ನಗರ ವ್ಯಾಪ್ತಿ ಚತುಷ್ಪಥ ರಸ್ತೆಗೆ ಗ್ರೀನ್‌ ಸಿಗ್ನಲ್‌!


Team Udayavani, Feb 25, 2022, 5:43 PM IST

21road

ಮಸ್ಕಿ: ಬಹುನಿರೀಕ್ಷಿತ ಮಸ್ಕಿ ಸಿಟಿ ವ್ಯಾಪ್ತಿಯ ರಸ್ತೆ ಅಗಲೀಕರಣ, ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಬಹುಕೋಟಿ ಮೊತ್ತದ ಈ ಯೋಜನೆಗೆ ಕೇಂದ್ರದಿಂದ ಹಣಕಾಸಿನ ನೆರವು ದಕ್ಕಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭದ ನಿರೀಕ್ಷೆ ಗರಿಗೆದರಿವೆ!.

ಪಟ್ಟಣದ ಜನತೆಯ ಬಹುದಿನಗಳ ಬೇಡಿಕೆಯಾಗಿರುವ ಮಸ್ಕಿಯಿಂದ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಪಟ್ಟಣ ವ್ಯಾಪ್ತಿಯೊಳಗೆ ನಾಲ್ಕು ಪಥದ ರಸ್ತೆಯನ್ನಾಗಿಸುವ ಕನಸು ಈಗ ಸಾಕಾರಗೊಳ್ಳುವತ್ತ ಸಾಗಿದೆ. ಮಸ್ಕಿ ತಾಲೂಕು ಕೇಂದ್ರವಾದ ಬಳಿ ಪಟ್ಟಣ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದೆ. ಪಟ್ಟಣದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ತೀವ್ರ ಇಕ್ಕಟ್ಟಾಗಿದ್ದರಿಂದ ಪಾರ್ಕಿಂಗ್‌ ಗೆ ಸ್ಥಳವಕಾಶವಿರಲಿ, ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಸಮಸ್ಯೆ ಯಾಗುತ್ತಿದೆ.

ತೀವ್ರ ಇಕ್ಕಟ್ಟು ಪರಿಸ್ಥಿತಿ ಕಾರಣ ನಿರಂತರ ಟ್ರಾಫಿಕ್‌ ಹೆಚ್ಚುತ್ತಿತ್ತು. ಹೀಗಾಗಿ ಇಲ್ಲಿನ ರಸ್ತೆ ಅಗಲೀಕರಣಗೊಳಿಸಿ ಚತುಷ್ಪಥದ ರಸ್ತೆ ಯನ್ನಾಗಿಸುವುದಕ್ಕಾಗಿ ಕೊಪ್ಪಳ ಸಂಸದ ಕರಡಿ ಸಂಗಣ್ಣ ಕರಡಿ ಕೇಂದ್ರ-ರಾಜ್ಯ ಸರ್ಕಾರದ ಮೇಲೆ ನಿರಂತರ ಒತ್ತಡ ಹಾಕಿದ್ದರು. ಇದರ ಪರಿಣಾಮವಾಗಿ ಈಗ ರಸ್ತೆ ಅಗಲೀಕರಣದ ಭಾಗ್ಯ ಒಲಿದಿದೆ.

ಪಟ್ಟಣದ ಅಶೋಕ ವೃತ್ತದಿಂದ ಬಸವೇಶ್ವರ ವೃತ್ತದವರೆಗಿನ 2.85 ಕಿ.ಮೀ ರಸ್ತೆಯನ್ನು ರಸ್ತೆ ವಿಭಜಕ, ಒಳ ಚರಂಡಿ, ಪಾದಚಾರಿ ರಸ್ತೆ ಹಾಗೂ ರಸ್ತೆ ಬದಿಯಲ್ಲಿ ಹೈಮಾಸ್ಟ್‌ ಬೀದಿ ದೀಪಗಳ ಅಳವಡಿಸುವ ಯೋಜನೆ ಇದಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹುನಗುಂದ ವಿಭಾಗದ ಅಧಿಕಾರಿಗಳು ಕಾಮಗಾರಿಗೆ ತಗುಲುವ ವೆಚ್ಚದ ಕುರಿತು ಅಂದಾಜು ಯೋಜನೆ ತಯಾರಿಸಿ ಕೇಂದ್ರಕ್ಕೆ ಸಲ್ಲಿಸಿದ್ದರು. ಈಗ ಕೇಂದ್ರ ಸರ್ಕಾರ 14 ಕೋಟಿ ವೆಚ್ಚದ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಒಪ್ಪಿಗೆ ನೀಡಿ ಆರ್ಥಿಕ ಇಲಾಖೆಗೆ ಶಿಫಾರಸು ಮಾಡಿದೆ.

ಮಸ್ಕಿ ಪಟ್ಟಣದಲ್ಲಿ ಹಾದು ಹೋಗುವ ರಸ್ತೆ ಚತುಷ್ಪಥ ರಸ್ತೆಯನ್ನಾಗಿಸುವುದಕ್ಕಾಗಿ ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆಯುವ ಸಲುವಾಗಿ ಯೋಜನೆಯ ಹೆದ್ದಾರಿ ಪ್ರಾಧಿಕಾರದ ಹುನಗುಂದ ವಿಭಾಗದ ಹಿರಿಯ ಅಧಿಕಾರಿಗಳು ಕಳೆದೊಂದು ವಾರದಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. 15 ದಿನಗಳ ಒಳಗಾಗಿ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ತಿಂಗಳೊಳಗಾಗಿ ಕಾಮಗಾರಿ ಟೆಂಡರ್‌ ಕರೆಯಲಾಗುವುದು ಎಂದು ಅಧಿಕಾರಿಗಳ ಮೂಲದಿಂದ ತಿಳಿದು ಬಂದಿದೆ.

ಪಟ್ಟಣದ 2.85 ಕಿ.ಮೀ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಚರಂಡಿ, ಪುಟ್‌ಪಾತ್‌ ಸೇರಿ ಒಟ್ಟು 26 ಮೀ. ರಸ್ತೆ ಅಗಲೀಕರಣವಾಗಲಿದೆ. 26 ಮೀ. ಒಳಗೆ ಬರುವ ವಿದ್ಯುತ್‌ ಕಂಬ ಹಾಗೂ ಕುಡಿವ ನೀರಿನ ಪೈಪ್‌ಲೈನ್‌ ಸ್ಥಳಾಂತರಿಸುವ ಸಂಬಂಧ ಹೆದ್ದಾರಿ ಪ್ರಾಧಿಕಾರದಿಂದ ಜೆಸ್ಕಾಂ ಹಾಗೂ ಪುರಸಭೆಗೆ ಹೆದ್ದಾರಿ ಪತ್ರಗಳು ಬಂದಿವೆ. ಪಟ್ಟಣದ ರಸ್ತೆಯ ಆಧುನೀಕರಣ ಬರುವ ದಿನಗಳಲ್ಲಿ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

ಚತುಷ್ಪಥ ಕಾಮಗಾರಿಗೆ ಕೇಂದ್ರ ಸರ್ಕಾರ ಹಣಕಾಸಿನ ನೆರವು ನೀಡಲು ಒಪ್ಪಿಗೆ ನೀಡಿದೆ. ಹೀಗಾಗಿ 15 ದಿನಗಳ ಒಳಗಾಗಿ ಟೆಂಡರ್‌ ಪ್ರಕ್ರಿಯೆ ಆರಂಭವಾಗುತ್ತದೆ. -ವಿಜಯಕುಮಾರ್‌ ಪಾಟೀಲ್‌, ಹೆದ್ದಾರಿ ಪ್ರಾಧಿಕಾರ, ಹುನಗುಂದ

ಕೇಂದ್ರ ಸರ್ಕಾರ ಇದೀಗ ಪಟ್ಟಣದಲ್ಲಿ ನಾಲ್ಕು ಪಥದ ರಸ್ತೆ ಹಾಗೂ ವಿಭಜಕ ನಿರ್ಮಾಣದ ಅಂದಾಜು ಪಟ್ಟಿಗೆ ಒಪ್ಪಿಗೆ ಸೂಚಿಸಿದೆ. ಯೋಜನೆ ಅನುಷ್ಠಾನಕ್ಕಾಗಿ ಕೇಂದ್ರ ಸಚಿವರ ಮೇಲೆ ಸತತ ಒತ್ತಡ ಹಾಕಿ ಆಡಳಿತಾತ್ಮಕ ಒಪ್ಪಿಗೆ ಪಡೆಯಲಾಗಿದೆ. ಇದೀಗ ಹಣಕಾಸು ಸಚಿವರನ್ನು ಭೇಟೆಯಾಗಿ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಆದಷ್ಟು ಬೇಗ ದೊರೆಯುತ್ತದೆ. -ಸಂಗಣ್ಣ ಕರಡಿ, ಸಂಸದ, ಕೊಪ್ಪಳ ಕ್ಷೇತ್ರ

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.