ಓವರ್‌ಲೋಡ್‌ ಮರಳು ಸಾಗಾಟಕ್ಕಿಲ್ಲ ಕಡಿವಾಣ

1 ವರ್ಷದಲ್ಲಿ 85 ಪ್ರಕರಣ ದಾಖಲುವಾಹನ ಬಿಡಿಸಲು ಪೊಲೀಸರ ಮೇಲೆ ರಾಜಕೀಯ ಮುಖಂಡರ ಒತ್ತಡ

Team Udayavani, Mar 16, 2020, 12:13 PM IST

16-March-7

ದೇವದುರ್ಗ: ರಾಯಲ್ಟಿ ಪಾವತಿಸಿ ಅನುಮತಿ ಪಡೆದದ್ದಕ್ಕಿಂತ ಅಕ್ರಮ ಮತ್ತು ಓವರ್‌ಲೋಡ್‌ ಮರಳು ಸಾಗಾಟಕ್ಕೆ ತಾಲೂಕಿನಲ್ಲಿ ಕಡಿವಾಣ ಇಲ್ಲದಂತಾಗಿದೆ. ತಾಲೂಕಿನ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ, ಸಾಗಾಟ ಎಗ್ಗಿಲ್ಲದೇ ಸಾಗಿದೆ.

ಅಕ್ರಮ ಮರಳು ದಂಧೆ ಕಡಿವಾಣಕ್ಕೆ ಗಣಿ ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆ, ಪೊಲೀಸ್‌, ಪಿಡಬ್ಲ್ಯೂಡಿ ಸೇರಿ ಇತರೆ ಇಲಾಖೆ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಆದರೆ ಪೊಲೀಸ್‌ ಇಲಾಖೆ ಮಾತ್ರ ಅಕ್ರಮ ಮರಳು ಸಾಗಾಟ ತಡೆ ಕಾರ್ಯಾಚರಣೆ ನಡೆಸುತ್ತಿದ್ದು, ಉಳಿದ ಇಲಾಖೆಯವರು ಒಬ್ಬರತ್ತ ಮತ್ತೊಬ್ಬರು ಬೊಟ್ಟು ಮಾಡುತ್ತ ಹೊಣೆಯಿಂದ ನುಣುಚಿಕೊಳ್ಳುತ್ತಿದ್ದಾರೆ.

85 ಪ್ರಕರಣ ದಾಖಲು: ಪೊಲೀಸರು 2019ರ ಜನವರಿಯಿಂದ 2020ರ ಫೆಬ್ರವರಿವರೆಗೆ ಓವರ್‌ ಲೋಡ್‌ ಮರಳು ಸಾಗಾಟದ 85 ಪ್ರಕರಣ ದಾಖಲಿಸಿದ್ದಾರೆ. ದೇವದುರ್ಗ ಠಾಣೆ ವ್ಯಾಪ್ತಿಯಲ್ಲಿ 42, ಜಾಲಹಳ್ಳಿ 26, ಗಬ್ಬೂರು ಪೊಲೀಸ್‌ ಠಾಣೆಯಲ್ಲಿ 21 ಅಕ್ರಮ ಮರಳು ಸಾಗಾಟ, ಓವರ್‌ ಲೋಡ್‌ ಪ್ರಕರಣಗಳು ದಾಖಲಾಗಿವೆ.

ಪ್ರಭಾವಿಗಳ ಒತ್ತಡ: ಪೊಲೀಸರು ಅಕ್ರಮ ಮತ್ತು ಓವರ್‌ ಲೋಡ್‌ ಮರಳು ಸಾಗಿಸುವ ಟಿಪ್ಪರ್‌, ಲಾರಿ, ಟ್ಯಾಕ್ಟರ್‌ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸುತ್ತಿದ್ದಂತೆ ತಾಲೂಕಿನ ಪ್ರಭಾವಿ ರಾಜಕಾರಣಿಗಳು, ಪಕ್ಷಗಳ ಮುಖಂಡರು ಪೊಲೀಸರ ಮೇಲೆ ಒತ್ತಡ ಹೇರಿ ಅವುಗಳನ್ನು ಬಿಡಿಸಿ ಕಳಿಸುತ್ತಿದ್ದಾರೆ. ಹೀಗಾಗಿ ತಾಲೂಕಿನಲ್ಲಿ ಅಕ್ರಮ ಮರಳು ದಂಧೆಗೆ ಕಡಿವಾಣ ಬೀಳದಂತಾಗಿದೆ ಎನ್ನುತ್ತಾರೆ ಅಧಿಕಾರಿಗಳು.

ಪ್ರಾಣಕ್ಕೆ ಕುತ್ತು: ಗ್ರಾಮೀಣ ಭಾಗದಲ್ಲಿ ಮರಳು ಸಾಗಿಸುವ ಟಿಪ್ಪರ್‌, ಟ್ಯಾಕ್ಟರ್‌ಗಳು ವೇಗವಾಗಿ ಸಂಚರಿಸುವುದರಿಂದ ಅಪಘಾತ ಪ್ರಕರಣಗಳು ನಡೆಯುತ್ತಿವೆ. ಚಿಂಚೋಡಿ ಗ್ರಾಮದಲ್ಲಿ ಟಿಪ್ಪರ್‌ ಹಾಯ್ದು ಜಗದೀಶ ಎಂಬವರು ಮೃತಪಟ್ಟಿದ್ದು, ಫೆ.27ರಂದು ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜನವರಿಯಲ್ಲಿ ನಗರಗುಂಡ ಗ್ರಾಮದಲ್ಲಿ ಟ್ಯಾಕ್ಟರ್‌ ಹಾಯ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಜೆ ದಿನದಲ್ಲೂ ಮರಳು ಸಾಗಾಟ: ಕೆಲ ದಿನಗಳ ಹಿಂದೆ ಮಿನಿ ವಿಧಾನಸೌಧ ಸಭಾಂಗಣದಲ್ಲಿ ರಾಯಚೂರು ಸಹಾಯಕ ಆಯುಕ್ತ ಸಂತೋಷ ಕಾಮಗೌಡ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ರವಿವಾರ ಮತ್ತು ಸರ್ಕಾರಿ ರಜೆ ದಿನಗಳಂದು ಮರಳು ಸಾಗಾಣಿಕೆಗೆ ನಿರ್ಬಂಧ ಹೇರುವಂತೆ ಸೂಚಿಸಿದ್ದರು. ಆದರೆ ತಾಲೂಕಿನ ಅಧಿಕಾರಿಗಳು ಈ ಆದೇಶ ಪಾಲನೆಗೆ ಮುಂದಾಗದ್ದರಿಂದ ರಜೆ ದಿನಗಳಲ್ಲೂ ಮರಳು ಸಾಗಾಟ ನಡೆಯುತ್ತಿದೆ.

ನದಿಗೆ ಇಟಾಚಿ ಹಾಗೂ ಟಿಪ್ಪರ್‌ಗಳನ್ನು ಇಳಿಸಿ ಹಗಲು ರಾತ್ರಿ ಎನ್ನದೆ ಮರಳು ಸಂಗ್ರಹಿಸುತ್ತಿದ್ದಾರೆ. ಟಿಪ್ಪರ್‌ಗಳು ಓವರ್‌ ಲೋಡ್‌ ತುಂಬಿಕೊಂಡು ಮರಳು ಸಾಗಿಸುತ್ತಿರುವದರಿಂದ ಗ್ರಾಮೀಣ ರಸ್ತೆಗಳು ಹಾಳಾಗುತ್ತಿವೆ. ಅಧಿಕಾರಿಗಳು ಮರಳು ದಂಧೆಗೆ ಕಡಿವಾಣ ಹಾಕಬೇಕೆಂದು ಕರವೇ ತಾಲೂಕು ಅಧ್ಯಕ್ಷ ಬಸವರಾಜ ಗೋಪಳಾಪುರ ಆಗ್ರಹಿಸಿದ್ದಾರೆ.

ಸಹಾಯಕ ಆಯುಕ್ತರು ತಾಲೂಕು ಕಚೇರಿಗೆ ಭೇಟಿ ನೀಡಿದಾಗ ಅಕ್ರಮ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ಬಂದ ದೂರುಗಳನ್ನು ಗಮನಕ್ಕೆ ತರಲಾಗಿದೆ. ಅಕ್ರಮ ತಡೆಗೆ ಅಧಿಕಾರಿಗಳ ತಂಡ ರಚಿಸಲಾಗುವುದು.
ಮಧುರಾಜ್‌,
ತಹಶೀಲ್ದಾರ್‌

ಅಕ್ರಮ ಮರಳು ಮತ್ತು ಓವರ್‌ ಲೋಡ್‌ ಮರಳು ಸಾಗಾಟ ಕುರಿತು ಈಗಾಗಲೇ 80ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬಂದೋಬಸ್ತ್ ಜೊತೆಗೆ ಅಕ್ರಮಕ್ಕೆ ಕಡಿವಾಣ ಹಾಕಲು ಪೊಲೀಸ್‌ ಇಲಾಖೆ ಮುಂದಾಗಿದೆ.
ಆರ್‌.ಎಂ. ನದಾಫ್‌,
ಸಿಪಿಐ ದೇವದುರ್ಗ

ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.