ಮೀಸಲಾತಿ ಹೆಚ್ಚಳಕ್ಕೆ ಅಪಸ್ವರ ಎತ್ತುವವರು ಎಸ್ಸಿ /ಎಸ್ಟಿ ವಿರೋಧಿಗಳು
Team Udayavani, Oct 11, 2022, 11:22 PM IST
ರಾಯಚೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಳಕ್ಕೆ ಸರಕಾರ ಕೈಗೊಂಡ ನಿರ್ಧಾರಕ್ಕೆ ಅಪಸ್ವರ ಎತ್ತುವವರೇ ಎಸ್ಟಿ, ಎಸ್ಟಿ ಸಮುದಾಯಗಳ ವಿರೋಧಿಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಗಿಲ್ಲೆಸುಗೂರಿನಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇಷ್ಟು ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ನಾಯಕರು ತಮ್ಮ ಅಧಿಕಾರವಧಿಯಲ್ಲಿ ಏನು ಮಾಡದೇ ಈಗ ಮೀಸಲಾತಿ ಹೆಚ್ಚಳ ಕುರಿತು ಟೀಕಿಸುತ್ತಿದ್ದಾರೆ. ಮೀಸಲಾತಿ ಹೆಚ್ಚಳದಿಂದ ಬಿಜೆಪಿಗೆ ವೋಟು ಹೆಚ್ಚಲಿದೆ ಎನ್ನುವ ಆತಂಕ ಶುರುವಾಗಿದ್ದು, ಕಾಂಗ್ರೆಸ್ನಲ್ಲಿ ತಳಮಳ ಉಂಟಾಗಿದೆ ಎಂದರು.
ಬೇರೆ ಬೇರೆ ಸಮುದಾಯಗಳ ಮೀಸಲಾತಿ ಬೇಡಿಕೆ ಕುರಿತು ರಚಿಸಿರುವ ಆಯೋಗಗಳ ವರದಿ ಆಧರಿಸಿ ಕಾನೂನಿನಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.
2023ಕ್ಕೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಸರಕಾರದ ಸಾಧನೆಗಳನ್ನು ಜನರಿಗೆ ಪರಿಚಯಿಸಲು ಜನಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ. ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸೋಲಿನ ಭೀತಿ ಎದುರಾಗಿದ್ದು, ಪಕ್ಷದ ನಾಯಕ ರಾಹುಲ್ ಗಾಂಧಿ ತಮ್ಮ ಅಸ್ತಿತ್ವ ಕಳೆದುಕೊಳ್ಳುವ ಆತಂಕದಿಂದ ಭಾರತ ಜೋಡೋ ಪಾದಯಾತ್ರೆ ಆರಂಭಿಸಿದ್ದಾರೆ. ಕಾಂಗ್ರೆಸ್ ಪಾದಯಾತ್ರೆಗೂ ಬಿಜೆಪಿ ಜನಸಂಕಲ್ಪ ಯಾತ್ರೆಗೂ ಯಾವುದೇ ಸಂಬಂಧವಿಲ್ಲ ಎಂದು ಸಿಎಂ ಅವರು ಹೇಳಿದರು.
ರಾಯರ ಮಠಕ್ಕೆ ಬೊಮ್ಮಾಯಿ, ಬಿಎಸ್ವೈ ಭೇಟಿ
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಮಂಗಳವಾರ ಭೇಟಿ ನೀಡಿದರು. ರಾಯರ ಮೂಲ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಬಳಿಕ ಶ್ರೀಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರು ಗಣ್ಯರನ್ನು ಆಶೀರ್ವದಿಸಿದರು. ಸಚಿವರಾದ ಬಿ. ಶ್ರೀರಾಮುಲು, ಗೋವಿಂದ ಕಾರಜೋಳ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.