ಬಾಲೆಯರಿಗೆ ಬಲವಂತದ ಕಂಕಣಭಾಗ್ಯ

ಬಡತನ ಬೇಗೆಯಿಂದ ಮಕ್ಕಳಿಗೆ ಮದುವೆ ಮಾಡುವ ಪಾಲಕರು

Team Udayavani, Sep 23, 2020, 5:48 PM IST

rc-tdy-1

ಸಾಂದರ್ಭಿಕ ಚಿತ್ರ

ರಾಯಚೂರು: ಕಂಕಣ ಕೂಡಿ ಬಂದಾಗ ಮದುವೆಯಾಗುತ್ತದೆ ಎನ್ನುವ ಮಾತಿದೆ. ಆದರೆ, ಜಿಲ್ಲೆಯಲ್ಲಿ ಮಾತ್ರ ಬಾಲಕಿಯರ ವಿಚಾರದಲ್ಲಿ ಅದು ಸುಳ್ಳಾಗಿದೆ. 18 ವರ್ಷ ತುಂಬುವ ಮುನ್ನವೇ ಬಲವಂತದ ಮದುವೆ ಮಾಡುತ್ತಿದ್ದು, ಬಾಲ್ಯವಿವಾಹ ಪದ್ಧತಿ ಇನ್ನೂ ಕಾಡುತ್ತಿದೆ.

ಜಿಲ್ಲೆಯನ್ನು ಬಾಧಿಸುತ್ತಿದ್ದ ದೇವದಾಸಿ ಪದ್ಧತಿಗೆ ಬಹುತೇಕ ಕಡಿವಾಣ ಬಿದ್ದಿದೆ. ಆದರೆ, ಬಾಲ್ಯವಿವಾಹದಂಥ ಸಾಮಾಜಿಕಪಿಡುಗು ಮಾತ್ರ ಸಂಪೂರ್ಣ ಅಳಿದು ಹೋಗಿಲ್ಲ. ಅಕ್ಷರಜ್ಞಾನ ಇಲ್ಲದ, ತಿಳಿವಳಿಕೆ ಇಲ್ಲದ ಪಾಲಕರು ಚಿಕ್ಕ ವಯಸ್ಸಿನಲ್ಲಿಯೇ ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸುವ ಮೂಲಕ ಈ ಕೆಟ್ಟ ಪದ್ಧತಿ ಮುಂದುವರಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಏಪ್ರಿಲ್‌ನಿಂದ ಈವರೆಗೆ ಒಟ್ಟು 29 ಬಾಲ್ಯ ವಿವಾಹಗಳನ್ನು ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳು ತಡೆದಿದ್ದಾರೆ. ಆದರೆ, ಮಾಹಿತಿ ಸಿಕ್ಕು ಸ್ಥಳಕ್ಕೆ ಹೋಗುವಷ್ಟರಲ್ಲಿ ಮೂರು ಜೋಡಿಗಳಿಗೆ ಬಾಲ್ಯ ವಿವಾಹ ನೆರವೇರಿಬಿಟ್ಟಿದೆ. ಬಾಲ್ಯ ವಿವಾಹ ಮಾಡಿದ ಹೆತ್ತವರು, ಮದುವೆಗೆ ಸಹಕರಿಸಿದ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ, ಇನ್ನೂ ಅನೇಕ ಕಡೆ ಸದ್ದಿಲ್ಲದೇ ಬಾಲ್ಯವಿವಾಹ ನಡೆಯುತ್ತಿವೆ.

ಬೆಳ್ಳಂಬೆಳಗ್ಗೆ ಮದುವೆ: ಕೋವಿಡ್ ಲಾಕ್‌ಡೌನ್‌ ವೇಳೆಯಲ್ಲೇ ಬಹುತೇಕ ಕಡೆ ಬೆಳ್ಳಂಬೆಳಗ್ಗೆಯೇ ಮದುವೆಗಳು ನೆರವೇರಿವೆ. ರಾತ್ರೋರಾತ್ರಿ ಸಿದ್ಧತೆ ಮಾಡಿಕೊಂಡು ಅಧಿಕಾರಿಗಳು ಬರುವಷ್ಟರಲ್ಲೇ ಮದುವೆ ಮಾಡಿ ಮುಗಿಸಿದ ಘಟನೆಗಳು ಜಿಲ್ಲೆಯಲ್ಲಿ ನಡೆದಿವೆ. ಆದರೂ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಬಹುತೇಕ ಮದುವೆಗಳನ್ನು ತಪ್ಪಿಸಲಾಗಿದೆ.

ಬಡತನವೇ ಮೂಲ: ಮಹಿಳಾ ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಸಾಕಷ್ಟು ಜಾಗೃತಿ ಮೂಡಿಸಿದರೂ ಜಿಲ್ಲೆಯಲ್ಲಿ ಇಂದಿಗೂ  ಇಂಥ ಘಟನೆಗಳು ಮರುಕಳಿಸುತ್ತಲೇ ಇವೆ. ಬಾಲ್ಯವಿವಾಹಗಳಿಗೆ ಬಡತನವೇ ಮುಖ್ಯ ಕಾರಣ ಎಂಬುದು ಅಧಿಕಾರಿಗಳ ವಿಶ್ಲೇಷಣೆ. ಹೆಣ್ಣು ಹೆತ್ತ ಪಾಲಕರು ಹೆಣ್ಣು ಮಕ್ಕಳು ವಯಸ್ಸಿಗೆ ಬಂದ ಒಂದೆರಡು ವರ್ಷದಲ್ಲೇ ಮದುವೆ ಸಿದ್ಧತೆ ಮಾಡಿಕೊಳ್ಳುತ್ತಾರೆ. ಬಹುತೇಕ ಹಳ್ಳಿಗಳಲ್ಲಿ ಪ್ರೌಢಶಾಲೆಗಳಿಲ್ಲ. ಹೆಚ್ಚಿನ ವ್ಯಾಸಂಗಕ್ಕೆ ಅಕ್ಕಪಕ್ಕದ ಊರುಗಳಿಗೆ ಹೋಗಬೇಕು. ಇದು ಹೆತ್ತವರ ಸಮಸ್ಯೆಗೆ ಕಾರಣವಾಗುತ್ತಿದೆ. ಬೇರೆ ಊರಿಗೆ ಓದಲುಕಳುಹಿಸದೆ ಮದುವೆ ಮಾಡುತ್ತಿದ್ದಾರೆ.

ಅಧಿಕಾರಿಗಳು ಹೆತ್ತವರನ್ನು ವಿಚಾರಿಸಿದರೆ, ಮನೆಯಲ್ಲಿ ಬಡತನ ಇದೆ. ಅವರನ್ನು ಸಾಕುವ ಯೋಗ್ಯತೆ ಇಲ್ಲ. ಮದುವೆ ಮಾಡಿದರೆ ಅವರಷ್ಟಕ್ಕೆ ಅವರು ದುಡಿದು ತಿನ್ನುತ್ತಾರೆ ಎಂಬ ಸಬೂಬು ನೀಡುತ್ತಾರೆ. ಇನ್ನು ಹಲವೆಡೆ ಮನೆಯಲ್ಲಿನ ವೃದ್ಧರ ಒತ್ತಾಯಕ್ಕೆ ಮಣಿದು, ಸಂಬಂಧಿ ಕರಲ್ಲೇ ಮದುವೆ ಮಾಡಲು ಮುಂದಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಈ ವರ್ಷ ನಡೆದ ಬಹುತೇಕ ಮದುವೆಗಳು ಇಂಥದ್ದೇ ಕಾರಣಗಳಿಂದ ಘಟಿಸಿವೆ.

ಬಾಲಕಿಯರು ಕಲ್ಯಾಣ ಸಮಿತಿಗೆ: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಪೊಲೀಸರು ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿ ಮದುವೆ ತಡೆದು ಮಕ್ಕಳನ್ನು ರಕ್ಷಿಸುತ್ತಿದ್ದಾರೆ. ಹಾಗೆ ರಕ್ಷಿಸಿದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ದಾಖಲಿಸಲಾಗುತ್ತಿದೆ. ಅಲ್ಲಿ ಅವರನ್ನು ಕೌನ್ಸೆಲಿಂಗ್‌ಗೆ ಒಳಪಡಿಸಿ ಬಾಲಮಂದಿರಕ್ಕೆ ಕಳುಹಿಸಬೇಕೇ, ಮನೆಗೆ ಕಳುಹಿಸಬೇಕೇ ಎಂದು ನಿರ್ಧರಿಸಿ ಕ್ರಮ ಕೈಗೊಳ್ಳುತ್ತಾರೆ. ಅದರ ಜತೆಗೆ ಪಾಲಕರಿಂದ ಮುಚ್ಚಳಿಕೆ ಪತ್ರ ಬರೆಯಿಸಿಕೊಂಡು ಎಚ್ಚರಿಕೆ ನೀಡಲಾಗುತ್ತಿದೆ. ಈ ರೀತಿ ದಾಖಲಾದ ಬಹುತೇಕ ಹೆಣ್ಣುಮಕ್ಕಳು ನಮಗೆ ಓದುವ ಆಸೆಯಿದೆ. ಬೇಡ ಎಂದರೂ ಕೇಳದೆ ಮದುವೆ ಮಾಡಲು ಮುಂದಾದರು. ನಮಗೆ ಇಷ್ಟು ಬೇಗ ಮದುವೆ ಸುತಾರಾಂ ಇಷ್ಟ ಇಲ್ಲ ಎಂಬ ಅಭಿಪ್ರಾಯ ನೀಡಿದ್ದಾಗಿ ತಿಳಿಸುತ್ತಾರೆ ಅಧಿಕಾರಿಗಳು.

ಜಿಲ್ಲೆಯಲ್ಲಿ ಇಂದಿಗೂ ಸಾಕಷ್ಟು ಕಡೆ ಬಾಲ್ಯವಿವಾಹಗಳು ನಡೆಯುತ್ತಿರುವ ದೂರುಗಳು ಬರುತ್ತಿವೆ. ತಕ್ಷಣಕ್ಕೆ ದಾಳಿ ನಡೆಸುವ ಮೂಲಕ ತಡೆಯುತ್ತಿದ್ದೇವೆ. ಹೆತ್ತವರಲ್ಲಿ ತಿಳಿವಳಿಕೆ ಕೊರತೆ, ಬಡತನ, ಮನೆಯಲ್ಲಿನ ಹಿರಿಯರ ಒತ್ತಡಗಳೇ ಇದಕ್ಕೆ ಕಾರಣ. ಬಾಲ್ಯವಿವಾಹದಲ್ಲಿ ಬಾಲಕಿಯರೇ ಹೆಚ್ಚಾಗಿ ಗುರಿಯಾಗುತ್ತಾರೆ. ಒಂದು ಪ್ರಕರಣದಲ್ಲಿ ಮಾತ್ರ 20 ವರ್ಷದ ಬಾಲಕನಿಗೆ ಮದುವೆ ಮಾಡಲಾಗಿತ್ತು. ಜಾಗೃತಿ ಮೂಡಿಸುವ ಕೆಲಸ ನಿರಂತರ ಸಾಗಿದೆ. – ಅಹ್ಮದ್‌ ಮನ್ಸೂರ್‌, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ

 

-ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

3-maski

Maski: ಮಾಂಸದೂಟ ಸೇವಿಸಿ ಮೂವರು ಅಸ್ವಸ್ಥ

1-trfff

Sirwar; ಭೀಕರ ಅಪಘಾ*ತ; ಮೂವರು ಸ್ಥಳದಲ್ಲೇ ಸಾ*ವು

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.