ಅಮರೇಶ್ವರ ನಾಯಕ ವಿರುದ್ಧ ಸುಳ್ಳು ಜಾತಿ ಪ್ರಮಾಣಪತ್ರ ದೂರು ದಾಖಲು
Team Udayavani, Apr 6, 2024, 12:19 AM IST
ರಾಯಚೂರು: ರಾಯಚೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ಶಾಲಾ ದಾಖಲೆಗಳಲ್ಲಿ ಹಿಂದೂ ಕ್ಷತ್ರಿಯ ಎಂದು ನಮೂದಿಸಿದ್ದು, ಪರಿಶಿಷ್ಟ ಪಂಗಡ ಮೀಸಲಾತಿಯಡಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಚುನಾವಣೆಗೆಸ್ಪರ್ಧಿಸಿದ್ದಾರೆ ಎಂದು ಲಿಂಗಸುಗೂರು ತಹಶೀಲ್ದಾರ್ಗೆ ಮಾನ್ವಿ ತಾಲೂಕಿನ ಕರಡಿಗುಡ್ಡ ಗ್ರಾಮದ ನರಸಿಂಹ ನಾಯಕ ದೂರು ನೀಡಿದ್ದಾರೆ.
ರಾಜಾ ಅಮರೇಶ್ವರ ನಾಯಕ ಶಾಲಾ ದಾಖಲೆಗಳಲ್ಲಿ ಹಿಂದೂ ಕ್ಷತ್ರಿಯ ಎಂದು ದಾಖಲಿಸಿದ್ದು, ಪರಿಶಿಷ್ಟ ಪಂಗಡದಲ್ಲಿ ಕ್ಷತ್ರಿಯ ಎಂಬ ಉಪಜಾತಿ ಇಲ್ಲ. ಹೀಗಾಗಿ ಅವರು ಎಸ್ಟಿ ಮೀಸಲಾತಿ ಸೌಲಭ್ಯ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.
ಆದರೆ ಈ ಆರೋಪವನ್ನು ತಳ್ಳಿ ಹಾಕಿರುವ ರಾಜಾ ಅಮರೇಶ್ವರ ನಾಯಕ, ಚುನಾವಣೆ ಮುನ್ನ ಇಂಥ ಆರೋಪಗಳು ಬರುವುದು ಸಹಜ. ಹಿಂದೆಯೂ ಇಂಥ ಆರೋಪಗಳು ಬಂದಾಗ ಆಡಳಿತ, ನ್ಯಾಯಾಲಯ ತಳ್ಳಿ ಹಾಕಿದೆ ಎಂದಿದ್ದಾರೆ.
ಅವರು ಬಾರಿ ಶಾಸಕರಾಗಿ ಹಾಗೂ ಸಚಿವರಾಗಿ, ಒಂದು ಅವಧಿಗೆ ಸಂಸದರೂ ಆಗಿದ್ದರು. ಹಿಂದೆಯೂ ಅವರ ವಿರುದ್ಧ ಜಾತಿ ಪ್ರಮಾಣಪತ್ರ ದುರ್ಬಳಕೆ ದೂರು ಕೇಳಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hospital: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗಾಗಿ ಕೇಂದ್ರಕ್ಕೆ ಮನವಿ: ಸಚಿವ ಡಾ. ಶರಣಪ್ರಕಾಶ
Raichuru: ಅಪಘಾತದಲ್ಲಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ: ಸಿಎಂ ಸಿದ್ದರಾಮಯ್ಯ
Manvi: ಶಾಲಾ ಬಸ್- ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು
Muda Case: ಮುಡಾ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ
Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.