ಭತ್ತ ಬೆಳೆಗಾರರಿಗೆ ಮಾನದಂಡ ಇಕ್ಕ,ಟ್ಟು
Team Udayavani, May 27, 2021, 8:50 PM IST
ರಾಯಚೂರು: ಭತ್ತ ಬೆಳೆಗಾರರಿಗೆ ಒಂದೆಡೆ ಬೆಲೆ ಕುಸಿತ ಸಮಸ್ಯೆ ಎದುರಾದರೆ, ಮತ್ತೂಂದೆಡೆ ಖರೀದಿ ಕೇಂದ್ರಗಳಲ್ಲಿ ಗುಣಮಟ್ಟ ಪರೀಕ್ಷೆ ಎದುರಿಸುವ ಸವಾಲು ಕಗ್ಗಂಟಾಗಿ ಪರಿಣಮಿಸಿದೆ.
ಸರ್ಕಾರ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು, ಜೂ.30ರವರೆಗೆ ನೋಂದಣಿಗೆ ಅವಕಾಶ ನೀಡಿದೆ. ಆದರೆ, ನೋಂದಣಿ ವೇಳೆ ಗುಣಮಟ್ಟ ಪರೀಕ್ಷೆ ನಡೆಯುತ್ತಿದ್ದು, ಮಾನದಂಡಗಳ ಪ್ರಕಾರ ಇಲ್ಲವಾದರೆ ಅಂಥ ಭತ್ತವನ್ನು ಸಾರಾಸಗಟಾಗಿ ತಿರಸ್ಕರಿಸಲಾಗುತ್ತಿದೆ.
ಮುಕ್ತ ಮಾರುಕಟ್ಟೆಯಲ್ಲಿ ಸೂಕ್ತ ದರವಿಲ್ಲ, ಖರೀದಿ ಕೇಂದ್ರಗಳಲ್ಲಿ ಮನ್ನಣೆ ಇಲ್ಲದೆ ಅನ್ನದಾತರ ಪಾಡು ಅಡಕತ್ತರಿಯಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ಕಳೆದ ವರ್ಷ 1400 ರೂ.ವರೆಗೆ ಇದ್ದ ದರ ಈ ಬಾರಿ 700-800 ರೂ. ಇದೆ. ಜಿಲ್ಲೆಯಲ್ಲಿ ಬೇಸಿಗೆ ಬೆಳೆಯಲ್ಲಿ ಸುಮಾರು 90 ಹೆಕ್ಟೇರ್ಗೂ ಅಧಿ ಕ ಪ್ರದೇಶದಲ್ಲಿ ಭತ್ತ ಬೆಳೆದಿದ್ದು, 4 ಲಕ್ಷ ಕ್ವಿಂಟಲ್ಗೂ ಅಧಿ ಕ ಇಳುವರಿ ನಿರೀಕ್ಷಿಸಲಾಗಿತ್ತು. ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿಸಿದ ಭತ್ತವನ್ನು ಹಲ್ಲಿಂಗ್ ಮಾಡಿಸಿ ಪುನಃ ಆಹಾರ ಇಲಾಖೆಯಿಂದ ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ.
ಆದರೆ, ಖಾಸಗಿ ಮಿಲ್ಗಳಿಗೆ ಹಲ್ಲಿಂಗ್ಗೆ ನೀಡಿರುವ ಕಾರಣ ಅವರ ಬೇಡಿಕೆಗೆ ತಕ್ಕಂತ ಅಕ್ಕಿ ನೀಡದಿದ್ದರೆ ನಾವು ಹಲ್ಲಿಂಗ್ ಮಾಡುವುದಿಲ್ಲ ಎನ್ನುತ್ತಿದ್ದಾರೆ ಎಂಬುದು ಅಧಿ ಕಾರಿಗಳ ವಾದ. ಕೇಂದ್ರ ಸರ್ಕಾರ ಗುಣಮಟ್ಟದಲ್ಲಿ ರಾಜಿ ಆಗದಂತೆ ತಿಳಿಸಿದೆ. ತೇವಾಂಶ, ಸ್ವತ್ಛತೆ, ತೂಕ ಜತೆಗೆ ಕ್ವಿಂಟಲ್ ಭತ್ತ ಹಲ್ಲಿಂಗ್ ಮಾಡಿದಾಗ ಕನಿಷ್ಟ ಶೇ.67ರಷ್ಟು ಅಕ್ಕಿ ಬರಬೇಕು ಎಂಬ ಷರತ್ತು ವಿ ಧಿಸಲಾಗಿದೆ. ನಾವು ಆರ್ ಎನ್ಆರ್ ತಳಿ ಅಕ್ಕಿ ಬೆಳೆದಿದ್ದು, ಈ ಅಕ್ಕಿ ಅಷ್ಟೊಂದು ಪ್ರಮಾಣದಲ್ಲಿ ತೂಗುವುದಿಲ್ಲ ಎಂದು ರೈತರೇ ಹೇಳುತ್ತಿದ್ದಾರೆ. ಈ ಕಾರಣಕ್ಕೂ ಖರೀದಿ ಕೇಂದ್ರಗಳಲ್ಲಿ ಭತ್ತ ತಿರಸ್ಕಾರವಾಗುತ್ತಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು
Raichur: ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.