿ ಯೋಜನೆ ಪ್ರಾರಂಭವಾದಾಗಿನಿಂದ ಗ್ರಾಮಸ್ಥರನ್ನು ಕಾಡುತ್ತಿದೆ. ತಾಲೂಕು ಕೇಂದ್ರದಿಂದ 16 ಕಿ.ಮೀ. ದೂರವಿರುವ ಈ ಗ್ರಾಮದ ಸಮಸ್ಯೆ ಪರಿಹರಿಸುವಲ್ಲಿ ತಾಲೂಕು ಆಡಳಿತವೂ ನಿರ್ಲಕ್ಷ ವಹಿಸಿದೆ ಎನ್ನುತ್ತಾರೆ ಗ್ರಾಮಸ್ಥರು.

 

-ಶಿವರಾಜ ಕೆಂಬಾವಿ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.