ಸಾಂಸ್ಕೃತಿಕ ಕಾರ್ಯಕ್ರಮ ಹೆಚ್ಚು ನಡೆಯಲಿ


Team Udayavani, Mar 28, 2022, 5:51 PM IST

16culture

ರಾಯಚೂರು: ಸಂಗೀತ, ವೀರಗಾಸೆ ತುಂಬಾ ಸೊಗಸಾದ ಕಲಾ ಪ್ರಕಾರಗಳು. ಅದರಂತೆ ರಂಗಭೂಮಿ ಕೂಡ ಜನರನ್ನು ಮನರಂಜಿಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಆರ್‌ಟಿಪಿಎಸ್‌ ಮುಖ್ಯ ಇಂಜಿನಿಯರ್‌ ಸಿದ್ದಗಂಗಯ್ಯ ಅಭಿಪ್ರಾಯ ಪಟ್ಟರು.

ತಾಲೂಕಿನ ಶಕ್ತಿನಗರದಲ್ಲಿ ದೇವಸುಗೂರಿನ ಡಾ| ಬಾಬು ಜಗಜೀವನ್‌ರಾಂ ರಂಗನಿರಂತರ ಸಾಂಸ್ಕೃತಿಕ ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಂಗೀತ ಜಾನಪದ ವೀರಗಾಸೆ ನೃತ್ಯ ಪ್ರದರ್ಶನ ಹಾಗೂ ವೆಂಕಟ ನರಸಿಂಹಲು ತಂಡದಿಂದ ಹಾಸ್ಯಭರಿತ ನಾಟಕ ಕಳ್ಳ ಗುರು ಸುಳ್ಳ ಶಿಷ್ಯ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.

ಸಾಮಾನ್ಯವಾಗಿ ಇಂಥ ಕಾರ್ಯಕ್ರಮ ನಿರಂತರ ನಡೆಯಬೇಕು. ಜನರು ಒಟ್ಟೊಟ್ಟಿಗೆ ಸೇರಬೇಕೆಂದರೆ ಇಂಥ ಸಾಂಸ್ಕೃತಿಕ ಕಾರ್ಯಕ್ರಮ ಹೆಚ್ಚು-ಹೆಚ್ಚು ಆಯೋಜನೆ ಮಾಡಬೇಕು ಎಂದರು.

ಆರ್‌ಟಿಪಿಎಸ್‌ ನೌಕರರ ಸಂಘದ ಕಾರ್ಯದರ್ಶಿ ವೆಂಕನಗೌಡ ಮಾತನಾಡಿ, ಈ ಕಲಾ ಸಂಸ್ಥೆ ಸಾಂಸ್ಕೃತಿಕ ನಡೆಸಿಕೊಡುವ ಸಂಗೀತ, ನೃತ್ಯ, ನಾಟಕಗಳನ್ನು ಜನ ನೋಡಿ ಆನಂದಿಸುತ್ತಾರೆ. ಜನರಿಗೆ ಖುಷಿ ನೀಡಿದರೆ ಅಂಥ ಕಾರ್ಯಕ್ರಮಗಳ ಉದ್ದೇಶ ಈಡೇರಿದಂತೆ ಎಂದರು.

ಕೆಪಿಸಿ ಎಂಪ್ಲಾಯಿಸ್‌ ಯೂನಿಯನ್‌ ಅಧ್ಯಕ್ಷ ಜಗದೀಶ್‌ ಸಮಾಳ ಮಾತನಾಡಿ, ಕೋವಿಡ್‌ ಕಾರಣಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಸ್ಥಗಿತಗೊಂಡಿದ್ದವು. ಈಗಷ್ಟೇ ಮತ್ತೆ ಶುರುವಾಗುತ್ತಿವೆ. ಕಲಾವಿದರು ಬಹಳ ಸಂಕಷ್ಟದಲ್ಲಿದ್ದು, ಇಂಥ ಕಲಾವಿದರನ್ನು ಪ್ರತಿಯೊಬ್ಬರು ಪ್ರೋತ್ಸಾಹಿಸಬೇಕು ಎಂದರು.

ಆರ್‌ಟಿಪಿಎಸ್‌ ಎಸ್ಸಿ, ಎಸ್ಟಿ ನೌಕರರ ಸಂಘದ ಕಾರ್ಯದರ್ಶಿ ಭೀಮಯ್ಯ ನಾಯಕ್‌ ಮಾತನಾಡಿದರು. ನಿವೃತ್ತ ನೌಕರ ಸತ್ಯನಾಥ್‌, ಭೀಮಣ್ಣ ಗಂಟೆ ಸೇರಿ ಇತರರಿದ್ದರು. ಸೂಗುರೇಶ್ವರ ಜಾನಪದ ವೀರಗಾಸೆ ನೃತ್ಯ ಪ್ರದರ್ಶನ ಹಾಗೂ ಸಂಗೀತ ಪ್ರದರ್ಶನ ಹಾಗೂ ಕಳ್ಳ ಗುರು ಸುಳ್ಳು ಶಿಷ್ಯ ನಾಟಕ ಪ್ರದರ್ಶಿಸಲಾಯಿತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.