ವಿನಾಯಿತಿ ವೇಳೆ ಮಿತಿಮೀರಿದ ಓಡಾಟ


Team Udayavani, Apr 30, 2021, 4:04 PM IST

ಯಗ್ತ

ರಾಯಚೂರು: ಕೊರೊನಾ ಕರ್ಫ್ಯೂ ಎರಡನೇ ದಿನವೂ ಜನ ಹೊರಗೆ ಬರುವುದನ್ನು ನಿಲ್ಲಿಸದ ಕಾರಣ ಪೊಲೀಸರು ಕಠಿಣ ಕ್ರಮ ಕೈಗೊಳ್ಳುವ ಮೂಲಕ ಎಚ್ಚರಿಕೆ ನೀಡಿದರು. ಅನಗತ್ಯವಾಗಿ ಓಡಾಡಿದ ಆಟೋಗಳನ್ನು ಸೀಜ್‌ ಮಾಡಿದರೆ, ಬೈಕ್‌ ಸವಾರರಿಗೆ ದಂಡದ ಬರೆ ಬಿದ್ದವು. ನಗರದ ಅಂಬೇಡ್ಕರ್‌ ವೃತ್ತದಲ್ಲಿ ಅಖಾಡಕ್ಕಿಳಿದ ಪೊಲೀಸರು ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದರು.

ಸುಖಾಸುಮ್ಮನೆ ಪ್ರಯಾಣಿಕರನ್ನು ಹೊತ್ತೂಯ್ಯುತ್ತಿದ್ದ ಆಟೋಗಳನ್ನು ವಶಕ್ಕೆ ಪಡೆದರು. ಈ ವೇಳೆ ಆಟೋ ಚಾಲಕರು ಪೊಲೀಸರ ಜತೆ ವಾಗ್ವಾದಕ್ಕಿಳಿದ ಪ್ರಸಂಗ ಕೂಡ ನಡೆಯಿತು. ಪ್ರಯಾಣಿಕರನ್ನು ಕರೆದೊಯ್ಯಲು, ತುರ್ತು ಕೆಲಸಕ್ಕೆ ಕರೆದೊಯ್ಯಲು ಅವಕಾಶ ನೀಡಲಾಗಿದೆ. ಹೀಗಾಗಿ ಆಟೋ ಓಡಿಸುತ್ತಿದ್ದೇವೆ ಎಂದು ಚಾಲಕರು ತಿಳಿಸಿದರು.

ಆದರೆ, ತುರ್ತು ಸಂದರ್ಭದಲ್ಲಿ ಮಾತ್ರ ಕರೆದೊಯ್ಯಬೇಕು. ಅದಕ್ಕೂ ದಾಖಲೆ ನೀಡಬೇಕು. ಹೀಗೆ ಹಗಲಿರುಳು ಓಡಾಡಲು ಅವಕಾಶ ಇಲ್ಲ ಎಂದು ಪೊಲೀಸರು ಪ್ರತಿ ಆಟೋಕ್ಕೆ 500 ದಂಡ ವಿ ಧಿಸಿದರು. ಅಲ್ಲದೇ, ಮತ್ತೆ ಇದು ಮರುಕಳಿಸಿದರೆ, ಆಟೋಗಳನ್ನು ಸೀಜ್‌ ಮಾಡುವುದಾಗಿ ಎಚ್ಚರಿಸಿದರು. ಅನಗತ್ಯವಾಗಿ ಓಡಾಡಿದ ಬೈಕ್‌ ಸವಾರರಿಗೂ ಪೊಲೀಸರು ದಂಡದ ಬಿಸಿ ಮುಟ್ಟಿಸಿದರು. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ಗಂಟೆವರೆಗೆ ನೀಡಿದ ವಿನಾಯಿತಿ ವೇಳೆಯ ಜನರ ಓಡಾಟ ಹೆಚ್ಚಾಗುತ್ತಿದೆ. ಈ ವೇಳೆ ಯಾರನ್ನು ತಡೆಯುವ ಗೋಜಿಗೆ ಹೋಗದ ಪೊಲೀಸರು 10 ಗಂಟೆ ನಂತರವೇ ಜನರನ್ನು ಚದುರಿಸಲು ಮುಂದಾಗುತ್ತಿದ್ದಾರೆ. ಇದರಿಂದ ವಿನಾಯಿತಿ ಸಮಯ 10ರಿಂದ 11 ಗಂಟೆವರೆಗೂ ಹೋಗುತ್ತಿದೆ.

ತೀರ ಅನಿವಾರ್ಯದ ಕೆಲಸಗಳಿಗೆ ಮಾತ್ರ ಹೊರಬರುವಂತೆ ತಿಳಿಸಿದಾಗ್ಯೂ ತೆರೆಮರೆಯಲ್ಲಿ ಎಲ್ಲ ರೀತಿಯ ವಹಿವಾಟು ನಡೆಯುತ್ತಿದೆ. ಅರ್ಧ ಶೆಟರ್‌ ತೆಗೆದು ವ್ಯಾಪಾರ-ವಹಿವಾಟು ನಡೆಸುವವರ ಸಂಖ್ಯೆ ಹೆಚ್ಚಾಗಿದೆ. ಈಗಾಗಲೇ ಕೆಲ ಅಂಗಡಿಗಳ ಮಾಲೀಕರ ವಿರುದ್ಧ ಪ್ರಕರಣ ಬೇರೆಯವರು ಎಚ್ಚೆತ್ತಂತೆ ಕಾಣಿಸುತ್ತಿಲ್ಲ. ತರಕಾರಿ ಮಾರುಕಟ್ಟೆ, ಹೂ ಹಣ್ಣು, ದಿನಸಿ, ಪಟೇಲ್‌ ರಸ್ತೆ ಸೇರಿದಂತೆ ಇತರ ಕಡೆ ಬೆಳಗ್ಗೆ ಜನಸಂಚಾರ ಹೆಚ್ಚಾಗಿತ್ತು. ಗ್ರಾಮೀಣ ಭಾಗದ ಜನ ಕೂಡ ಬೆಳ್ಳಂಬೆಳಗ್ಗೆಯೇ ನಗರಗಳತ್ತ ಮುಖ ಮಾಡುತ್ತಿದ್ದು, 10 ಗಂಟೆಗೆಲ್ಲ ಕೆಲಸ ಮುಗಿಸಿಕೊಂಡು ಹಿಂದಿರುಗುತ್ತಿದ್ದಾರೆ.

ಕಚೇರಿ ಕೆಲಸಗಳು ಎಂದಿನಂತೆ ನಡೆಯುತ್ತಿದ್ದರೂ ಪೊಲೀಸರಿಗೆ ಸೂಕ್ತ ದಾಖಲೆ ನೀಡಬೇಕಿರುವ ಕಾರಣ ಜನ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಬಹುತೇಕ ಸರ್ಕಾರಿ ಕಚೇರಿಗಳು ಜನರಿಲ್ಲದೇ ಭಣ ಭಣ ಎನ್ನುತ್ತಿವೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.