Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

ಆಹಾರಕ್ಕಾಗಿ ಚಿಗರೆಗಳ ಹೋರಾಟ: ಅನ್ನದಾತರಿಗೆ ಪ್ರಾಣ ಸಂಕಟ

Team Udayavani, Jun 22, 2024, 8:26 PM IST

Manvi ಚಿಗರೆಗಳ ಹಿಂಡಿಗೆ ಆತಂಕಗೊಂಡ ರೈತರು

ಮಾನ್ವಿ:ತಾಲೂಕಿನ ವಿವಿಧ ಗ್ರಾಮಗಳಲ್ಲಿ ರೈತರು ಬಿತ್ತನೆ ನಡೆಸಿದ ಬೆಳೆಯ ಜಮೀನಿನಲ್ಲಿ ಚಿಗರೆಗಳು ಬಂದು ಚಿಗುರುತ್ತಿರುವ ಪೈರನ್ನು ತಿನ್ನುವ ಮೂಲಕ ರೈತರಿಗೆ ನಷ್ಟವನ್ನುಂಟು ಮಾಡುತ್ತಿವೆ ರೈತರು ಸಾವಿರಾರು ರೂ ವೆಚ್ಚಮಾಡಿ ಬಿತ್ತನೆ ಮಾಡಿದ ಬೀಜಗಳು ಮೊಳಕೆಯೋಡೆದು ಹೊರಬಂದ ಕೂಡಲೆ ಚಿಗರೆಗಳು ತಿನ್ನುತ್ತಿರುವುದರಿಂದ ರೈತರು ತಮ್ಮ ಹೊಲಗಳಲ್ಲಿಯೇ ಇದ್ದು ತಮ್ಮ ಬೆಳೆಯನ್ನು ಚಿಗರೆಗಳಿಂದ ರಕ್ಷಿಸಿಕೊಳ್ಳುವುದಕ್ಕೆ ಕಾಯಬೇಕಾದ ಪರಿಸ್ಥಿತಿ ಇದೆ.

ತಾಲೂಕಿನ ಹಿರೆಕೋಟ್ನೆಕಲ್,ಮುಸ್ಟೂರು ಭಾಗದಿಂದ ಕಲ್ಲೂರು ವರೆಗೂ ಚಿಗರೆಗಳು ಗುಂಪುಗಳಾಗಿ ಸಂಚಾರಿಸುತ್ತವೆ ಪ್ರತಿಗುಂಪಿನಲ್ಲಿಯು 7ರಿಂದ 8 ಚಿಗರೆಗಳು ಹಾಗೂ ಒಂದು ಗಂಡು ಕೃಷ್ಣ ಮೃಗ ಇರುತ್ತವೆ.

ಒಮ್ಮೆ ಬಂದಲ್ಲಿ 8ರಿಂದ 10 ಚಿಗರೆಗಳು ಜಮೀನಿನಲ್ಲಿನ ಬೆಳೆಯನ್ನು ತಿಂದು ನಾಶ ಮಾಡುವುದರಿಂದ ವನ್ಯ ಪ್ರಾಣಿ ಹಾಗೂ ಮಾನವರ ನಡುವೇ ಸಂಘರ್ಷ ಉಂಟಾಗುತ್ತಿದೆ.

ಬರಗಾಲದಿಂದ ತತ್ತರಿಸಿದ ರೈತರು ಮುಂಗಾರು ಮಳೆ ಉತ್ತಮವಾಗಿ ಬಂದಿದ್ದರಿಂದ ಭೂಮಿಯನ್ನು ಹಾದ ಮಾಡಿ ಹತ್ತಿ,ಜೋಳ ಸಜ್ಜೆ,ಸೇರಿದಂತೆ ಇತರ ಬೆಳೆಗಳನ್ನು ಬೆಳೆಯುವುದಕ್ಕೆ ಬೀಜವನ್ನು ಬಿತ್ತನೆ ಮಾಡಿದ್ದು ಮಳೆ ಬಂದಿರುವುದರಿಂದ ಭೂಮಿಯಲ್ಲಿ ತೇವಾಂಶದಿಂದಾಗಿ ಉತ್ತಮ ಪ್ರಮಾಣದಲ್ಲಿ ಮೊಳಕೆಬಂದಿದ್ದು ಸಸಿಯಲ್ಲಿ ಎರಡು ಎಲೆಗಳು ಮೂಡಿದ್ದು ಚಿಗರೆಗಳು ಸಸಿಯನ್ನು ತಿಂದು ಹಾಳುಮಾಡುತ್ತಿರುವುದರಿಂದ ಜಮೀನಿನ ಎಲ್ಲಾ ಭಾಗದಲ್ಲಿಯು ಸಸಿಗಳು ಸಮರ್ಪಕವಾಗಿ ಬೆಳೆಯದೆ ರೈತರಿಗೆ ಇಳುವರಿಯಲ್ಲಿ ನಷ್ಟವಾಗಲಿದೆ.

ಜಗನ್ನಾಥ ಚೌದ್ರಿ ಛಾಯಗ್ರಾಹಕ ಮಾತನಾಡಿ ಮುಸ್ಟೂರು ಭಾಗದಲ್ಲಿನ ಹಳ್ಳ ಹಾಗೂ ಸುತ್ತಮುತ್ತಲಿನ ಜಮೀನುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಿಗರೆಗಳಿದ್ದು ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಹೆಚ್ಚಾಗಿ ಹೊರಬರುತ್ತವೆ ಚಿಗರೆಗಳು ಓಡುವುದು, ನೇಗೆಯುವುದು ನೋಡುವುದಕ್ಕೆ ಆನಂದವಾಗುತ್ತದೆ ಎನ್ನುತ್ತಾರೆ.

ಮಾನ್ವಿ ತಾ.ವಲಯ ಅರಣ್ಯಾಧಿಕಾರಿ ಸುರೇಶ ಅಲ್ಲಮೇಲು ಮಾತನಾಡಿ, ಚಿಗರೆಗಳು ವನ್ಯ ಪ್ರಾಣಿಗಳಾಗಿದ್ದು ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಚಿಗರೆಗಳಿಗೆ ಅವಶ್ಯವಾಗಿ ಆಹಾರ ದೊರೆಯುತ್ತಿರುವುದರಿಂದ ಅವುಗಳು ಬೆಳೆಗಳನ್ನು ನಾಶ ಮಾಡುವುದು ಕಡಿಮೆ. ವನ್ಯಪ್ರಾಣಿಗಳ ಮೇಲೆ ಹಲ್ಲೆ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದ್ದು ರೈತರು ವನ್ಯಜೀವಿಗಳಿಂದ ಬೆಳೆಗೆ ಹಾನಿಯಾದಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರಣ್ಯ ಇಲಾಖೆಗೆ ಅರ್ಜಿ ಸಲ್ಲಿಸಿ ಪರಿಹಾರವನ್ನು ಪಡೆಯಬಹುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski: ಹಾಡಹಗಲೇ ಕಳ್ಳರ ಕೈಚಳಕ; ಚಿನ್ನ , ನಗದು ಕಳ್ಳತನ

Maski: ಹಾಡಹಗಲೇ ಕಳ್ಳರ ಕೈಚಳಕ; ಚಿನ್ನ , ನಗದು ಕಳ್ಳತನ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

Raichur; Family’s opposition to love;  young woman jumped from building

Raichur; ಪ್ರೀತಿಗೆ ಮನೆಯವರ ವಿರೋಧ; ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಚಾಲನೆ

Raichur: ಮುಂಗಾರು ಸಾಂಸ್ಕೃತಿಕ ಹಬ್ಬಕ್ಕೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚಾಲನೆ

12-manwi

Yoga Day: ಗಾಂಧಿ ಸ್ಮಾರಕ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.