ಕಪ್ಪು ಚುಕ್ಕೆಯಿಲ್ಲದೇ ಕೆಲಸ ನಿರ್ವಹಿಸುವೆ


Team Udayavani, Feb 10, 2022, 1:25 PM IST

18work

ಸಿಂಧನೂರು: ಪಕ್ಷ ಹಾಗೂ ನಮ್ಮ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿಯನ್ನು ವಹಿಸಿದ್ದು, ಯಾವುದೇ ಕಪ್ಪುಚುಕ್ಕೆಯಿಲ್ಲದ ರೀತಿ ಆಡಳಿತ ನಿಭಾಯಿಸುವೆ ಎಂದು ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ಮಧ್ವರಾಜ್‌ ಆಚಾರ್‌ ಹೇಳಿದರು.

ನಗರದ ಪ್ರಾಧಿಕಾರದ ಕಚೇರಿಯಲ್ಲಿ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮೇರು ಗಾಯಕಿ ಲತಾ ಮಂಗೇಶ್ಕರ್‌, ಕನ್ನಡದ ಕಬೀರ ಇಬ್ರಾಹಿಂ ಸುತಾರ ನಿಧನರಾದ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಯಾವುದೇ ರೀತಿಯಿಂದಲೂ ಕಾನೂನು ಬಾಹಿರ ಕೆಲಸಕ್ಕೆ ಅವಕಾಶ ನೀಡುವುದಿಲ್ಲ ಎಂದರು.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಮಧ್ವರಾಜ್‌ ಅವರ ಪಕ್ಷ ನಿಷ್ಠೆ ಪರಿಗಣಿಸಿ ನಾಯಕರು ಜವಾಬ್ದಾರಿ ಕೊಟ್ಟಿದ್ದಾರೆ. ಅಭಿವೃದ್ಧಿಯಾಗದ ಲೇಔಟ್‌ ಗಳಿಗೆ ಬಿಡುಗಡೆ ಅವಕಾಶ ನೀಡಬಾರದು. ಸರಕಾರದ ಮಾರ್ಗಸೂಚಿ, ಕಾನೂನಿನ ಅನ್ವಯ ಕೆಲಸ ಮಾಡಲಿ. ಯಾವುದೇ ರೀತಿಯಿಂದಲೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸ ನಿರ್ವಹಿಸಬೇಕು ಎಂದರು.

ನಿರ್ಗಮಿತ ಅಧ್ಯಕ್ಷ ಅಮರೇಗೌಡ ವಿರೂಪಾಪುರ ಮಾತನಾಡಿ, ನನ್ನ ಅವಧಿಯಲ್ಲಿ ನಿಷ್ಪಕ್ಷಪಾತವಾಗಿ ಆಡಳಿತ ನಡೆಸಿದ್ದು, ಕೆಲವು ವಿರೋಧ ಬಂದರೂ ಅವುಗಳನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ನನ್ನ ಅವಧಿಯಲ್ಲಿ ನನ್ನ ಗಮನಕ್ಕೆ ಬಾರದೇ ನಗರಸಭೆಗೆ ಕಡತಗಳನ್ನು ರವಾನಿಸಿದ ಪ್ರಕರಣದಲ್ಲಿ, ಕಾನೂನು ಹೋರಾಟ ಮುಂದುವರಿಸುವೆ. ಕಾನೂನು ಬದ್ಧವಾಗಿ ಕೆಲಸ ನಿರ್ವಹಿಸಿದ ತೃಪ್ತಿಯಿದೆ ಎಂದರು.

ನೂತನವಾಗಿ ಪ್ರಾಧಿಕಾರದ ನಿರ್ದೇಶಕರಾಗಿ ನೇಮಕವಾದ ಪೂಜಪ್ಪ ಪೂಜಾರಿ, ಮಂಜುನಾಥ ಹರಸೂರು, ರಾಮನಗೌಡ ವಕೀಲರು ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ಮುಖಂಡರಾದ ಎನ್‌.ಶಿವನಗೌಡ ಗೋರೆಬಾಳ, ಎಂ.ದೊಡ್ಡಬಸವರಾಜ್‌, ಬಿಜೆಪಿ ಅಧ್ಯಕ್ಷ ಹನುಮೇಶ ಸಾಲಗುಂದಾ, ಅಮರೇಶ ಅಂಗಡಿ, ರಾಜಶೇಖರ ಹಿರೇಮಠ, ಯಲ್ಲೂಸಾ ಬದಿ, ವೆಂಕಟೇಶ ಪ್ರಭು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.