ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿಗೆ ಬರಲಿ: ಕೆವಿ ಆಹ್ವಾನ


Team Udayavani, Mar 10, 2022, 1:00 PM IST

16congress

ಸಿಂಧನೂರು: ರಾಷ್ಟ್ರೀಯ ಪಕ್ಷವೆಂದು ಹೇಳಿಕೊಳ್ಳುವ ಕಾಂಗ್ರೆಸ್‌ನಲ್ಲಿ ರಾಜ್ಯ ಮಟ್ಟದಲ್ಲೂ ಗುಂಪುಗಾರಿಕೆ. ಸ್ಥಳೀಯ ಮಟ್ಟದಲ್ಲಿ ಜಗಳ ಆರಂಭವಾಗಿದೆ. ಇದರಿಂದ ಗೊಂದಲಕ್ಕೆ ಸಿಲುಕಿರುವ “ಕೈ’ ಕಾರ್ಯಕರ್ತರು ಬಿಜೆಪಿಗೆ ಬಂದರೆ ಸ್ವಾಗತಿಸಲಾಗುವುದು ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸಿಂಧನೂರು ಕಾಂಗ್ರೆಸ್‌ ಜಗಳ ಈಗಾಗಲೇ ತಾರಕಕ್ಕೇರಿದೆ. ಬಣದ ಜಗಳದಲ್ಲಿ ಕಾರ್ಯಕರ್ತರು ಗೊಂದಲ್ಲಿರುವುದಾಗಿ ಹೇಳುತ್ತಿದ್ದಾರೆ. ಅಂಥವರಿಗೆ ನಮ್ಮ ಮುಕ್ತ ಆಹ್ವಾನವಿದೆ. ಸುಂದರ ಸಿಂಧನೂರು ತಾಲೂಕು ನಿರ್ಮಾಣದ ನಿಟ್ಟಿನಲ್ಲಿ ನಮ್ಮೊಂದಿಗೆ ಕೈ ಜೋಡಿಸಬಹುದು. ತಾಲೂಕಿನ ಹಿತವನ್ನು ಬಯಸುವ ಕಾರ್ಯಕರ್ತರು ಅಲ್ಲಿದ್ದುಕೊಂಡು ಕಿತ್ತಾಟ ನೋಡುವ ಬದಲು, ನಮ್ಮಲ್ಲಿಗೆ ಬರಬಹುದು ಎಂದರು.

ಡಿಕೆಶಿಗೆ, ಸಿದ್ದುಗೆ ಹೊಂದಾಣಿಕೆಯಿಲ್ಲ

ಸಿಂಧನೂರಿನಲ್ಲಿ ಹೇಗೆ ಹೊಂದಾಣಿಕೆ ಯಿಲ್ಲವೋ, ರಾಜ್ಯಮಟ್ಟದಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಣಗಳಿವೆ. ಅಲ್ಲಿಯೂ ಪಕ್ಷ ಸರಿಯಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕಾರ್ಯಕರ್ತರಿಗೆ ಬಿಜೆಪಿಯೇ ಪರಿಹಾರ ಎಂದರು.

ನಿರ್ಧಾರ ಸ್ಪಷ್ಟಪಡಿಸಲಿ

ಕೊಪ್ಪಳ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಿವರಾಜ್‌ ತಂಗಡಗಿ ಅವರು ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ವಿರೋಧ ವ್ಯಕಪಡಿಸಿದ್ದಾರೆ. ಇದು ಅವರೊಬ್ಬರ ತೀರ್ಮಾನವೋ? ಇಲ್ಲವೇ ಕಾಂಗ್ರೆಸ್‌ ಪಕ್ಷದ ನಿರ್ಧಾರವೋ? ಎಂಬುದನ್ನು ಬಹಿರಂಗಪಡಿಸಬೇಕು. ಈ ಬಗ್ಗೆ ರಾಯಚೂರು, ಬಳ್ಳಾರಿ ಜಿಲ್ಲೆಯ ನಾಯಕರು ತಮ್ಮ ನಿಲುವು ಬಹಿರಂಗಪಡಿಸಬೇಕು. 33 ಟಿಎಂಸಿ ಅಡಿ ನೀರು ಸದ್ಬಳಕೆ ಮಾಡಿಕೊಳ್ಳುವ ಬೃಹತ್‌ ಯೋಜನೆಗೆ ವಿರೋಧ ಸಲ್ಲದು ಎಂದರು.

ಪೂಜಪ್ಪ ಪೂಜಾರಿ, ಎಂ.ದೊಡ್ಡ ಬಸವರಾಜ್‌, ವೆಂಕಣ್ಣ ತಿಪ್ಪನಹಟ್ಟಿ, ಸಂಜಯ್‌ ಜೈನ್‌, ಮಹೆಬೂಬ್‌ ಮಂತ್ರಿ, ನಾಗೋಜಿರಾವ್‌ ಮರಾಠ, ಶ್ರೀನಿವಾಸ್‌ ಗೋಮರ್ಸಿ ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.