ವಾಮಚಾರಕ್ಕೆ ಇಟ್ಟ ತೆಂಗಿನಕಾಯಿ ತಿಂದು ಮೌಢ್ಯತೆ ಜಾಗೃತಿ ಮೂಡಿಸಿದ ಸರ್ಕಾರಿ ಕಾಲೇಜು ಉಪನ್ಯಾಸಕ

ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಾದ ವಾಮಚಾರ ಕಾಟ

Team Udayavani, Jul 17, 2024, 3:06 PM IST

6-maski

ಮಸ್ಕಿ: ವಾಮಚಾರಕ್ಕೆ ಬಳಸುವ ವಸ್ತುಗಳನ್ನು ನೋಡಿ ಭಯಪಡುವ ಕಾಲದಲ್ಲಿ ಇಲ್ಲಿನ ಕಾಲೇಜಿನ ಉಪನ್ಯಾಸಕರೊಬ್ಬರು ವಾಮಚಾರಕ್ಕೆ ಇಟ್ಟಿದ್ದ ವಸ್ತುಗಳನ್ನು ತಿಂದು ಮೌಢ್ಯತೆ ಕುರಿತು ಜಾಗೃತಿ ಮೂಡಿಸಿದರು.

ಹೌದು ಪಟ್ಟಣದ ಮುದಗಲ್ಲ ರಸ್ತೆಯಲ್ಲಿನ ದೇವನಾಂಪ್ರಿಯ ಅಶೋಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗೇಟಿನಲ್ಲಿ ತೆಂಗಿನಕಾಯಿ, ನಿಂಬೆ ಹಣ್ಣು, ಕುಂಕುಮವನ್ನಿಟ್ಟು ಹೋಗಿದ್ದರು.

ಕಾಲೇಜಿನ ಸಮಯದಲ್ಲಿ ಆಗಮಿಸಿದ ಉಪನ್ಯಾಸಕರು ಅದನ್ನು ದಾಟಿ ಸುಮ್ಮನೆ ಹೋಗಲಿಲ್ಲ. ಬದಲಾಗಿ ನಿಂಬೆಹಣ್ಣು ಕತ್ತರಿಸಿ ಅದರ ರಸ ಸವಿದರು. ತೆಂಗಿನಕಾಯಿ ಹೊಡೆದು ಎಲ್ಲಾ ಉಪನ್ಯಾಸಕ ಹಾಗೂ ಪ್ರಾಂಶುಪಾಲರು ತಿಂದು ಮೌಢ್ಯತೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ್ದು, ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಕಡಿವಾಣ ಬೇಕು: ವಾಮಾಚಾರ ಮಾಡುವ ಪರಿಕರಗಳು ಎಲ್ಲೆಡೆ ಸಾರ್ವಜನಿಕ ಸ್ಥಳದಲ್ಲಿ ಬಿಸಾಕಿದ್ದು ಕಂಡು ಬಂದಿವೆ. ಮೂರು ರಸ್ತೆ ಕೂಡುವ ರಸ್ತೆಗಳಲ್ಲಿ ಕೋಳಿ ಮೊಟ್ಟೆ, ತೆಂಗಿನಕಾಯಿ, ಎಲೆ, ಅಡಿಕೆ, ಮೆನಸಿನಕಾಯಿ, ನಿಂಬೆ ಹಣ್ಣು, ಮಣ್ಣಿನ ಗೊಂಬೆ ಎಸೆದಿರುತ್ತಾರೆ.

ಅದರಲ್ಲಿ ಮುದಗಲ್ಲ ರಸ್ತೆಗಳಲ್ಲಿ ಹೆಚ್ಚಾಗಿದ್ದು, ಮುಂಜಾನೆ ವಾಯುವಿಹಾರಕ್ಕೆ ತೆರಳುವ ಜನರು, ಯುವಕರು ಭಯಭೀತರಗಿದ್ದಾರೆ. ಕೆಲವೊಮ್ಮೆ ಶಾಲಾ-ಕಾಲೇಜಿನ ತೆರಳುವ ರಸ್ತೆಗಳಲ್ಲಿ ಎಸೆದಿರುತ್ತಾರೆ. ಪಟ್ಟಣದಲ್ಲಿ ದಿನೇ ದಿನೇ ವಾಮಾಚಾರಗಳಂತಹ ಕೃತ್ಯಗಳು ಹೆಚ್ಚಾಗುತ್ತಿದೆ.

ಸಾರ್ವಜನಿಕ ಸ್ಥಳದಲ್ಲಿ ಮೌಡ್ಯಚರಣೆ ಮಾಡುವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಬೇಕು ಹಾಗೂ ಮೌಢ್ಯತೆಯ ವಿರುದ್ಧ ತಾಲೂಕ ಆಡಳಿತ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಟಕ್ಕೆ ಬಳಸುವ ಪರಿಕರಗಳನ್ನು ಇಟ್ಟು ಹೋಗುತ್ತಿದ್ದು, ಪಟ್ಟಣದಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಅದರಲ್ಲಿ ಮುದಗಲ್ಲ ರಸ್ತೆಗಳಲ್ಲಿ ಹೆಚ್ಚಾಗಿದ್ದು, ಈಚೆಗೆ ದೇವನಾಂಪ್ರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗೇಟ್ ಮುಂಭಾಗದಲ್ಲಿ ಲಿಂಬೆಹಣ್ಣು, ತೆಂಗಿನಕಾಯಿ, ಕುಂಕುಮ ಬಿಸಾಕಿ ಹೋಗಿದ್ದು, ಕಾಲೇಜಿನ ಪ್ರಾಂಶುಪಾಲ ಡಾ.ಮಹಾಂತಗೌಡ ಪಾಟೀಲ ಹಾಗೂ ಉಪನ್ಯಾಸ ತಂಡ ಡಾ,ಪಂಪಾಪತಿ ನಾಯಕ, ಡಾ,ವೀರೇಶ, ಪ್ರಭುದೇವ ಸಾಲಿಮಠ, ಚನ್ನನಗೌಡ, ಹುಚ್ಚೇಶ ನಾಗಲೀಕರ್, ಮಂಜುನಾಥ, ಚಿದಾನಂದ, ಸುರೇಶ ಬಳಗಾನೂರು ಅವರು ಮಾಟಕ್ಕೆ ಇಟ್ಟಿದ್ದ ತೆಂಗಿನಕಾಯಿ ಲಿಂಬೆಹಣ್ಣು ತಿಂದು ಮೌಢ್ಯತೆಯ ವಿರುದ್ಧ ಜಾಗೃತಿ ಮೂಡಿಸಿದ್ದು ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಮೌಢ್ಯದ ಹೆಸರಿನಲ್ಲಿ ಶೋಷಣೆ ಮಾಡಿ ಮಗ್ದ ಜನರ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುವ ವಾಮಚಾರ, ಪವಾಡ, ಜ್ಯೋತಿಷ್ಯ ಇವೆಲ್ಲಕ್ಕೆ ಕಡಿವಾಣ ಬೀಳಬೇಕು- ಡಾ. ಮಹಾಂತಗೌಡ. ಪ್ರಿನ್ಸಿಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಸ್ಕಿ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shrana-p

Hospital: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗಾಗಿ ಕೇಂದ್ರಕ್ಕೆ ಮನವಿ: ಸಚಿವ ಡಾ. ಶರಣಪ್ರಕಾಶ

Manvi

Raichuru: ಅಪಘಾತದಲ್ಲಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ: ಸಿಎಂ ಸಿದ್ದರಾಮಯ್ಯ

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Raichur: ನಗರಸಭೆ ಕೈ ವಶ… ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.