ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಿಸಲು ಆಗ್ರಹ
Team Udayavani, Sep 3, 2022, 5:28 PM IST
ರಾಯಚೂರು: ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಬೇಕು, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಖೀಲ ಭಾರತ ನಿರುದ್ಯೋಗ ಯುವಜನರ ಹೋರಾಟ ಸಮಿತಿ ಸದಸ್ಯರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಕುರಿತು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಒಂದೆಡೆ ಪದವೀಧರರು ಡಿಗ್ರಿಗಳನ್ನು ಪಡೆದು ಸಣ್ಣ ಪುಟ್ಟ ಕೆಲಸ ಮಾಡುವ ಪರಿಸ್ಥಿತಿ ಇದೆ. ಅಲ್ಲದೇ, ಕೋವಿಡ್ -19 ಪರಿಸ್ಥಿತಿಯಲ್ಲಿ, ಉದ್ಯೋಗ ಕಳೆದುಕೊಂಡು ಯುವಕರು ಕಂಗಾಲಾಗಿದ್ದಾರೆ. ಆದರೆ, ಸರ್ಕಾರಿ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ಸರ್ಕಾರ ಅವುಗಳ ಭರ್ತಿಗೆ ಮುಂದಾಗುತ್ತಿಲ್ಲ ಎಂದರು.
ರಾಜ್ಯ ಸರ್ಕಾರ ಪೊಲೀಸ್ ನೇಮಕಾತಿಗೆ ನಿಗದಿಪಡಿಸಿರುವ ವಯೋಮಿತಿ ಕಡಿಮೆ ಇದೆ. ಅದರಲ್ಲೂ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಪೊಲೀಸ್ ನೇಮಕಾತಿಯ ಗರಿಷ್ಠ ವಯೋಮಿತಿ 30-35 ವರ್ಷಗಳಿದ್ದರೆ, ನಮ್ಮ ರಾಜ್ಯದಲ್ಲಿ 25-27 ವರ್ಷಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಇದರಿಂದ ರಾಜ್ಯದ ಯುವಕರಿಗೆ ಅನ್ಯಾಯವಾಗುತ್ತಿದೆ ಎಂದರು.
ಕೋವಿಡ್ ಕಾರಣದಿಂದ ಪಿಎಸ್ಐ ನೇಮಕಾತಿಗೆ ಗರಿಷ್ಠ ವಯೋಮಿತಿ ಹೆಚ್ಚಿಸಿದಂತೆ ಪೊಲೀಸ್ ನೇಮಕಾತಿಯಲ್ಲೂ ಕನಿಷ್ಠ 3-4 ವರ್ಷ ವಯೋಮಿತಿ ಹೆಚ್ಚಿಸಬೇಕು. ಖಾಲಿ ಇರುವ ಎಲ್ಲ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿ ಚನ್ನಬಸವ ಜಾನೇಕಲ್, ವಿನೋದ್ ಕುಮಾರ್, ಪೊಲೀಸ್ ಹುದ್ದೆಯ ಆಕಾಂಕ್ಷಿಗಳಾದ ನಾಗೇಶ್, ರಮೇಶ್, ಸಬjಲಿ, ಮಾರುತಿ, ಮಂಜುನಾಥ್, ಮಲ್ಲೇಶ್, ಮೌಲಾಸಾಬ್, ಕಲ್ಯಾಣ್ ಕುಮಾರ್ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು
Raichur: ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು
Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.