ಮಸ್ಕಿಯಲ್ಲಿ ಸರಕಾರಿ ಜಮೀನೇ ಒತ್ತುವರಿ!

ಭೂಮಾಪನ ಇಲಾಖೆ ಸರ್ವೇ ಬಳಿಕ ಪತ್ತೆ ; ಭೂಮಿ ವಾಪಸ್‌ ಪಡೆದ ಕಂದಾಯ ಇಲಾಖೆ ಅಧಿಕಾರಿಗಳು

Team Udayavani, Sep 5, 2021, 4:33 PM IST

ಮಸ್ಕಿಯಲ್ಲಿ ಸರಕಾರಿ ಜಮೀನೇ ಒತ್ತುವರಿ!

ಮಸ್ಕಿ: ಪ್ರಭಾವಿ ವ್ಯಕ್ತಿಗಳಿಂದಲೇ ಒತ್ತುವರಿಯಾಗಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಸರಕಾರಿ ಭೂಮಿಯನ್ನು ಅಧಿಕಾರಿಗಳು ವಾಪಸ್‌ ಪಡೆದು
ಹದ್ದುಬಸ್ತ್ ಮಾಡಿಕೊಂಡಿದ್ದಾರೆ.

ಹೌದು. ಮೆದಕಿನಾಳ, ಚಿಕ್ಕಅಂತರಗಂಗಿ ವ್ಯಾಪ್ತಿಯಲ್ಲಿ ಹತ್ತಾರು ಎಕರೆ ಸರಕಾರಿ ಗೈರಾಣಿ ಜಮೀನು ಇದ್ದು, ಇಲ್ಲಿ ಹಲವು ಪ್ರಭಾವಿಗಳು
ಜಮೀನನ್ನು ಒತ್ತುವರಿ ಮಾಡಿಕೊಂಡು ಪಟ್ಟಾ ಭೂಮಿಯಾಗಿಸಿಕೊಳ್ಳಲು ಹುನ್ನಾರ ನಡೆಸಿದ್ದರು. ಈ ಬಗ್ಗೆ ಕರ್ನಾಟಕ ರೈತ ಸಂಘ ಇತ್ತೀಚೆಗೆ ತಹಶೀಲ್ದಾರ್‌ಗೆ ದೂರು ನೀಡಿದ್ದರು. ಈ ದೂರಿನನ್ವಯ ಕಂದಾಯ ಇಲಾಖೆ ಅ ಧಿಕಾರಿಗಳು ಸ್ಥಾನಿಕ ಪರಿಶೀಲನೆ ನಡೆಸಿ, ಪಂಚನಾಮೆ ನಡೆಸಿದ ಬಳಿಕ ಮೇಲ್ನೋಟಕ್ಕೆ ಸರಕಾರಿ ಭೂಮಿ ಒತ್ತುವರಿಯಾಗಿದ್ದು ಕಂಡು ಬಂದಿತ್ತು. ನಿಖರ ಮಾಹಿತಿಗಾಗಿ ಭೂಮಾಪನ ಇಲಾಖೆಯಿಂದ ಸರ್ವೇ ಮಾಡಲಾಗಿದ್ದು, ಸರ್ವೇ ನಂ.125ರಲ್ಲಿನ ಸರಕಾರಿ ಜಮೀನಿನಲ್ಲಿ 1.36 ಎಕರೆ ಜಮೀನು ಒತ್ತುವರಿಯಾದ ಅಂಶ ಬಯಲಿಗೆ ಬಂದಿದೆ.

ಆಗಿದ್ದೇನು?: ಮಸ್ಕಿ ಪಟ್ಟಣದ ಖ್ಯಾತ ವೈದ್ಯರಿಗೆ ಸೇರಿದ ಪಟ್ಟಾ ಜಮೀನು ಮೆದಕಿನಾಳ ಸೀಮಾ ವ್ಯಾಪ್ತಿಯಲ್ಲಿ ಸೇರಿದೆ. ಆ ವೈದ್ಯರಿಗೆ ಸೇರಿದ 12 ಎಕರೆ ಜಮೀನಿದ್ದು, ಇದೇ ಜಮೀನಿನ ಗಡಿಗೆ ಹೊಂದಿಕೊಂಡಂತೆ ಇರುವ 1.36 ಎಕರೆ ಸರಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ಸುತ್ತಲೂ ತಂತಿ ಬೇಲಿ ಹಾಕಿ, ಗಿಡಮರ ಬೆಳೆಸಲು ಹಾಕಲು ಗುಂಡಿ ತೋಡಲಾಗಿತ್ತು. ಕಂದಾಯ ಇಲಾಖೆ ಅಧಿ ಕಾರಿಗಳ ಪರಿಶೀಲನೆ ಬಳಿಕ ಈ ಅಂಶ ಪತ್ತೆಯಾಗುತ್ತಿದ್ದಂತೆ ನೋಟಿಸ್‌ ಜಾರಿ ಮಾಡಿ, ಒತ್ತುವರಿ ಜಮೀನು ತೆರವುಗೊಳಿಸಿ ಕಂದಾಯ ಇಲಾಖೆ ವಶಕ್ಕೆ ಪಡೆದಿದೆ ಅಲ್ಲದೇ ಸುತ್ತಲೂ ಹಾಕಿದ್ದ ಬಾಂಡ್‌ಕಲ್ಲು, ತಂತಿ ಬೇಲಿ ತೆರವು ಮಾಡಿ, ಸಸಿ ನೆಡಲು ಅಗೆದ ಗುಂಡಿಗಳನ್ನು ಮುಚ್ಚಿ, ಹದ್ದುಬಸ್ತು ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ:ಎಸ್.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಅಕ್ಷತ್ ಸಾಯಿನಾಥ್ ಅವರಿಗೆ ಸನ್ಮಾನ

ಇದು ಸ್ಯಾಂಪಲ್‌?
ಮಸ್ಕಿ ತಾಲೂಕಿನ ಮೆದಕಿನಾಳ, ಅಂತರಗಂಗಿ ಸೇರಿ ಈ ಭಾಗದಲ್ಲಿ ನೂರಾರು ಎಕರೆ ಸರಕಾರಿ ಜಮೀನು ಇದ್ದು, ಇಲ್ಲಿ ನಿರಂತರ ಒತ್ತುವರಿ ನಡೆಯುತ್ತಿದೆ. ಮರಂ ಕ್ವಾರಿ ಆರಂಭಿಸುವುದಕ್ಕಾಗಿ ಇಲ್ಲಿ ಸರಕಾರಿ ಜಮೀನು ಒತ್ತುವರಿ ಸಾಮಾನ್ಯವಾಗಿದೆ. ಕಂದಾಯ ಇಲಾಖೆಯಿಂದ ಸ್ವಯಂ ಆಗಿ ಸರ್ವೇ ನಡೆಸಿದರೆ ಇಂತಹ ಹಲವು ಪ್ರಕರಣ ಬಯಲಿಗೆ ಬರಲಿದೆ. ಮತ್ತೂಂದು ಅಂಶವೆಂದರೆ ಜಮೀನು ಒತ್ತುವರಿ ಅಂಶ ಪತ್ತೆಯಾದರೂ ಒತ್ತುವರಿದಾರರ ವಿರುದ್ಧ ಇದುವರೆಗೆ ಕ್ರಮ ಕೈಗೊಂಡಿಲ್ಲ. ಇದೇ ಕಾರಣಕ್ಕೆ ಇಲ್ಲಿ ಸರಕಾರಿ ಜಮೀನು ಯಾರೂ ಬೇಕಾದರೂ ಒತ್ತುವರಿ
ಮಾಡುವ ಅಂಶ ನಡೆಯುತ್ತಲೇ ಇವೆ ಎನ್ನುತ್ತಾರೆ ಇಲ್ಲಿನ ಸ್ಥಳೀಯರು.

ಸರ್ವೇ ನಂಬರ್‌ 125ರಲ್ಲಿ ಸರಕಾರಿ ಜಮೀನು ಒತ್ತುವರಿ ದೃಢವಾಗಿದೆ. ಆದರೆ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಪ್ರಭಾವಕ್ಕೆ ಹೆದರಿ ಅರೆಬರೆ ವರದಿ ನೀಡಿದ್ದಾರೆ. ಇಲ್ಲಿ ಹೆಚ್ಚಿನ ಜಮೀನು ಒತ್ತುವರಿಯಾಗಿದೆ. ಆದರೆ ವರದಿ ಸಮರ್ಪಕವಾಗಿ ನೀಡಿಲ್ಲ. ಇನ್ನು ಒತ್ತುವರಿದಾರರ ವಿರುದ್ಧ ಕಾನೂನು ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಬೇಕು. ಬೇರೆ ತಾಲೂಕಿನ ಅಧಿ  ಕಾರಿಗಳನ್ನು ಪರಿಶೀಲನೆಗೆ ನೇಮಕ ಮಾಡಿ ಈ ಬಗ್ಗೆ ನೈಜ ವರದಿ ಪಡೆದು ಕ್ರಮ ಕೈಗೊಳ್ಳಬೇಕು.
-ಸಂತೋಷ ಹಿರೇದಿನ್ನಿ, ದೂರುದಾರರು.

ಮೆದಕಿನಾಳ ಸೀಮಾ ವ್ಯಾಪ್ತಿಯ ಸರ್ವೇ ನಂ.125ರಲ್ಲಿ ಸರಕಾರಿ ಜಮೀನು ಒತ್ತುವರಿ ಬಗ್ಗೆ ದೂರು ಬಂದಿತ್ತು. ಈ ಆಧಾರದ ಮೇಲೆ ಪರಿಶೀಲನೆ ನಡೆಸಿ, ಒತ್ತುವರಿ ಭೂಮಿತೆರವು ಮಾಡಿ ಹದ್ದುಬಸ್ತ್ ಮಾಡಲಾಗಿದೆ.
-ಕವಿತಾ, ಆರ್‌.ತಹಶೀಲ್ದಾರ್‌, ಮಸ್ಕಿ

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.