1ನೇ ಹಂತದ ಚುನಾವಣೆಗೆ ಕ್ಷಣಗಣನೆ


Team Udayavani, Dec 21, 2020, 5:26 PM IST

1ನೇ ಹಂತದ ಚುನಾವಣೆಗೆ ಕ್ಷಣಗಣನೆ

ರಾಯಚೂರು: ಜಿಲ್ಲೆಯ 173 ಗ್ರಾಪಂಗಳ ಪೈಕಿ ಮೊದಲ ಹಂತದಲ್ಲಿ 93 ಪಂಚಾಯಿತಿಗಳಿಗೆ ಡಿ.22ರಂದು ನಡೆಯುವ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ರಾಯಚೂರು, ದೇವದುರ್ಗ, ಮಾನ್ವಿ ಮತ್ತು ಮಾನ್ವಿ ತಾಲೂಕಿನಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 4438 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಒಟ್ಟು 93 ಗ್ರಾಪಂಗಳ ಪೈಕಿ 82 ಸೂಕ್ಷ್ಮ, 767 ಸಾಮಾನ್ಯ ಮತಗಟ್ಟೆ ಸೇರಿದಂತೆ ಒಟ್ಟು 849 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಚುನಾವಣೆಗೆ ನಿಯೋಜನೆಗೊಂಡ ಸಿಬ್ಬಂದಿ ಜಿಲ್ಲಾಡಳಿತಂದ ತರಬೇತಿ ನೀಡಲಾಗಿದೆ. ಬ್ಯಾಲೆಟ್‌ ಪೇಪರ್‌ ಆಧಾರಿತ ಚುನಾವಣೆಯಾಗಿರುವ ಕಾರಣ ಇವಿಎಂ ಯಂತ್ರಗಳಿಗೆ ವಿಶ್ರಾಂತಿ ಸಿಕ್ಕಂತಾಗಿದೆ. ಅಲ್ಲದೇ, ಪಿಆರ್‌ಒ, ಎಪಿಆರ್‌ಒ ಅಧಿಕಾರಿಗಳಿಗೆ ಮಾತ್ರ ತರಬೇತಿ ನೀಡಲಾಗಿದೆ.

ಪೊಲೀಸ್‌ ಇಲಾಖೆಯಿಂದ ಬಿಗಿ ಭದ್ರತೆ: ಚುನಾವಣೆಯನ್ನೂ ಸುಸೂತ್ರವಾಗಿ ನಡೆಸಲು ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಚುನಾವಣೆ ಕರ್ತವ್ಯಕ್ಕಾಗಿ ಜಿಲ್ಲೆಯ 52 ಪೊಲೀಸ್‌ ಅಧಿ ಕಾರಿ 981 ಸಿಬ್ಬಂದಿ ಹಾಗೂ 161 ಗೃಹ ರಕ್ಷಕದಳ ಸಿಬ್ಬಂದಿಯನ್ನು ನೇಮಿಸಲಾಗಿದೆ. 46 ಮೊಬೈಲ್‌ ಸೆಕ್ಟರ್‌ 17 ಸೂಪರ್‌ ವೈಸರ್‌ ಮೊಬೈಲ್‌ ಸೆಕ್ಟರ್‌ಗಳಲ್ಲಿ ಅಧಿ  ಕಾರಿಗಳ ನೇಮಿಸಲಾಗಿದೆ. ನಾಲ್ಕು ಕೆಎಸ್‌ಆರ್‌ಪಿ, 10 ಡಿಎಆರ್‌ ತುಕಡಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿಒಳಬರುವ ಮತ್ತು ಹೊರ ಹೋಗುವ ವಾಹನಗಳ ತಪಾಸಣೆ ಮಾಡಲು ಒಟ್ಟು 9 ಚೆಕ್‌ ಪೋಸ್ಟ್‌ಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ತಿಳಿಸಿದ್ದಾರೆ.

ಅಭ್ಯರ್ಥಿಗಳಿಂದ ಅಂತಿಮ ಪ್ರಚಾರ: ಮೊದಲ ಹಂತದ ಚುನಾವಣೆಗೆ ಇನ್ನೊಂದು ದಿನ ಮಾತ್ರ ಬಾಕಿ ಉಳಿದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ತುರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಮತಗಳನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಮನವೊಲಿಕೆ ಮಾಡುವ ಕಸರತ್ತು ಮುಂದುವರಿಸಿದ್ದಾರೆ. ಬೆಂಬಲಿಗರು, ಕುಟುಂಬ ಸದಸ್ಯರು, ಬಂಧುಗಳೊಂದಿಗೆ ಮನೆ-ಮನೆಗೆ ತೆರಳಿ ಮತ ಯಾಚಿಸುತ್ತಿದ್ದಾರೆ. ಪ್ರಚಾರದ ವಿಚಾರದಲ್ಲಿ ಆಯೋಗ ಕಟ್ಟುನಿಟ್ಟಿನ ನಿಯಮಗಳನ್ನು ಒಡ್ಡದ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಹಗಲಿರುಳು ಪ್ರಚಾರ ಜೋರಾಗಿದೆ.

ರಾಯಚೂರು ತಾಲೂಕಿನ ಒಟ್ಟು 345 ಮತಗಟ್ಟೆಗಳಿದ್ದು, ಅವಿರೋಧ ಆಯ್ಕೆ ಹಾಗೂ ತಡೆಯಾಜ್ಞೆ ಕಾರಣಕ್ಕೆ ಕೆಲ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿಲ್ಲ. ಈಗ 296 ಮತಗಟ್ಟೆಗಳನ್ನುಸ್ಥಾಪಿಸಲಾಗಿದೆ. ಅದರಲ್ಲಿ 16 ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ಸ್ಯಾನಿಟೈಸೆಶನ್‌ ಕೆಲಸ ನಡೆದಿದೆ. ಕೋವಿಡ್‌ 19 ನಿಯಮಾನುಸಾರವೇ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಡಾ| ಹಂಪಣ್ಣ ಸಜ್ಜನ್‌, ತಹಶೀಲ್ದಾರ್‌ ರಾಯಚೂರು

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

3-maski

Maski: ಮಾಂಸದೂಟ ಸೇವಿಸಿ ಮೂವರು ಅಸ್ವಸ್ಥ

1-trfff

Sirwar; ಭೀಕರ ಅಪಘಾ*ತ; ಮೂವರು ಸ್ಥಳದಲ್ಲೇ ಸಾ*ವು

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.