ಪೊಲೀಸ್ ಅಧೀಕ್ಷಕರ ಕಚೇರಿಯಲ್ಲೂ ಜ್ಞಾನಾರ್ಜನೆ
Team Udayavani, Mar 22, 2022, 2:23 PM IST
ಸಿಂಧನೂರು: ಪೊಲೀಸ್ ಅಧಿಕಾರಿಗಳು ಮನಸ್ಸು ಮಾಡಿದರೆ ಸಾಕಷ್ಟು ಸಮಾಜಮುಖೀ ಕೆಲಸ ನಿರ್ವಹಿಸಬಲ್ಲರು ಎಂಬುದಕ್ಕೆ ಇಲ್ಲಿನ ಪೊಲೀಸ್ ಅಧೀಕ್ಷಕರ ಕಚೇರಿ ಸಾಕ್ಷಿಯಾಗಿದೆ.
ನಿತ್ಯವೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪೂರಕ ರೀಡಿಂಗ್ ಹೌಸ್ ತೆರೆಯುವ ಮೂಲಕ ಮಾದರಿ ಹೆಜ್ಜೆ ಇಡಲಾಗಿದೆ. ನಗರದ ಸುಕಾಲಪೇಟೆ ರಸ್ತೆಯಲ್ಲಿನ ಡಿವೈಎಸ್ಪಿ ಕಚೇರಿಯಲ್ಲಿ ಹಲವು ದಿನಗಳ ಹಿಂದೆಯೇ ಆರಂಭಿಸಿರುವ ಗ್ರಂಥಾಲಯ ಆರಂಭಿಕ ಉತ್ಸಾಹಕ್ಕೆ ಸೀಮಿತಗೊಳ್ಳದೇ ತನ್ನ ಸೇವಾ ಕಾರ್ಯ ವಿಸ್ತರಿಸಿದೆ.
ಪ್ರತಿ ನಿತ್ಯ ತಂಡೋಪಾದಿಯಾಗಿ ಇಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡುತ್ತಿದ್ದು, ಬ್ಯಾಚ್ ರೂಪದಲ್ಲಿ ಗ್ರಂಥಾಲಯದಲ್ಲಿ ಕುಳಿತು ಓದಲಾರಂಭಿಸಿದ್ದಾರೆ. ಜೊತೆಗೆ ಪೊಲೀಸ್ ಠಾಣೆ ಇರುವ ಕಚೇರಿ ಆವರಣದಲ್ಲೇ ವಿದ್ಯಾದೇಗುಲ ತೆರೆದು, ಜನಸ್ನೇಹಿ ಹೆಜ್ಜೆ ಇಡಲಾಗಿದೆ.
ಏನಿದು ಗ್ರಂಥಾಲಯ?
ಐಎಎಸ್, ಕೆಎಎಸ್, ಎಫ್ಡಿಎ, ಎಸ್ಡಿಎ ಸೇರಿದಂತೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸುವ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳು ಪೂರಕ ತಯಾರಿ ಮಾಡಿಕೊಳ್ಳಲು ಇಲ್ಲಿ ಪುಸ್ತಕಗಳನ್ನು ಇಡಲಾಗಿದೆ. ಪಿಎಸೈ ಸೇರಿದಂತೆ ಇತರೆ ಹುದ್ದೆಗಳಿಗೂ ಸಂಪನ್ಮೂಲ ವ್ಯಕ್ತಿಗಳು ತಯಾರಿಸಿದ ಪುಸ್ತಕಗಳು ಇಲ್ಲಿ ದೊರೆಯುತ್ತಿವೆ. ದೈನಂದಿನ ಪತ್ರಿಕೆ ಕೂಡ ಓದುಗರಿಗೆ ಒದಗಿಸಲಾಗುತ್ತಿದೆ. ಡಿವೈಎಸ್ಪಿ ಕಚೇರಿಗೆ ಹೊಂದಿಕೊಂಡ ಕೊಠಡಿಯಲ್ಲಿ ಆರಂಭಿಸಿರುವ ಈ ಗ್ರಂಥಾಲಯ ವಿದ್ಯಾರ್ಥಿಗಳನ್ನು ಸೆಳೆಯಲಾರಂಭಿಸಿದೆ.
ಡಿವೈಎಸ್ಪಿ ಕಾರ್ಯಕ್ಕೆ ಮೆಚ್ಚುಗೆ
ಆರಂಭದಲ್ಲಿ ಪೊಲೀಸ್ ಇಲಾಖೆಯ ಮಕ್ಕಳಿಗೆ ಮಾತ್ರವೆಂದು ಈ ಗ್ರಂಥಾಲಯ ಸೀಮಿತಗೊಳಿಸಲಾಗಿತ್ತು. ನಂತರದಲ್ಲಿ ಹೊರಗಿನ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದೆ. ನಗರದಲ್ಲಿ ಎರಡು ರೀಡಿಂಗ್ ಹೌಸ್ ತೆರೆಯಲಾಗಿದ್ದು, ಅಲ್ಲಿಗೆ ಹೋಗಬೇಕಾದರೆ ಶುಲ್ಕ ಭರಿಸಬೇಕಾಗುತ್ತದೆ. ಆದರೆ, ಇಲ್ಲಿ ಯಾವುದೇ ಶುಲ್ಕ ವಿಧಿಸುತ್ತಿಲ್ಲ. ಯುವ ಸಮುದಾಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಯಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲೆಂಬ ಹಿನ್ನೆಲೆಯಲ್ಲಿ ಗ್ರಂಥಾಲಯ ಆರಂಭಿಸಿದೆ. ಡಿವೈಎಸ್ಪಿ ವೆಂಕಟಪ್ಪ ನಾಯಕ ಅವರ ಈ ಕಾರ್ಯ ಜನ ಮೆಚ್ಚುಗೆಗೆ ಪಾತ್ರವಾಗಿದೆ. ಶಾಲಾ-ಕಾಲೇಜು ಮುಗಿದ ಬಳಿಕ ವಿದ್ಯಾರ್ಥಿನಿಯರು-ವಿದ್ಯಾರ್ಥಿಗಳು ಬುತ್ತಿ ಕಟ್ಟಿಕೊಂಡು ಹೋಗಿ, ಅಲ್ಲಿಯೇ ಊಟ ಮಾಡಿ ಪೊಲೀಸ್ ಠಾಣೆಯಲ್ಲಿ ಲಭ್ಯ ನೀರು ಕುಡಿದು ಸಂಜೆಯ ತನಕ ಓದಲಾರಂಭಿಸಿದ್ದಾರೆ.
ಪೊಲೀಸ್ ಠಾಣೆ ಎಂದರೆ ಅಲ್ಲಿ ಆರೋಪಿಗಳು, ಪೊಲೀಸರು, ಶಿಫಾರಸು ವಹಿಸುವವರ ಅಡ್ಡೆ ಎಂಬುದನ್ನು ಅಲ್ಲಗಳೆಯುವ ರೀತಿಯಲ್ಲಿ ಇಲ್ಲಿನ ಕೇಂದ್ರ ಸೇವೆ ಒದಗಿಸುತ್ತಿದೆ. ಪೊಲೀಸ್ ಅಧಿಕಾರಿಗಳ ವಿನೂತನ ಹೆಜ್ಜೆಗೆ ಸಿಬ್ಬಂದಿ ವರ್ಗದವರು ಕೂಡ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಆಧುನಿಕ ದಿನಗಳಲ್ಲೂ ವಿದ್ಯಾರ್ಥಿಗಳು ಹೆಚ್ಚಿನ ರೀತಿಯಲ್ಲಿ ಓದಿಗೆ ಒತ್ತು ನೀಡಬೇಕು. ಶಿಕ್ಷಣದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಲು ತೆರೆದ ಗ್ರಂಥಾಲಯ ಜನ ಸ್ನೇಹಿಯಾಗಿದ್ದು, ಹೆಚ್ಚಿನ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಬೇಕಿದೆ. -ವೆಂಕಟಪ್ಪ ನಾಯಕ, ಡಿವೈಎಸ್ಪಿ, ಸಿಂಧನೂರು
ಕಳೆದ ಎರಡ್ಮೂರು ತಿಂಗಳಿಂದ ನಮಗೆ ತುಂಬ ಅನುಕೂಲವಾಗಿದೆ. ದಿನದ ಎರಡ್ಮೂರು ತಾಸು ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳನ್ನು ಓದುತ್ತಿರುವುದರಿಂದ ಹೆಚ್ಚು ಸಹಕಾರಿಯಾಗಿದ್ದು, ಪೊಲೀಸ್ ಕಚೇರಿಯೊಳಗೆ ಗ್ರಂಥಾಲಯ ಇರುವುದರಿಂದ ಹೆಚ್ಚಿನ ಭದ್ರತೆಯಿದೆ. -ಸೃಷ್ಟಿ, ಪಿಯುಸಿ ವಿದ್ಯಾರ್ಥಿನಿ, ಸಿಂಧನೂರು
-ಯಮನಪ್ಪ ಪವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ
Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು
Cabinet Meeting: ಬೀದರ್, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.