ರಾರಾಜಿಸಿದ ಕಟೌಟ್‌; ಕಾರ್ಯಕ್ರಮವೇ ರದ್ದು


Team Udayavani, Mar 22, 2022, 4:02 PM IST

23banner

ಮಸ್ಕಿ: ರಾಜ್ಯಾದ್ಯಂತ ಸದ್ದು ಮಾಡಿದ್ದ ಮಸ್ಕಿ ವಿಧಾನಸಭೆ ಉಪ ಚುನಾವಣೆಯಲ್ಲಿ ಮಸ್ಕಿ ಕ್ಷೇತ್ರಕ್ಕೆ ಕಾಲು ಇಡದಾಗಿದ್ದ ದೇವದುರ್ಗ ಶಾಸಕ ಎನ್‌. ಶಿವನಗೌಡ ನಾಯಕ ಸೋಮವಾರ ಮಸ್ಕಿಗೆ ಆಗಮಿಸಲಿದ್ದಾರೆ ಎನ್ನುವ ಬ್ಯಾನರ್‌, ಕಟೌಟ್‌ಗಳು ಎಲ್ಲೆಡೆ ರಾರಾಜಿಸಿದ್ದವು. ಆದರೆ ಕೊನೆ ಗಳಿಗೆಯಲ್ಲಿ ಕಾರ್ಯಕ್ರಮವೇ ರದ್ದಾದ ಪ್ರಸಂಗ ನಡೆಯಿತು.

ಕೆಆರ್‌ಡಿಐಎಲ್‌ ಸಂಸ್ಥೆ ಅಧ್ಯಕ್ಷರು ಆಗಿರುವ ಶಾಸಕ ಕೆ. ಶಿವನಗೌಡ ನಾಯಕ ಹೆಸರಲ್ಲಿ ಪಟ್ಟಣದಲ್ಲಿ ಮೂರು ಕಡೆ ಕುಡಿವ ನೀರಿನ ಅರವಟಿಗೆ ಹಾಗೂ ಶ್ರೀಶೈಲಕ್ಕೆ ಪಾದಯಾತ್ರೆ ಕೈಗೊಂಡಿರುವ ಯಾತ್ರಾತ್ರಿಗಳಿಗೆ ಅನ್ನ ದಾಸೋಹ ಹಮ್ಮಿಕೊಳ್ಳಲಾಗಿದೆ. ಈ ಸ್ಥಳಗಳಿಗೆ ಎನ್‌. ಶಿವನಗೌಡ ನಾಯಕ ಭೇಟಿ ನೀಡಿ ಅಭಿಮಾನಿಗಳ ಜತೆ ಸಮಾಗಮಕ್ಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಉಪ ಚುನಾವಣೆ ವೇಳೆ ಸಿಎಂ ಸೇರಿ ಸಂಪುಟದ ಡಜನ್‌ಗೂ ಹೆಚ್ಚು ಸಚಿವರು, ಶಾಸಕರು ಬಂದು ಹೋದರೂ ದೇವದುರ್ಗ ಶಾಸಕ ಎನ್‌. ಶಿವನಗೌಡ ನಾಯಕ ಮಾತ್ರ ಇಲ್ಲಿಗೆ ಕಾಲಿಟ್ಟಿರಲಿಲ್ಲ. ಆದರೆ ಮಾ.21ರಂದು ಕೆ. ಶಿವನಗೌಡ ನಾಯಕ ಅಭಿಮಾನಿಯೂ ಆಗಿರುವ ತಾಪಂ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ, ಮುಖಂಡ ಸಂದೀಪ್‌ ಪಾಟೀಲ್‌ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದಕ್ಕಾಗಿ ಎಲ್ಲೆಡೆಯೂ ಭಾರೀ ಪ್ರಮಾಣದಲ್ಲಿ ಕಟೌಟ್‌ಗಳನ್ನು ಹಾಕಲಾಗಿತ್ತು.

ಸೆಡ್ಡು ಹೊಡೆದ ಗ್ಯಾಂಗ್‌

ತಾಪಂ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ ಕಳೆದು ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಆರ್‌. ಬಸನಗೌಡ ಪರವಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಪ್ರಮುಖ ಕಾರಣರಾಗಿದ್ದರು ಎಂಬುದು ಗಮನಾರ್ಹ ಸಂಗತಿ. ಇವರಂತೆ ಹಲವು ಯುವಕರು ಕೂಡ ಕೆಲಸ ಮಾಡಿದ್ದರು. ಈಗ ಅದೇ ಗುಂಪು ಬಿಜೆಪಿ ಚಿಹ್ನೆ ಇಲ್ಲದೇ ಶಿವನಗೌಡ ನಾಯಕ ಪರ ಅಭಿಮಾನ ಮೆರೆದಿದ್ದಾರೆ. ಈ ಮೂಲಕ ಪರೋಕ್ಷವಾಗಿ ಬಿಜೆಪಿ ಎಂದೇ ಗುರುತಿಸಿಕೊಂಡಂತಾಗಿದೆ. ಅಲ್ಲದೇ ಯುಗಾದಿ ಪ್ರಯುಕ್ತ ಎನ್‌. ಶಿವನಗೌಡ ನಾಯಕ ಹೆಸರಲ್ಲಿ ಗ್ರೀಟಿಂಗ್ಸ್‌ಗಳನ್ನು ಕ್ಷೇತ್ರದ ಪ್ರಮುಖ ಮುಖಂಡರು, ಸಂಘ-ಸಂಸ್ಥೆಗಳಿಗೂ ಹಂಚಿಕೆ ಮಾಡಲಾಗಿದೆ. ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ನಡೆದ ಇಂತಹ ಚಟುವಟಿಕೆಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿವೆ.

ಶಾಸಕ ಶಿವನಗೌಡ ನಾಯಕ ಅನುಮತಿ ಪಡೆದುಕೊಂಡೇ ಇಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ದೇವದುರ್ಗ ಸೇರಿ ಇತರೆಡೆ ಬಿಡುವಿಲ್ಲದ ಕಾರ್ಯಕ್ರಮಗಳಿದ್ದ ಕಾರಣ ಈ ಬಾರಿ ಬರಲು ಆಗಲ್ಲ ಎಂದಿದ್ದಾರೆ. ಕೆಲ ದಿನ ಬಿಟ್ಟು ನಂತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. -ಶಿವಣ್ಣ ನಾಯಕ, ತಾಪಂ ಮಾಜಿ ಅಧ್ಯಕ್ಷ, ಮಸ್ಕಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.