![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 17, 2022, 10:39 PM IST
ರಾಯಚೂರು: ಹಿಂದೊಮ್ಮೆ ಅಧಿಕಾರಿಯನ್ನು ಅವಾಚ್ಯವಾಗಿ ನಿಂದಿಸಿ ವಿವಾದ ಸೃಷ್ಟಿಸಿಕೊಂಡಿದ್ದ ದೇವದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಶಿವನಗೌಡ ನಾಯಕ ಈಗ ಮತ್ತೊಬ್ಬ ಅಧಿಕಾರಿಯನ್ನು ಅದೇ ಮಾದರಿಯಲ್ಲಿ ನಿಂದಿಸಿರುವ ಹಳೆಯ ಆಡಿಯೋ ವೈರಲ್ ಆಗಿದೆ.
ತಾವು ಹೇಳಿದಂತೆ ನಡೆದುಕೊಂಡಿಲ್ಲ ಎನ್ನುವ ಕಾರಣಕ್ಕೆ ಕರೆ ಮಾಡಿ ಅಧಿಕಾರಿಗೆ ಅವಾಚ್ಯ ಪದದಿಂದ ನಿಂದಿಸಿದ್ದಾರೆ. ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಆಗಿದ್ದ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಳ್ಳುವ ಭರದಲ್ಲಿ ಅಸಾಂವಿಧಾನಿಕ ಪದಗಳನ್ನು ಬಳಸಿದ್ದಾರೆ. ಇದು ನಾಲ್ಕು ತಿಂಗಳು ಹಿಂದಿನ ಆಡಿಯೋ ಎನ್ನಲಾಗುತ್ತಿದ್ದು, ಈಗ ಅಧಿಕಾರಿ ಕೂಡ ಆ ಹುದ್ದೆಯಲ್ಲಿಲ್ಲ.
ಆಡಿಯೋದಲ್ಲೇನಿದೆ?: 1400 ಕೋಟಿ ರೂ. ಕಾಮಗಾರಿಗೆ ಸಂಬಂಧಿಸಿದ ಬಿಲ್ ಪಾಸ್ ಮಾಡಿರುವ ವಿಚಾರದ ಬಗ್ಗೆ ಮಾತನಾಡಿರುವ ಶಿವನಗೌಡ, ನನ್ನ ಗಮನಕ್ಕೆ ತಾರದೆ ಹೇಗೆ ಬಿಲ್ ಪಾಸ್ ಮಾಡಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಐದು ನಿಮಿಷಗಳ ಅವಧಿ ಇರುವ ಆಡಿಯೋದಲ್ಲಿ, ಅಧಿಕಾರಿ ಮಾತ್ರ ತಾಳ್ಮೆಯಿಂದಲೇ ಪ್ರತ್ಯುತ್ತರ ನೀಡಿದ್ದಾರೆ. ಶಾಸಕ ಬೈಯ್ಯುವಾಗ ಆ ರೀತಿ ಬೈಬೇಡಿ, ಸರಿಯಾಗಿ ಮಾತನಾಡಿ ಎಂದು ಮಾತ್ರ ಪ್ರತಿಕ್ರಿಯಿಸಿದ್ದಾರೆ. ನಾನು ಬಂದು ಕೇವಲ ಒಂದು ತಿಂಗಳಾಗಿದೆ. ನೀವು ಹಿಂದೆ ಸೂಚನೆ ನೀಡಿದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ ಎಂದು ಅಧಿಕಾರಿ ಸಮಜಾಯಿಷಿ ನೀಡಿದರೂ ಶಾಸಕರು ಕೇಳುವ ವ್ಯವಧಾನ ತೋರಿಲ್ಲ.
ಹಿಂದೆ ಕೂಡ ಜಿಲ್ಲಾ ಮಟ್ಟದ ಅಧಿಕಾರಿಯನ್ನು ಇದೇ ರೀತಿ ನಿಂದಿಸಿದ ಪರಿಣಾಮ ದೊಡ್ಡ ವಿವಾದವಾಗಿತ್ತು. ಸರ್ಕಾರಿ ನೌಕರರೆಲ್ಲ ಪ್ರತಿರೋಧ ವ್ಯಕ್ತಪಡಿಸಿ ಆಗ ಉಸ್ತುವಾರಿ ಸಚಿವರಾಗಿದ್ದ ವೆಂಕಟರಾವ್ ನಾಡಗೌಡರಿಗೆ ದೂರು ನೀಡಿದ್ದರು. ಅಧಿಕಾರಿ ಇಂಥ ವಾತಾವರಣದಲ್ಲಿ ನನಗೆ ಕೆಲಸ ಮಾಡಲು ಆಗುವುದಿಲ್ಲ ವರ್ಗಾವಣೆ ಮಾಡುವಂತೆ ಕೋರಿದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.