C.T. Ravi; ಪರಿಶಿಷ್ಟರ ಹಣ ಲೂಟಿ ಹೊಡೆದು ಚುನಾವಣೆಗೆ ಬಳಸಿದ ಕಾಂಗ್ರೆಸ್
Team Udayavani, May 28, 2024, 7:10 PM IST
ಮಸ್ಕಿ:ಪರಿಶಿಷ್ಟ ಸಮುದಾಯಕ್ಕೆ ಬಳಕೆಯಾಗಬೇಕಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ಅನುದಾನ ಕಾಂಗ್ರೆಸ್ ಲೂಟಿ ಮಾಡಿ ಲೋಕಸಭೆ ಚುನಾವಣೆಗೆ ಬಳಸಿಕೊಂಡಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮ ಅಧಿಕಾರಿ ಚಂದ್ರಶೇಖರನ್ ಡೆತ್ನೋಟ್ನಲ್ಲಿ ನಿಗಮ ವ್ಯವಸ್ಥಾಪಕ ಹಾಗೂ ಇನ್ನೊಬ್ಬ ಅಧಿಕಾರಿ ಹೆಸರು ಬರೆದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಪರಿಶಿಷ್ಟ ಪಂಗಡದ ಬಡ ಜನರಿಗೆ ಸೇರಬೇಕಾಗಿರುವ 187 ಕೋಟಿ ರೂ.ಗಳನ್ನು ನಕಲಿ ಖಾತೆಗೆ ವರ್ಗಾವಣೆ ಮಾಡಿ ಕಾಂಗ್ರೆಸ್ ಹಗಲು ದರೋಡೆ ಮಾಡಿದೆ.
ಈ ಹಿಂದೆ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಮಾಡಿಕೊಂಡಾಗ ಸಚಿವರನ್ನು ವಜಾ ಮಾಡುವಂತೆ ಕಾಂಗ್ರೆಸ್ ಆರೋಪಿಸಿತ್ತು. ವಾಲ್ಮೀಕಿ ನಿಗಮ ಅಧೀ ಕ್ಷಕ ಆತ್ಯಹತ್ಯೆಗೆ ಒಳಗಾಗಿ 24 ಗಂಟೆ ಕಳೆಯಿತು. ಆದರೆ ಸಿಎಂ ಸಿದ್ದರಾಮಯ್ಯ ಏನು ಕ್ರಮ ತೆಗೆದುಕೊಂಡಿದ್ದಾರೆ? ವಾಲ್ಮೀಕಿ ನಿಗಮದ ಅಧಿ ಕಾರಿ ಸಾವಿನ ಸುತ್ತ ಕಾಣದ ಕೈಗಳಿವೆ. ಈ ಪ್ರಕರಣವನ್ನು ಕೊಲೆ ಮೊಕದ್ದಮೆ ಎಂದು ದಾಖಲಿಸಿ ಸಮಗ್ರ ತನಿಖೆಗೆ ಒಳಪಡಿಸಬೇಕು, ತಪಿಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.