ರಾಜ್ಯದಲ್ಲಿ ರಾಹುಲ್‌ ಯಾತ್ರೆ ಮುಕ್ತಾಯ; ತೆಲಂಗಾಣದಲ್ಲಿ ಅದ್ಧೂರಿ ಸ್ವಾಗತ

ಕಾಂಗ್ರೆಸ್‌ ರಾಜ್ಯ ನಾಯಕರಿಂದ ರಾಹುಲ್‌ ಗೆ ಬೀಳ್ಕೊಡುಗೆ

Team Udayavani, Oct 23, 2022, 9:00 PM IST

Bharat-Jodo-Yatra

ರಾಯಚೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಾಯಕತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆ ರಾಜ್ಯದಲ್ಲಿ ಭಾನುವಾರ ಮುಕ್ತಾಯಗೊಂಡಿತು. ಕಳೆದ ಮೂರು ದಿನಗಳಿಂದ ಗಡಿ ಜಿಲ್ಲೆ ರಾಯಚೂರಿನಲ್ಲಿ ಯಾತ್ರೆ ನಡೆಸಿ ನೆರೆ ರಾಜ್ಯ ತೆಲಂಗಾಣ ಸೇರಿಕೊಂಡಿತು.

ತಾಲೂಕಿನ ಶಕ್ತಿನಗರದ ಕೃಷ್ಣಾ ನದಿ ಮಾರ್ಗವಾಗಿ ತೆಲಂಗಾಣಕ್ಕೆ ತೆರಳಿದ ಯಾತ್ರೆಯನ್ನು ಆ ರಾಜ್ಯದ ನಾಯಕರು ವಿಜೃಂಭಣೆಯಿಂದ ಬರಮಾಡಿಕೊಂಡರು. ಜಿಲ್ಲೆಯಲ್ಲಿ ಮೂರನೇ ದಿನ ಮತ್ತೆ ಗ್ರಾಮೀಣ ಕ್ಷೇತ್ರದ ಮಾರ್ಗವಾಗಿ ಸಾಗಿದ ಯಾತ್ರೆಯಲ್ಲಿ ಕೂಡ ಅಪಾರ ಸಂಖ್ಯೆಯ ಜನಸ್ತೋಮ ರಾಹುಲ್‌ ಅವರನ್ನು ಬೀಳ್ಕೊಟ್ಟಿತು.

ಸಮೀಪದ ಯರಮರಸ್‌ನ ಆನಂದ ಪ್ರೌಢಶಾಲಾ ಆವರಣದಲ್ಲಿ ರಾಹುಲ್‌ ಗಾಂಧಿ ಶನಿವಾರ ವಾಸ್ತವ್ಯ ಮಾಡಿದ್ದರು. ಅಲ್ಲಿಂದ ಸುಮಾರು 2 ಕಿಮೀ ದೂರದ ತಾಯಮ್ಮದೇವಿ ದೇವಸ್ಥಾನದಿಂದ ಬೆಳಗ್ಗೆ 6 ಗಂಟೆಗೆ ಯಾತ್ರೆ ಆರಂಭಿಸಿದರು. ಬೆಳಗ್ಗೆ 9.30ರ ವೇಳೆಗೆ ಯಾತ್ರೆ ರಾಯಚೂರು ಜಿಲ್ಲೆಯ ಗಡಿ ದಾಟಿ ತೆಲಂಗಾಣ ಸೇರ್ಪಡೆಯಾಗಿತ್ತು.

ಭಾನುವಾರ ಕೂಡ ಮಾರ್ಗ ಮಧ್ಯೆದಲ್ಲಿ ಅನೇಕರನ್ನು ಭೇಟಿ ಮಾಡುತ್ತಲೇ ಸಾಗಿದ ರಾಹುಲ್‌ಗೆ ಸ್ಥಳೀಯರು ಸಮಸ್ಯೆಗಳ ಮನವಿಗಳನ್ನು ನೀಡಿದ್ದು ಗಮನ ಸೆಳೆಯಿತು. ವೈಟಿಪಿಎಸ್‌ ಕಾರ್ಮಿಕರ ಸಮಸ್ಯೆಗಳ ಬಗ್ಗೆ, ಭೂ ಸಂತ್ರಸ್ತರ ಬಗ್ಗೆ ಮನವಿ ಸಲ್ಲಿಸಲಾಯಿತು. ಯುವಕನೋರ್ವ ವೈಟಿಪಿಎಸ್‌ಗೆ ಭೂಮಿ ನೀಡಿದ್ದೇವೆ. ನಮಗೆ ಉದ್ಯೋಗ ಭರವಸೆ ನೀಡಿದ್ದು ಈಡೇರಿಲ್ಲ. ಈ ಬಗ್ಗೆ ದಯವಿಟ್ಟು ಕ್ರಮ ವಹಿಸಿ ಎಂದು ಇಂಗ್ಲಿಷ್‌ನಲ್ಲಿ ದೊಡ್ಡ ಹಾಳೆಯಲ್ಲಿ ಬರೆದ ಮನವಿ ಸಲ್ಲಿಸಿದರು.

ಚಿಕ್ಕ ಬಾಲಕನೊಬ್ಬ ರಾಹುಲ್‌ ಗಾಂಧಿ ಕೈ ಹಿಡಿದು ಅವರಿಗಿಂತ ವೇಗವಾಗಿ ನಡೆಯುವ ಮೂಲಕ ಗಮನ ಸೆಳೆದ. ರಾಹುಲ್‌ ಗಾಂಧಿಗೆ ಬಾಲಕ ಚಾಕೋಲೇಟ್‌ ನೀಡಿದರೆ ಅದನ್ನು ಸೇವಿಸದೆ ಬೆಂಬಲಿಗ ಪಡೆಗೆ ನೀಡಿದರು. ಮೂರನೇ ದಿನವೂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಈಶ್ವರ ಖಂಡ್ರೆ, ಪ್ರಿಯಾಂಕ್‌ ಖರ್ಗೆ, ಶಾಸಕ ದದ್ದಲ್‌ ಬಸನಗೌಡ, ಮುಖಂಡ ರವಿ ಬೋಸರಾಜ್‌ ಸೇರಿ ಅನೇಕ ನಾಯಕರು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.