![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 12, 2021, 6:05 PM IST
ಸಿರವಾರ: ತಾಲೂಕಿನ ನಾರಬಂಡ, ಹುಣಚೇಡ್ ಸೇರಿದಂತೆ ಸುತ್ತಮುತ್ತಲಿನ ವಿದ್ಯಾರ್ಥಿಗಳು ಬಸ್ ಸೌಕರ್ಯಕ್ಕೆ ಒತ್ತಾಯಿಸಿ ನಾರಬಂಡದಿಂದ ಸಿರವಾರವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದರು.
ನಾರಬಂಡ, ಹುಣಿಚೇಡ್, ಪಟಕನದೊಡ್ಡಿ, ನವಲಕಲ್ಲು ಸೇರಿದಂತೆ ಸುತ್ತಲಿನ ನೂರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಪಟ್ಟಣದ ಕಾಲೇಜುಗಳಿಗೆ ಬರುತ್ತಾರೆ. ಆದರೆ ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಬರಲು ಸಾಧ್ಯವಾಗದೇ ಅಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಈ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು 12 ಕಿ.ಮೀ ಪಾದಯಾತ್ರೆ ಮಾಡಿದರು.
ನಂತರ ಬಸ್ ನಿಲ್ದಾಣದಲ್ಲಿ ಧರಣಿ ಹಮ್ಮಿಕೊಂಡಿದ್ದು ಸ್ಥಳಕ್ಕೆ ಮಾನ್ವಿ ಸಹಾಯಕ ಸಂಚಾರಿ ಅಧೀಕ್ಷಕ ರಾಮನಗೌಡ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿ, ಈ ಕುರಿತು ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಬಸ್ ವ್ಯವಸ್ಥೆ ಮಾಡಲಾಗುವುದು ಎಂದರು. ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷೆ ಅನಿತಾ ಮಂತ್ರಿ, ಸಿದ್ರಾಮೇಶ ಮಂತ್ರಿ, ಬಾಲುಗೌಡ, ಈರಣ್ಣ ಮಾಡಗಿರಿ, ತುಕರಾಮ ನಾಯಕ, ಮೃತ್ಯುಂಜಯ್ಯ, ಚೆನ್ನರೆಡ್ಡಿ, ಪುತ್ರಪ್ಪ ಸೇರಿದಂತೆ ವಿದ್ಯಾರ್ಥಿಗಳು ಇದ್ದರು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.