ಓವರ್‌ಹೆಡ್‌ ಟ್ಯಾಂಕ್‌ ಸ್ಥಳಾಂತರಕ್ಕೆ ಸ್ಥಳೀಯರ ಆಗ್ರಹ


Team Udayavani, Feb 10, 2022, 2:52 PM IST

23tank

ಸುರಪುರ: ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆ ಅಡಿ ಟೇಲರ್‌ ಮಂಜಿಲ್‌ ಹತ್ತಿರ ನಿರ್ಮಿಸುತ್ತಿರುವ ಓವರ್‌ಹೆಡ್‌ ಟ್ಯಾಂಕ್‌ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು. ನೀಲ ನಕ್ಷೆಯಲ್ಲಿ ಗುರುತಿಸಿದಂತೆ ನಿಗ ದಿತ ಸ್ಥಳದಲ್ಲಿ ಟ್ಯಾಂಕ್‌ ನಿರ್ಮಿಸಬೇಕು ಎಂದು ನಗರಸಭೆ ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡ ನಾಯಕ ಆಗ್ರಹಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕುಡಿಯುವ ನೀರು ಸರಬರಾಜು ಯೋಜನೆ ಅಡಿ ಕ್ರಿಯಾಯೋಜನೆ ಮತ್ತು ನೀಲನಕ್ಷೆಯಲ್ಲಿ ಗುರುತಿಸಿರುವ ಸ್ಥಳಗಳಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಿಸುತ್ತಿಲ್ಲ ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಬೇರೆಡೆ ಟ್ಯಾಂಕ್‌ ನಿರ್ಮಿಸುತ್ತಿರುವುದನ್ನು ಖಂಡಿಸುವುದಾಗಿ ಹೇಳಿದರು.

ಟ್ಯಾಂಕ್‌ ನಿರ್ಮಾಣಕ್ಕೆ ತಹಶೀಲ್ದಾರ್‌ ಕಚೇರಿ ಹತ್ತಿರ ಸ್ಥಳ ಗುರುತಿಸಲಾಗಿದೆ. ಆದರೆ ಯಾರದೋ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಟೇಲರ್‌ ಮಂಜಿಲ್‌ ಹತ್ತಿರ ಟ್ಯಾಂಕ್‌ ನಿರ್ಮಿಸುತ್ತಿರುವುದು ಸರಿಯಲ್ಲ. ಇದರಿಂದ ಸಮರ್ಪಕ ನೀರು ಸರಬರಾಜು ಆಗದೆ ಜನರಿಗೆ ತೊಂದರೆಯಾಗಲಿದೆ. ಸರಕಾರದ ಕೋಟ್ಯಂತರ ರೂ. ನಷ್ಟವಾಗಲಿದೆ ಎಂದು ಆರೋಪಿಸಿದರು.

ಟೇಲರ್‌ ಮಂಜಿಲ್‌ ಸ್ಥಳ ಹುಲಕಲ್‌ ಗುಡ್ಡಕ್ಕಿಂತಲೂ ಎತ್ತರದಲ್ಲಿದೆ. ಮುಖ್ಯ ಟ್ಯಾಂಕ್‌ನಿಂದ ಟೇಲರ್‌ ಮಂಜಿಲ್‌ ಬಳಿ ನಿರ್ಮಿಸುತ್ತಿರುವ ಟ್ಯಾಂಕ್‌ ಗೆ ನೀರು ಹರಿಸಲು ಸಾಧ್ಯವೇ ಇಲ್ಲ. ಎತ್ತರ ಪ್ರದೇಶ ಆಗದ್ದರಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಯೋಜನೆಯ ಉದ್ದೇಶ ಈಡೇರುವುದಿಲ್ಲ. ಜನರಿಗೆ ನೀರು ದೊರಕುವುದಿಲ್ಲ. ಆದ್ದರಿಂದ ಈ ಟ್ಯಾಂಕ್‌ ನಿರ್ಮಾಣ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು. ಈ ಮೊದಲು ಗುರುತಿಸಿದಂತೆ ತಹಶೀಲ್ದಾರ್‌ ಕಚೇರಿ ಬಳಿ ನಿರ್ಮಿಸಬೇಕು. ಇಲ್ಲದಿದ್ದರೆ ನಗರಸಭೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಸದಸ್ಯರಾದ ಜುಮ್ಮಣ್ಣ ಕೆಂಗುರಿ, ನಾಸೀರಹುಸೇನ್‌ ಕುಂಡಾಲೆ, ಖಮುರುದ್ದೀನ್‌, ಪ್ರಮುಖರಾದ ಶಕೀಲ ಐಮದ್‌, ಸಿದ್ರಾಮ ಎಲಿಗಾರ, ಜಹೀರ್‌, ಸಣ್ಣ ಮಲ್ಕಪ್ಪ ಬಿರಾದಾರ, ಲಿಯಾಖತ್‌ ಹುಸೇನ್‌ ಇದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.