ಚುನಾವಣೆಯಲ್ಲಿ ಸೋತಾಗ ನನ್ನ ಬೆನ್ನಿಗೆ ನಿಂತಿದ್ದು ಮಾತ್ರ ನನ್ನ ಬಣಜಿಗ ಸಮಾಜ: ಶೆಟ್ಟರ್
ಬಿಜೆಪಿಯಿಂದ ನನ್ನ ಸ್ವಾಭಿಮಾನಕ್ಕೆ ಪೆಟ್ಟು ಬಂತು
Team Udayavani, Jul 26, 2023, 3:28 PM IST
ಮಸ್ಕಿ: ಸಂಘ ಪರಿವಾರ ಕಾಲದಿಂದಲೂ ನಾನು ಬಿಜೆಪಿ ಪಕ್ಷಕ್ಕೆ ದುಡಿದಿದ್ದೆ. ಆದರೆ ಅದೇ ಪಕ್ಷದಿಂದ ನನ್ನ ಸ್ವಾಭಿಮಾನಕ್ಕೆ ಪೆಟ್ಟು ಬಂತು. ಅದಕ್ಕಾಗಿ ಪಕ್ಷದಿಂದ ಹೊರಬಂದೆ. ಅದರ ಪರಿಣಾಮ ಚುನಾವಣೆಯಲ್ಲಿ ಸೋಲಿಸಲಾಯಿತು. ಆದರೆ ಸೋತಾಗ ನನ್ನ ಬೆನ್ನಿಗೆ ನಿಂತಿದ್ದು ಮಾತ್ರ ನನ್ನ ಬಣಜಿಗ ಸಮಾಜ. ಆಸಮಾಜಕ್ಕೆ ನಾನು ಚಿರರುಣಿಯಾಗಿರುವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಮಸ್ಕಿ ಪಟ್ಟಣದ ಭ್ರಮರಾಂಭ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಮಹೋತ್ಸವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಲವು ವರ್ಷದಿಂದ ಬಿಜೆಪಿಯಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಕಟ್ಟಿದ್ದೆ. ಆದರೆ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಕೊನೆ ಹೊತ್ತಿನ ವೇಳೆಗೆ ನನಗೆ ಟಿಕೆಟ್ ಕೊಡದೇ ಬಿಜೆಪಿ ಅಪಮಾನ ಮಾಡಿತು. ಸ್ವಾಭಿಮಾನಕ್ಕೆ ಧಕ್ಕೆ ಬರುತ್ತಿದ್ದಂತೆಯೇ ಆ ಪಕ್ಷಕ್ಕೆ ನಾನು ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಿದೆ. ಆದರೆ ಎಲ್ಲ ಶಕ್ತಿಗಳು ಕೂಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ನೋಡಿದವು. ಅದಕ್ಕೆ ನನಗೆ ಸೋಲಾಯಿತು.
ಸೋಲಿನ ಸಂದರ್ಭದಲ್ಲಿ ನನಗೆ ಬೆನ್ನೆಲುಬಾಗಿ ನನ್ನ ಸಮಾಜ ನಿಂತಿತ್ತು. ಆ ಸಮಾಜದ ಋಣ ನನ್ನ ಮೇಲೆ ಸಾಕಷ್ಟಿದೆ. ರಾಜ್ಯಾದ್ಯಂತ ಸಮಾಜದ ಸಂಘಟನೆ ಮಾಡುವ ಮೂಲಕ ಋಣ ತೀರಿಸಿವೆ. ಈಗ ಕಾಂಗ್ರೆಸ್ ಕೂಡ ನನ್ನನ್ನು ಗುರುತಿಸಿ ರಾಜಕೀಯ ಸ್ಥಾನ ಮಾನ ನೀಡಿದೆ. ಆ ಪಕ್ಷಕ್ಕೂ ನನ್ನ ಸಮಾಜದವರ ಬೆಂಬಲವಾಗು ನಿಲ್ಲಬೇಕು ಎಂದು ಶೆಟ್ಟರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ
Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.