Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

ಅರ್ಧಕ್ಕೆ ನಿಂತ‌ ಶೌಚಾಲಯ ಕಟ್ಟಡ

Team Udayavani, Sep 25, 2024, 10:28 PM IST

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

ಮಸ್ಕಿ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲು ಸರ್ಕಾರ ಲಕ್ಷಾಂತರ ರೂಪಾಯಿ ವ್ಯಯಿಸುತ್ತಿದೆ, ಆದರೆ ಸರ್ಕಾರದ ಹಣ ಯಾವ ರೀತಿ ಪೋಲು ಆಗುತ್ತಿದೆ ಎಂಬುದಕ್ಕೆ ತಾಲೂಕಿನ ಮಾರಲದಿನ್ನಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ನಿರ್ಮಿಸಿರುವ‌‌ ಶೌಚಾಲಯ ಕಟ್ಟಡವೇ ಸಾಕ್ಷಿಯಾಗಿದೆ.

ಇಲ್ಲಿನ ಸರ್ಕಾರಿ ಶಾಲೆಯಲ್ಲಿ 70ಕ್ಕೂ ಹೆಚ್ಚಿನ ಮಕ್ಕಳು ಇದ್ದು, ಮಕ್ಕಳಿಗೆ ಮೂತ್ರ ವಿಸರ್ಜನೆಗೆ ಅನುಕೂಲವಾಗಲೆಂದು ನರೇಗಾ ಯೋಜನೆ ಅಡಿಯಲ್ಲಿ 5ಲಕ್ಷ ರೂ.ವೆಚ್ಚದಲ್ಲಿ ಶೌಚಾಲಯ ಕಟ್ಟಡ ನಿರ್ಮಿಸಿ ಗುತ್ತಿಗೆದಾರರು ಅರ್ಧಕ್ಕೆ ಬಿಟ್ಟಿರುವುದರಿಂದ ಶೌಚಾಲಯ ಗೋಡೆ ಶಿಥಿಲಾವಸ್ಥೆಗೆ ತಲುಪಿದ್ದು, ಮೂತ್ರ ವಿಸರ್ಜನೆಗೆ ಶಾಲಾ ಮಕ್ಕಳು ಶಿಕ್ಷಕರು ಪರದಾಡುವಂತಾಗಿದೆ.

ಶಾಲಾ ಕೊಠಡಿಯಲ್ಲೆ ಮೂತ್ರ ವಿಸರ್ಜನೆ
ಇಲ್ಲಿನ ಸರ್ಕಾರಿ ಶಾಲೆಯಲ್ಲಿ ಶೌಚಾಲಯ ಕಟ್ಟಡ ಕಾಮಗಾರಿ‌ ನೆನೆಗುದಿಗೆ ಬಿದ್ದಿರುವುದರಿಂದ ಶಾಲೆಯ ಆವರಣದಲ್ಲಿನ ಹಳೆ ಕಟ್ಟಡದಲ್ಲಿ ಶಾಲಾ ಮಕ್ಕಳು ಮೂತ್ರ ವಿಸರ್ಜನೆ ಮಾಡುತ್ತಿದ್ದು, ಶಿಕ್ಷಕರು ಹೊರ ಹೋಗುವ ಪರಿಸ್ಥಿತಿ ನಿರ್ಮಾಣ ಆಗಿದೆ. ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿದೆ. ಅದರೇ ಅನುದಾನ ಬಿಡುಗಡೆಯಾದರು , ಸಹ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶೌಚಾಲಯ ಕಾಮಗಾರಿ ಅರ್ಧಕ್ಕೆ ಮೊಟಕು ಗೊಳಿಸಲಾಗಿದೆ.

ಹೀಗಾಗಿ ಶಾಲೆಯ ಮಕ್ಕಳು ಪ್ರಾಣಭಯದಲ್ಲೇ ಹಳೆ ಕಟ್ಟಡದ ಕೊಠಡಿಯಲ್ಲಿ ಮೂತ್ರ. ವಿಸರ್ಜನೆ ಮಾಡುತ್ತಿದ್ದು, ಮೂತ್ರ ವಿಸರ್ಜನೆ ‌ಮಾಡುತ್ತಿರುವ ಹಳೇ ಕೊಠಡಿಯಲ್ಲಿ ಸೊಳ್ಳೆ ಉತ್ಪತ್ತಿಯಾಗಿ ಡೇಂಘೀ, ಮಲೇರಿಯಾಗಳಂತ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.‌ಅರ್ಧಕ್ಕೆ‌ ಮೊಟಕುಗೊಳಿಸಿರುವ ಶೌಚಾಲಯ ಕಟ್ಟಡ ಪೂರ್ಣಗೊಳಿಸಿ ಶಾಲಾ‌ ಮಕ್ಕಳಿಗೆ ಅನುಕೂಲ‌ ಕಲ್ಪಿಸಬೇಕೆಂದು ಶಾಲಾ ಮಕ್ಕಳ ಪೋಷಕರು ‌ಆಗ್ರಹಿಸಿದ್ದಾರೆ.

ಮುಖ್ಯ ದ್ವಾರದ ಮುಂದೆ ಶೌಚಾಲಯ ಕಟ್ಟಡ ನಿರ್ಮಾಣ:
ಶೌಚಾಲಯ ಕಟ್ಟಡವನ್ನು ತರಗತಿ ಕೋಣೆ, ಶಾಲಾ ಮುಖ್ಯದ್ವಾರದಿಂದ ಅಂತರದಲ್ಲಿ ಶೌಚಾಲಯ ಕಟ್ಟಡ ಕಟ್ಟಬೇಕಿತ್ತು, ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆದಿಂದಾಗಿ ಶಾಲೆಯ ಕಾಂಪೌಂಡ್ ಗೇಟಿನ ಮುಂಭಾಗದಲ್ಲಿ ಕಟ್ಟಲಾಗಿದೆ. ಶೌಚಾಲಯ ಬಳಕೆ ಮಾಡಿದ ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಗಬ್ಬು ವಾಸನೆ ಬೀರುವ ಸಾಧ್ಯತೆಗಳಿದೆ. ಅರ್ಧ ಕಟ್ಟಿರುವ ಶೌಚಾಲಯ ಕಟ್ಟಡವನ್ನು ತೆರವುಗೊಳಿಸಿ ಸೂಕ್ತ ಜಾಗದಲ್ಲಿ ಶೌಚಾಲಯ ಕಟ್ಟಡ ನಿರ್ಮಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ಕಟ್ಟಿರುವ ಶೌಚಾಲಯ ಕಟ್ಟಡ ಪರಿಶೀಲಿಸಿ, ಕಟ್ಟಡ ಬೇಗನೆ ಮುಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ಶಿವಾನಂದರೆಡ್ಡಿ ,‌ ನರೇಗಾ.ಎಡಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Manipal: ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Arrest

Ajjampura: ಪತ್ನಿಯ ಶೀಲ ಶಂಕಿಸಿ 5 ವರ್ಷದ ಮಗಳನ್ನೇ ಕೊಂದ ತಂದೆ ಬಂಧನ

Belthangady: ಐ.ಡಿ.ಬಿ.ಐ. ಬ್ಯಾಂಕ್‌ನಿಂದ ಧರ್ಮಸ್ಥಳ ಭೇಟಿ

Belthangady: ಐ.ಡಿ.ಬಿ.ಐ. ಬ್ಯಾಂಕ್‌ನಿಂದ ಧರ್ಮಸ್ಥಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ಚಿತ್ರಾನ್ನ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

Mantralya-Shree

Thirupathi Laddu: ದೇಗುಲಗಳು ಸರಕಾರದ ಹಿಡಿತದಿಂದ ಮುಕ್ತವಾಗಲಿ: ಶ್ರೀಸುಬುಧೇಂದ್ರ ಸ್ವಾಮೀಜಿ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Manipal: ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.