ಗೊಲ್ಲಪಲ್ಲಿ ಜಲವಿದ್ಯುತ್‌ ಯೋಜನೆ ಕೈಬಿಡಲು ಆಗ್ರಹ


Team Udayavani, Feb 14, 2022, 2:40 PM IST

16power

ಲಿಂಗಸುಗೂರು: ತಾಲೂಕಿನ 15 ಹಳ್ಳಿಗಳ ಮನೆಗಳಿಗೆ ಬೆಂಕಿ ಹಚ್ಚಿ ಅದರಿಂದ ಮಾನಪ್ಪ ವಜ್ಜಲ್‌ ತಮ್ಮ ಮನೆ ಬೆಳೆಸಿಕೊಳ್ಳಲು ಹೊರಟಿದ್ದಾರೆ. ರೈತರಿಗೆ ಬೇಡವಾದ ಗೊಲ್ಲಪಲ್ಲಿ ಜಲ ವಿದ್ಯುತ್‌ ಯೋಜನೆ ಕೈಬಿಡಲು ಶೀಘ್ರವೇ ಹೋರಾಟ ಮಾಡಲಾಗುವುದು ಎಂದು ಜೆಡಿಎಸ್‌ ಮುಖಂಡ ಸಿದ್ದು ಬಂಡಿ ಹೇಳಿದರು.

ಪಟ್ಟಣದ ಜೆಡಿಎಸ್‌ ಕಚೇರಿಯಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್‌ ಅವರು 15 ಹಳ್ಳಿಗಳ 14 ಸಾವಿರ ಹೆಕ್ಟೇರ್‌ ಪ್ರದೇಶ ನಾಶ ಮಾಡಲು ಗೊಲ್ಲಪಲ್ಲಿ ಜಲ ವಿದ್ಯುತ್‌ ಯೋಜನೆ ಜಾರಿಗೆ ತರಲು ಶತ ಪ್ರಯತ್ನ ನಡೆಸಿದ್ದಾರೆ. ಇದು ರೈತರಿಗೆ ಲಾಭವಿಲ್ಲ. ಆದರೆ ಮಾನಪ್ಪ ವಜ್ಜಲ್‌ ಅವರ ಮನೆ ತುಂಬುವ ಯೋಜನೆಯಾಗಿದೆ. 8 ಸಾವಿರ ಕೋಟಿ ರೂ. ವೆಚ್ಚದಲ್ಲಿ ಜಲ ವಿದ್ಯುತ್‌ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಪರವಾನಗಿ ಪಡೆಯಲು ಮಾನಪ್ಪ ವಜ್ಜಲ್‌ ಈಗಾಗಲೇ ದೆಹಲಿಗೆ ತಿರುಗಾಡುತ್ತಿದ್ದಾರೆ. ಈ ಯೋಜನೆ ಜಾರಿಯಾಗಲು ನಾನು ಬಿಡೋಲ್ಲ. ರೈತರೊಂದಿಗೆ ಹೋರಾಟ ಮಾಡುವೆ. ಇದುಲ್ಲದೆ ನಮ್ಮ ನಾಯಕರಾದ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದರು.

ಜೆಡಿಎಸ್‌ ಪಕ್ಷದಿಂದ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಪ್ರತಿ ಬೂತ್‌ ಮಟ್ಟದಿಂದ ಪಕ್ಷ ಬಲಪಡಿಸುವ ಕೆಲಸ ನಡೆಯುತ್ತಿದೆ. ಪ್ರತಿ ಬೂತ್‌ನಲ್ಲಿ 25 ಜನ ಸದಸ್ಯರನ್ನು ಮಾಡಿ ಪಕ್ಷ ಸಂಘಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು.

ಜೆಡಿಎಸ್‌ ಹಿರಿಯ ಮುಖಂಡ ಮಹಾಂತೇಶ ಪಾಟೀಲ್‌ ಅತ್ನೂರು ಮಾತನಾಡಿ, 15 ವರ್ಷ ಕ್ಷೇತ್ರದಲ್ಲಿ ಆಡಳಿತವೇ ಇಲ್ಲದಂತಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಸಿದ್ದು ಬಂಡಿ ಅವರು ಸ್ವಲ್ಪ ಮತಗಳ ಅಂತರದಿಂದ ಸೋತಿದ್ದಾರೆ. ಆದರೆ, ಕಳೆದ ಚುನಾವಣೆ ಆಗಿರುವ ತಪ್ಪುಗಳನ್ನು ಮುಂದಿನ ಚುನಾವಣೆಯಲ್ಲಿ ಸರಿಪಡಿಸಿಕೊಂಡು ಗೆಲುವು ಸಾಧಿಸುವತ್ತ ಕಾರ್ಯಕರ್ತರು ಗಟ್ಟಿಯಾಗಬೇಕು. ನಾರಾಯಣಪುರ ಬಲದಂಡೆ ಯೋಜನೆ ಜಾರಿಯಲ್ಲಿ ಎಚ್‌.ಡಿ. ದೇವೇಗೌಡ ಕೊಡುಗೆ ಅಪಾರವಾಗಿದೆ. ರಾಷ್ಟ್ರೀಯ ಪಕ್ಷಗಳನ್ನು ದಿಕ್ಕರಿಸಿ ಜನ ಪ್ರಾದೇಶಿಕ ಪಕ್ಷಗಳ ಒಲವು ತೋರಿಸುತ್ತಿದ್ದಾರೆ. ಮುಂದೆ ಜೆಡಿಎಸ್‌ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದರು.

ಜೆಡಿಎಸ್‌ ಕಲ್ಯಾಣ ಕರ್ನಾಟಕದ ಉಸ್ತುವಾರಿ ಕೆ.ಕರಿಯಮ್ಮ ನಾಯಕ, ಮುತ್ತಮ್ಮ, ಕೆ.ನಾಗಭೂಷಣ, ಸುನೀತಾ ಕೆಂಭಾವಿ, ಬಸವರಾಜ ಮಾಕಾಪುರ, ಅಮೀರ್‌ ಬೇಗ್‌ ಉಸ್ತಾದ್‌, ರೇಣುಕಾ ಇದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.