ಜಲಾಶಯಗಳ ನೀರು ಸದ್ಬಳಕೆಗೆ ಸರ್ಕಾರದ ಸಂಕಲ್ಪ: ಡಿಕೆಶಿ


Team Udayavani, Aug 16, 2018, 3:46 PM IST

Child-Investment-chart-600_0.jpg

ಹೊಸಪೇಟೆ: ರಾಜ್ಯದ ಜಲಾಶಯಗಳ ಒಂದು ಹನಿ ನೀರು ಕೂಡ ನಿರುಪಯುಕ್ತವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸಂಕಲ್ಪ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದರು.

ಸಮೀಪದ ಟಿ.ಬಿ.ಡ್ಯಾಂನಲ್ಲಿ ಬುಧವಾರ ಸಂಜೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷಕ್ಕೂ ಅಧಿಕ ನೀರು ಹೊರ ಹೋಗುತ್ತಿದೆ. ಪ್ರತಿ ಹನಿ ನೀರು ಉಪಯೋಗವಾಗಬೇಕು ಎಂಬ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಈ ಕುರಿತಂತೆ ಈಗಾಗಲೇ 210ಕ್ಕೂ ಹೆಚ್ಚು ದೇಶಿ ವಿದೇಶಿಯರು ಹಾಗೂ ಸ್ಥಳೀಯರಿಂದ ಸಲಹೆ ಸೂಚನೆ ಪಡೆಯಲಾಗಿದೆ. ಅವರ ಸಲಹೆಯನ್ವಯ ಸರ್ಕಾರ ಕಾರ್ಯಕ್ರಮ ರೂಪಿಸಲಿದೆ ಎಂದರು.

ತುಂಗಭದ್ರಾ ಜಲಾಶಯದಲ್ಲಿ 30 ಟಿಎಂಸಿ ಗೂ ಅಧಿಕ ಹೂಳು ತುಂಬಿದ್ದು, ಇದರಿಂದ ಹೆಚ್ಚುವರಿ ನೀರು ನಿರುಪಯುಕ್ತವಾಗಿ
ಸಮುದ್ರ ಸೇರುತ್ತಿದೆ. ಈ ಬಗ್ಗೆ ತಜ್ಞರಿಂದ ವರದಿ ಪಡೆಯಲಾಗಿದೆ. ಸಮಾನಾಂತರ ಜಲಾಶಯಗಳ ನಿರ್ಮಾಣ ಕುರಿತು ಚಿಂತನೆ ನಡೆಸಲಾಗುತ್ತಿದೆ. ಸ್ಥಳಗಳ ಪರಿಶೀಲನೆ ನಡೆಸಲಾಗಿದೆ ಎಂದರು.

ಮಹದಾಯಿ ತೀರ್ಪು ಸಮಾಧಾನ ತಂದಿಲ್ಲ. ರಾಜ್ಯಕ್ಕೆ ನ್ಯಾಯ ಒದಗಿಸಿಲ್ಲ. ನಮ್ಮ ಪಾಲು ನಮಗೆ ಸಿಕ್ಕಿಲ್ಲ. 34 ಟಿಎಂಸಿ ನೀರು ಕೇಳಲಾಗಿತ್ತು. ಆದರೆ 13.5 ಟಿಎಂಸಿ ನೀರು ಮಾತ್ರ ನೀಡಲಾಗಿದೆ. ಕುಡಿಯಲು ಮಾತ್ರ 9.5 ಟಿಎಂಸಿ ನೀರು ನೀಡಿದ್ದಾರೆ. ವಿದ್ಯುತ್‌ ಬಳಕೆಗೆ 8 ಟಿಎಂಸಿ ಮಾತ್ರ ನೀಡಲಾಗಿದೆ. ಆದರೆ ವಿರೋಧ ಪಕ್ಷದ ನಾಯಕ ಬಿ.ಎಸ್‌.ಯಡಿಯೂರಪ್ಪ ಉತ್ತಮ ತೀರ್ಪು ಎಂದು ಬಿಂಬಿಸಲು ಹೊರಟಿದ್ದಾರೆ.

ಈ ಕುರಿತು ಜನಪ್ರತಿನಿಧಿಗಳು ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸರ್ಕಾರ ಹೋರಾಟ ನಡೆಸಲಿದೆ ಎಂದರು. ಸಣ್ಣ ನೀರಾವರಿ ಸಚಿವ ವೆಂಕಟರಾವ್‌ ನಾಡಗೌಡ, ಅರಣ್ಯ ಸಚಿವ ಶಂಕರ್‌, ಸಂಸದ ಕರಡಿ ಸಂಗಣ್ಣ, ಶಾಸಕರಾದ ಆನಂದ್‌ಸಿಂಗ್‌, ಬಿ.ನಾಗೇಂದ್ರ, ಈ. ತುಕಾರಾಂ, ಜೆ.ಎನ್‌. ಗಣೇಶ, ಭೀಮಾನಾಯ್ಕ, ರಾಘವೇಂದ್ರ ಹಿಟ್ನಾಳ್‌, ಅಮರೇಗೌಡ ಬಯ್ನಾಪುರ, ಪ್ರತಾಪ್‌ ಗೌಡ ಪಾಟೀಲ್‌, ಜಿಲ್ಲಾಧಿಕಾರಿ ಡಾ.ರಾಮ್‌ ಪ್ರಸಾತ್‌ ಮನೋಹರ್‌, ಕೊಪ್ಪಳ ಡಿಸಿ ಪಿ.ಸುನೀಲ್‌ ಕುಮಾರ್‌, ಸಹಾಯಕ ಆಯುಕ್ತರಾದ ಗಾರ್ಗಿ ಜೈನ್‌, ತಹಶೀಲ್ದಾರ್‌ ಎಚ್‌.ವಿಶ್ವನಾಥ ಸೇರಿದಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan

Renukaswamy Case: ಏನೋ ಮಾಡಲು ಹೋಗಿ ಇನ್ನೇನೋ ಆಗಿ ಹೋಯ್ತು: ದರ್ಶನ್‌ ಪಶ್ಚಾತ್ತಾಪ

Siruguppa ಸಾವಿನ ಹೆದ್ದಾರಿಯಾದ ರಾಷ್ಟ್ರೀಯ ಹೆದ್ದಾರಿ 150ಎ

Siruguppa ಸಾವಿನ ಹೆದ್ದಾರಿಯಾದ ರಾಷ್ಟ್ರೀಯ ಹೆದ್ದಾರಿ 150ಎ

Vijayanagara Srikrishna Devaraya University Convocation; Honorary doctorates to three including Umashree

Vijayanagara: ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವ; ಉಮಾಶ್ರೀ ಸೇರಿ ಮೂವರಿಗೆ ಗೌ.ಡಾಕ್ಟರೇಟ್

Bellary; ದರ್ಶನ್‌ ರನ್ನು ನೋಡಬೇಕು, ಅವರನ್ನು ಮದುವೆಯಾಗುತ್ತೇನೆಂದು ಪಟ್ಟು ಹಿಡಿದ ಮಹಿಳೆ

Bellary; ದರ್ಶನ್‌ ರನ್ನು ನೋಡಬೇಕು, ಅವರನ್ನು ಮದುವೆಯಾಗುತ್ತೇನೆಂದು ಪಟ್ಟು ಹಿಡಿದ ಮಹಿಳೆ

1-d-boss

Bellary Jail; ಪತ್ನಿಯೊಂದಿಗೆ 5 ನಿಮಿಷ ಮಾತನಾಡಿದ ದರ್ಶನ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.