ಘೋಷಣೆಗೆ ಸೀಮಿತವಾಯ್ತೇ ಆಸರೆ?ಉಪಚುನಾವಣೆ ಹೊತ್ತಲ್ಲಿ ಮತ್ತೆ ಮುನ್ನೆಲೆಗೆ

ರಾಜೀವ ಗಾಂಧಿ ವಸತಿ ನಿಗಮ ಇದುವರೆಗೂ ಯಾವುದೇ ಪ್ರಗತಿ ನಡೆಸಿಲ್ಲ.

Team Udayavani, Jan 12, 2021, 4:48 PM IST

ಘೋಷಣೆಗೆ ಸೀಮಿತವಾಯ್ತೇ ಆಸರೆ?ಉಪಚುನಾವಣೆ ಹೊತ್ತಲ್ಲಿ ಮತ್ತೆ ಮುನ್ನೆಲೆಗೆ

Representative Image

ಮಸ್ಕಿ: ವಸತಿ ಯೋಜನೆಯಲ್ಲಿ ನಿರ್ಮಿಸಿಕೊಂಡ ಮನೆಗಳ ಬಾಕಿ ಮೊತ್ತವೇ 8 ಕೋಟಿ ರೂ. ದಾಟಿದೆ. ಇದರ ನಡುವೆಯೂ ಸರಕಾರ ಮಸ್ಕಿ ಕ್ಷೇತ್ರಕ್ಕೆ ಹೊಸ ಮನೆಗಳ ಘೋಷಣೆ ಮಾಡಿತ್ತು. ಆದರೆ ಇವು ಎರಡೂ ಕ್ಷೇತ್ರದ ಫಲಾನುಭವಿಗಳಿಗೆ ಇದುವರೆಗೂ ದಕ್ಕಿಲ್ಲ. ಒಂದು ತಿಂಗಳ ಹಿಂದೆ ಮಸ್ಕಿ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಲಿದೆ ಎನ್ನುವ ಮುನ್ಸೂಚನೆ ಅರಿತು ಸ್ವತಃ ವಸತಿ ಖಾತೆ ಮಂತ್ರಿ ವಿ.ಸೋಮಣ್ಣರೇ ಮಸ್ಕಿ ಪಟ್ಟಣಕ್ಕೆ ಆಗಮಿಸಿ ಘೋಷಣೆ
ಮಾಡಿದ್ದರು. ವಿವಿಧ ವಸತಿ ಯೋಜನೆಯಲ್ಲಿ ನಿರ್ಮಿಸಿಕೊಂಡ ಮನೆಗಳ ಬಾಕಿ ಮೊತ್ತ ಬಿಡುಗಡೆ ಜತೆಗೆ ಮಸ್ಕಿ ಮತ್ತು ಬಸವ ಕಲ್ಯಾಣಕ್ಕೆ ತಲಾ 7500ರಂತೆ 15,000 ಮನೆಗಳನ್ನು ಸರಕಾರ ಬಿಡುಗಡೆ ಮಾಡಲಿದೆ ಎಂದು ಘೋಷಿಸಿದ್ದರು.

ಸಚಿವರ ಹೇಳಿಕೆ ಬೆನ್ನಲ್ಲೇ ರಾಜೀವ್‌ಗಾಂಧಿ  ವಸತಿ ನಿಗಮ ಆದೇಶ ಹೊರಡಿಸಿ ವಿಶೇಷ ಪ್ರಕರಣದಡಿ ಮಸ್ಕಿ ಮತ್ತು ಬಸವಕಲ್ಯಾಣಕ್ಕೆ ವಿವಿಧ ಯೋಜನೆಗಳಲ್ಲಿ ತಲಾ 7500 ಮನೆಗಳನ್ನು ಹಂಚಿಕೆ ಮಾಡಿತು. ಆದರೆ ಗ್ರಾಪಂ ಚುನಾವಣೆ ಘೋಷಣೆಯಾಗಿದ್ದರಿಂದ ನೀತಿ ಸಂಹಿತೆ ಜಾರಿಯಾಗಿ ಈ ಮನೆಗಳ ಹಂಚಿಕೆಗೆ ಬ್ರೇಕ್‌ ಬಿದ್ದಿತ್ತು. ಈಗ ಚುನಾವಣೆ ಮುಗಿದಿದೆ. ಆದರೆ ಈ ಬಗ್ಗೆ ಸರಕಾರ, ರಾಜೀವ ಗಾಂಧಿ ವಸತಿ ನಿಗಮ ಇದುವರೆಗೂ ಯಾವುದೇ ಪ್ರಗತಿ ನಡೆಸಿಲ್ಲ. ಕೇವಲ ಮನೆಗಳನ್ನು ಬಿಡುಗಡೆ ಮಾಡಲಾಗಿದೆ ಎನ್ನುವ ಆದೇಶ ಬಿಟ್ಟರೆ ಇದುವರೆಗೂ ಬೇರೆ ಪತ್ರ ವ್ಯವಹಾರ ನಡೆದಿಲ್ಲ.

ಇಲ್ಲಿ 8 ಕೋಟಿ ರೂ. ಬಾಕಿ: ಸಚಿವರು ಘೋಷಣೆ ಮಾಡಿದ ಹೊಸ ಮನೆಗಳ ಕಥೆ ಹೀಗಾದರೆ, ಕಳೆದ 2015-16ರಿಂದ 2017-18ರವರೆಗೂ ಬಸವ ವಸತಿ, ಅಂಬೇಡ್ಕರ್‌ ನಿವಾಸ, ಬಸವ ವಸತಿ ಹೆಚ್ಚುವರಿ ಯೋಜನೆ ಸೇರಿ ಇತರೆ ಯೋಜನೆಗಳಲ್ಲಿ ನಿರ್ಮಿಸಿಕೊಂಡ ಮನೆಗಳ ಮೊತ್ತವೇ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಇಂತಹ ಮನೆ ನಿರ್ಮಿಸಿಕೊಂಡು ಸಹಾಯಧನಕ್ಕಾಗಿ  ಅಲೆದಾಡುತ್ತಿರುವ ಫಲಾನುಭವಿಗಳ ಬಾಕಿ ಮೊತ್ತ ಡಿಸೆಂಬರ್‌ ಮೊದಲ ವಾರದಲ್ಲಿ 9,74,48,427 ರೂ. ಇತ್ತು. ಆದರೆ ಸಚಿವರು ಮಸ್ಕಿಗೆ ಭೇಟಿ ನೀಡಿ ತೆರಳಿದ ಬಳಿಕ ಬಾಕಿ ಮೊತ್ತದಲ್ಲಿ ಕೇವಲ 1 ಕೋಟಿ ರೂ. ಮಾತ್ರ ಬಿಡುಗಡೆಯಾಗಿತ್ತು. ಆದರೆ ಉಳಿದ ಮೊತ್ತ ಇದುವರೆಗೂ ಬಿಡುಗಡೆಯಾಗಿಲ್ಲ. ಹೀಗಾಗಿ ಮಸ್ಕಿ ಕ್ಷೇತ್ರದ ಒಟ್ಟು 27 ಗ್ರಾಪಂಗಳ ವಸತಿ ಯೋಜನೆ ಬಾಕಿ ಮೊತ್ತ 8.74 ಕೋಟಿ ರೂ. ಇನ್ನು ಬಾಕಿ ಉಳಿದಿದೆ.

ತಾಂತ್ರಿಕ ನೆಪ: ಕಳೆದ ನಾಲ್ಕೈದು ವರ್ಷಗಳಿಂದ ನಿರ್ಮಿಸಿಕೊಂಡ ಮನೆಗಳ ಬಾಕಿ ಮೊತ್ತ ಪಾವತಿಗೆ ತಾಂತ್ರಿಕ ಅಡಚಣೆ ಉಂಟಾಗಿದೆ ಎನ್ನುವ ನೆಪ
ರಾಜೀವ ಗಾಂಧಿ  ವಸತಿ ನಿಗಮದ ಅಧಿಕಾರಿಗಳು ಹೇಳುತ್ತಿದ್ದಾರೆ. ಆಧಾರ್‌ ಕಾರ್ಡ್‌ ಲಿಂಕ್‌ ಇರದೇ ಇರುವುದು, ಫಲಾನುಭವಿಗಳ ಬ್ಯಾಂಕ್‌ ಖಾತೆ ಬದಲಾವಣೆ ಸೇರಿ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸಿದೆ. ಈ ಸಮಸ್ಯೆ ಪಟ್ಟಿ ಮಾಡಿ ಸರಿ ಮಾಡಿ ವರದಿ ನೀಡಲು ಆಯಾ ಪಂಚಾಯಿತಿ ಅಧಿಕಾರಿಗಳಿಗೆ ನಿಗಮ ಸೂಚಿಸಿದೆ. ಆದರೆ ಇದುವರೆಗೂ ಪಿಡಿಒಗಳು ಈ ಬಗ್ಗೆ ಗಮನ ಹರಿಸದೇ ಇರುವುದರಿಂದ ಮನೆ ಕಟ್ಟಿಕೊಂಡ ಫಲಾನುಭವಿಗಳಿಗೆ ಮತ್ತೆ ಅಲೆದಾಟವೇ ಗತಿಯಾಗಿದೆ.

*ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.