Raichur: ನುಗ್ಗಿ ಬಂದ ಲಾರಿ; ಬೈಕ್ ಸವಾರರಿಬ್ಬರ ದುರ್ಮರಣ
Team Udayavani, Oct 13, 2024, 2:18 PM IST
ರಾಯಚೂರು: ತಾಲೂಕಿನ ಚಿಕ್ಕಸೂಗುರು ಬಳಿಯ ಹೈದರಾಬಾದ್ ಮುಖ್ಯರಸ್ತೆಯಲ್ಲಿ ಲಾರಿಯೊಂದು ನುಗ್ಗಿ ಬಂದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿಲ್ಪ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆಂಧ್ರದ ಇರ್ಚೆಡ್ ಗ್ರಾಮದ ಜನಾರ್ದನ (35), ಲಿಂಗಸೂಗೂರಿನ ಚನ್ನಬಸವ ಪಾಟೀಲ್ (26) ಮೃತ ದುರ್ದೈವಿಗಳು. ಶಿವಬಸಪ್ಪ ಎನ್ನುವ ಯುವಕ ಬೈಕ್ ನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಮೇಲೆ ಹರಿದಿದೆ. ಒಂದು ಬೈಕ್ ಮಾತ್ರವಲ್ಲದೇ ಇನ್ನೂ ಎರಡು ಬೈಕ್ ಗಳ ಮೇಲೆಯೂ ಹರಿದಿದ್ದು ಬೈಕ್ ಸವಾರರು ಕೊಂಚದರಲ್ಲಿ ತಪ್ಪಿಸಿಕೊಂಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಗ್ರಾಮೀಣ ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!
Martin Box Office: ಹೇಗಿದೆ ʼಮಾರ್ಟಿನ್ʼ ಹವಾ.. ಎರಡು ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು?
Dharwad: ಸಿಎಂ ಸಿದ್ದು ವಿರುದ್ದ ಪ್ರತಿಭಟನೆ: ಬಿಜೆಪಿ ಮುಖಂಡರು ವಶಕ್ಕೆ
Vijayapura: ಸಿ.ಟಿ.ರವಿ ಪ್ರಕರಣ ಹಿಂಪಡೆದ ಬಗ್ಗೆ ಬಿಜೆಪಿಯವರು ಯಾಕೆ ಹೇಳಲ್ಲ: ಎಂಬಿ ಪಾಟೀಲ್
Yuva: ರೌಡಿಸಂ ಸುತ್ತ ಯುವ ರಾಜಕುಮಾರ್: ಹೊಸ ಚಿತ್ರಕ್ಕೆ 3 ನಿರ್ಮಾಪಕರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.