ಒಂದೇ ಮಳೆಗೆ ಮಾರಲದಿನ್ನಿ ಡ್ಯಾಂ ಭರ್ತಿ!


Team Udayavani, May 21, 2022, 5:31 PM IST

15dam

ಮಸ್ಕಿ: ತಾಲೂಕಿನ ಮಾರಲದಿನ್ನಿ ಬಳಿ ಇರುವ ಮಸ್ಕಿ ನಾಲಾ ಯೋಜನೆ(ಎಂಎನ್‌ಪಿ) ಅಣೆಕಟ್ಟು ಒಂದೇ ಮಳೆಗೆ ಈ ಬಾರಿ ಭರ್ತಿಯಾಗಿದೆ. ಪ್ರತಿ ವರ್ಷ ಮುಂಗಾರು ಆರಂಭದ ಬಳಿಕ ಜುಲೈ ತಿಂಗಳ ವೇಳೆಗೆ ಭರ್ತಿಯಾಗುತ್ತಿದ್ದ ಇಲ್ಲಿನ ಜಲಾಶಯ ಈ ಬಾರಿ ಮುಂಗಾರು ಪೂರ್ವವೇ ಭರ್ತಿಯಾಗಿದ್ದು, ಅಚ್ಚುಕಟ್ಟು ವ್ಯಾಪ್ತಿ ಪ್ರದೇಶದ ರೈತರ ಸಂತಸ ಇಮ್ಮಡಿಯಾಗಿದ್ದರೆ, ಹಳ್ಳಕ್ಕೆ ಹೊಂದಿಕೊಂಡ ಹಳ್ಳಿಗರಲ್ಲಿ ಢವ-ಢವ ಶುರು ಮಾಡಿದೆ.

ಈಗಲೇ ಹೊರ ಹರಿವು: ಜಲಾಶಯದ ಮೇಲ್ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಗುರುವಾರದ ಅಂತ್ಯಕ್ಕೆ 25 ಅಡಿ ನೀರು ಜಲಾಶಯದ ಮಡಿಲು ಸೇರಿತ್ತು. ಆದರೆ, ಶುಕ್ರವಾರದ ವೇಳೆಗೆ 0.5 ಟಿಎಂಸಿ ಅಡಿ (29 ಅಡಿ ನೀರು ಸಂಗ್ರಹ) ಸಾಮರ್ಥ್ಯದ ಮಸ್ಕಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಜಲಾಶಯದ ಎರಡು ಗೇಟ್‌ಗಳ ಮೂಲಕ ಹೊರ ಬಿಡಲಾಗುತ್ತಿದೆ.

ಸದ್ಯ 500 ಕ್ಯೂಸೆಕ್‌ನಷ್ಟು ಹಿರೇ ಹಳ್ಳಕ್ಕೆ ಬಿಡಲಾಗುತ್ತಿದೆ. ಹಳ್ಳದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇರುವುದರಿಂದ ಹಳ್ಳದ ದಂಡೆಯ ಗ್ರಾಮಸ್ಥರು ಹಳ್ಳದಲ್ಲಿ ಇಳಿಯದಂತೆ ಸೂಚನೆ ನೀಡಲಾಗುತ್ತಿದೆ. ಇನ್ನು ನಿರಂತರ ಮಳೆಯಿದ್ದು, ನೀರಿನ ಒಳ ಹರಿವು ಹೆಚ್ಚಿರುವ ಕಾರಣ ಜಲಾಶಯದ ಗೇಟ್‌ಗಳ ಮೂಲಕ ಹೆಚ್ಚಿನ ಪ್ರಮಾಣದ ನೀರು ಹೊರ ಹರಿಸುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಈಗಾಗಲೇ ತಾಲೂಕು ಆಡಳಿತಕ್ಕೆ ಹಾಗೂ ಹಳ್ಳದ ವ್ಯಾಪ್ತಿಯ ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಪಂಗಳಿಗೆ ಮಾಹಿತಿ ನೀಡಲಾಗಿದ್ದು, ಯಾರು ಹಳ್ಳಕ್ಕೆ ಇಳಿಯದಂತೆ ಸೂಚನೆ ನೀಡಲಾಗುತ್ತಿದೆ.

ಬೇಸಿಗೆ ವೇಳೆಗೆ ಡೆಡ್‌ ಸ್ಟೋರೇಜ್‌ ಹೊರತುಪಡಿಸಿ ಸಂಪೂರ್ಣ ಬರಿದಾಗಿದ್ದ ಮಸ್ಕಿ ನಾಲಾ ಯೋಜನೆಯ ಅಣೆಕಟ್ಟು ಈ ಬಾರಿ ಮುಂಗಾರು ಆರಂಭದ ಮುನ್ನವೇ ಸಂಪೂರ್ಣ ತುಂಬಿರುವುದು ಐತಿಹಾಸಿಕವೆನಿಸಿದೆ. ಜುಲೈ ಅಂತ್ಯದಲ್ಲಿ ಅಣೆಕಟ್ಟು ಭರ್ತಿಯಾಗಿ ಆಗಸ್ಟ್‌ ಅಂತ್ಯದ ವೇಳೆಗೆ ಬೆಳೆಗೆ ನೀರು ಹರಿಸುವುದು ಇಲ್ಲಿನ ವಾಡಿಕೆ. ಆದರೆ, ಈ ಬಾರಿ ಮುಂಗಾರು ಪೂರ್ವವೇ ಡ್ಯಾಂ ಭರ್ತಿಯಾಗಿದ್ದರಿಂದ ಅಚ್ಚುಕಟ್ಟು ವ್ಯಾಪ್ತಿಯ ಮಾರಲದಿನ್ನಿ, ಉಸ್ಕಿಹಾಳ, ಕಾಟಗಲ್‌, ಮುದಬಾಳ, ವೆಂಕಟಾಪುರ, ದಿಗ್ಗನಾಯಕನಬಾವಿ, ಬೆಲ್ಲದಮರಡಿ, ಬೆನಕಟ್ಟಿ, ವೆಂಕಟಾಪುರ ತಾಂಡ ಸೇರಿ 10 ಹಳ್ಳಿಗಳ ಸುಮಾರು 7,416 ಎಕರೆ ಜಮೀನುಗಳಲ್ಲಿ ಕೃಷಿ ಚಟುವಟಿಕೆ ನಡೆಸಲು ನೀರಿನ ಬರ ನೀಗಿದಂತಾಗಿದೆ.

ಹೆಚ್ಚಿನ ಮಳೆಯಾಗುತ್ತಿರುವ ಕಾರಣ ಮಸ್ಕಿ ಜಲಾಶಯದಿಂದ ನೀರು ಬಿಡಲಾಗಿದೆ. ಹಳ್ಳದ ದಂಡೆಯ ಗ್ರಾಮಸ್ಥರು ಹಳ್ಳದಲ್ಲಿ ಇಳಿಯದಂತೆ ಸೂಚನೆ ನೀಡಲಾಗಿದೆ. ತಾಲೂಕಿನಲ್ಲಿ ಮಳೆಯಿಂದಾದ ನಷ್ಟದ ಬಗ್ಗೆ ವರದಿ ತರಿಸಿಕೊಳ್ಳಲಾಗುತ್ತಿದೆ. ಕವಿತಾ ಆರ್‌., ತಹಶೀಲ್ದಾರ್‌, ಮಸ್ಕಿ

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shrana-p

Hospital: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗಾಗಿ ಕೇಂದ್ರಕ್ಕೆ ಮನವಿ: ಸಚಿವ ಡಾ. ಶರಣಪ್ರಕಾಶ

Manvi

Raichuru: ಅಪಘಾತದಲ್ಲಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ: ಸಿಎಂ ಸಿದ್ದರಾಮಯ್ಯ

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Raichur: ನಗರಸಭೆ ಕೈ ವಶ… ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.