Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

ಹದೆಗೆಟ್ಟ ಗ್ರಾಮೀಣ ರಸ್ತೆಗಳು: ಸಂಚಾರಕ್ಕೆ ದುಸ್ತರ

Team Udayavani, Jul 4, 2024, 6:34 PM IST

Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

ಮಸ್ಕಿ: ಸಮೀಪದ ಮಾರಲದಿನ್ನಿ, ಅಡವಿಭಾವಿ, ಅಂಕುಶದೊಡ್ಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಹುತೇಕ ರಸ್ತೆಗಳು ಗುಂಡಿಮಯವಾಗಿದ್ದು ವಾಹನ ಚಾಲಕರು, ಗ್ರಾಮೀಣ ಜನರು ಸಮಸ್ಯೆ ಎದುರಿಸುವಂತಾಗಿದೆ.

ಹದಗೆಟ್ಟ ರಸ್ತೆಯಲ್ಲಿ ಪ್ರತಿನಿತ್ಯ ಸಂಚರಿಸುವುದೇ ಸವಾಲಾಗಿ ಪರಿಣಮಿಸಿದೆ. ರಸ್ತೆಯುದ್ದಕ್ಕೂ ಗುಂಡಿಗಳದ್ದೇ ದರ್ಬಾರು ಇದ್ದು, ಮಾರಲದಿನ್ನಿ ಗ್ರಾಪಂ ವ್ಯಾಪ್ತಿಯ ಮಾರಲದಿನ್ನಿ ತಾಂಡಾ, ಮಾರಲದಿನ್ನಿ, ಉಸ್ಕಿಹಾಳ, ಅಡವಿಭಾವಿ ಗ್ರಾಪಂ ವ್ಯಾಪ್ತಿಯ ಬೆನಕನಾಳ, ಬೆಲ್ಲದಮರಡಿ, ಅಡವಿಭಾವಿ ತಾಂಡಾ, ತೀರ್ಥಭಾವಿ ಹಾಗೂ ಅಂಕುಶದೊಡ್ಡಿ ಗ್ರಾಪಂ ವ್ಯಾಪ್ತಿಯ ಕಾಟಗಲ್ಲ, ಮುದಬಾಳ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಂಪರ್ಕಿಸುವ ಬಹುತೇಕ ರಸ್ತೆಗಳು ಗುಂಡಿಮಯವಾಗಿವೆ.

ಇವೆಲ್ಲ ಗ್ರಾಮೀಣ ರಸ್ತೆಗಳಾದರೂ ವಾಹನಗಳ ಸಂಚಾರ ಸಾಕಷ್ಟು ಇದೆ. ಆಟೋಗಳು, ಖಾಸಗಿ ವಾಹನಗಳು, ವಿವಿಧ ಶಾಲಾ ವಾಹನಗಳು, ಖಾಸಗಿ ಬಸ್‌ಗಳು, ಸರ್ಕಾರಿ ಬಸ್ಸುಗಳು ಈ ರಸ್ತೆಯುದ್ದಕ್ಕೂ ಸಂಚರಿಸುತ್ತವೆ. ಈ ಭಾಗದ ರಸ್ತೆಗಳು ಒಂದು ವರ್ಷದ ಹಿಂದೆ ಚೆನ್ನಾಗಿದ್ದವು. ಮಸ್ಕಿ ನಾಲಾ ಯೋಜನೆ ಕಾಲುವೆ ಆಧುನೀಕರಣ ಕಾಮಗಾರಿ ಮಾಡುವಾಗ ಲಾರಿ, ಟಿಪ್ಪರ್‌ಗಳಂತಂಹ ದೊಡ್ಡ ದೊಡ್ಡ ವಾಹನಗಳು ಮರಳು, ಸಿಮೆಂಟ್, ಕಬ್ಬಿಣದ ಸರಳು ಹಾಗೂ ಇನ್ನಿತರ ವಸ್ತುಗಳನ್ನು ತುಂಬಿಕೊಂಡು ಈ ರಸ್ತೆ ಮುಖೇನ ಸಂಚರಿಸಿರುವುದರಿಂದ ರಸ್ತೆಗಳ ಡಾಂಬರು ಸಂಪೂರ್ಣ ಕಿತ್ತುಹೋಗಿದ್ದು, ಹಾಗೂ ಬೆಲ್ಲದಮರಡಿ, ಬೆನಕನಾಳ ಗುಡ್ಡದ ಭಾಗಗಳಲ್ಲಿ ಅಕ್ರಮವಾಗಿ ಮರಂ ಸಾಗಾಣಿಕೆ ಮಾಡುವ ಟಿಪ್ಪರ್, ಟ್ರ್ಯಾಕ್ಟರ್ ವೇಗವಾಗಿ ಓಡಾಡುತ್ತಿದ್ದು, ಇದರಿಂದ ರಸ್ತೆ ತುಂಬೆಲ್ಲ ಗುಂಡಿಗಳು ಬಿದ್ದಿವೆ.

ವಾಹನ ಸವಾರರು ಕೈಯಲ್ಲಿ ಜೀವ ಹಿಡಿದುಕೊಂಡು ಓಡಾಡುವಂತಾಗಿದೆ. ಬೈಕ್ ಸವಾರರು ವೇಗವಾಗಿ ಚಲಿಸಿ ಕೆಲವೊಮ್ಮೆ ಗುಂಡಿಗಳಿಗೆ ಬಿದ್ದು ಗಾಯಗೊಂಡಿರುವ ನಿದರ್ಶನಗಳಿವೆ. ಜನಪ್ರತಿನಿಧಿಗಳು ಈ ಭಾಗದ ರಸ್ತೆಗಳ ಮೂಲಕ ಓಡಾಡಿ ಜನರ ಸಮಸ್ಯೆ ಅರಿತುಕೊಳ್ಳಬೇಕು ಹಾಗೂ ಹದಗೆಟ್ಟಿರುವ ಗ್ರಾಮೀಣ ಭಾಗದ ರಸ್ತೆಗಳಿಗೆ ಡಾಂಬರೀಕರಣ ಮಾಡುವ ಮೂಲಕ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಸಾರ್ವಜನಿಕರು ಶಾಸಕರಿಗೆ ಪತ್ರಿಕೆ ಮೂಲಕ ಮನವಿ ಮಾಡಿದ್ದಾರೆ.

ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯುದ್ದಕ್ಕೂ ಅಲ್ಲಲ್ಲಿ ಗುಂಡಿಗಳು ಬಿದ್ದಿದ್ದರಿಂದ ವಾಹನ ಸವಾರರು ಸುಗಮವಾಗಿ ಓಡಾಡಲು ಕಿರಿಕಿರಿ ಉಂಟಾಗಿದೆ. ಕೆಲವೊಮ್ಮೆ ರಾತ್ರಿ ಸಮಯದಲ್ಲಿ ಬೈಕ್ ಮೇಲೆ ಬರುವಾಗ ಗುಂಡಿ ಬಿದ್ದಿದ್ದು, ಕೈ ಕಾಲುಗಳಿಗೆ ಗಾಯಗಳಾಗಿವೆ. ಶಾಸಕರು ಇತ್ತ ಗಮನ ಹರಿಸಿ ಹದಗೆಟ್ಟಿರುವ ರಸ್ತೆಗಳಿಗೆ ಡಾಂಬರೀಕರಣ ಮಾಡಬೇಕು.

ಟಾಪ್ ನ್ಯೂಸ್

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

terror attack on Army camp in Jammu and Kashmir’s Rajouri

Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

ಕಾರ್ಮಿಕರು ಚಹಾ ಕುಡಿಯಲು ಹೋಗಿದ್ದರಿಂದ ತಪ್ಪಿತು ದುರಂತ

Vijayapura; ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Raichur; ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ

12-raichur

Balaganur: ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಇಂದು;ಶ್ರದ್ಧಾ ಭಕ್ತಿಯಿಂದ ಪೂಜೆ, ಚಿಣ್ಣರ ಸಂಭ್ರಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.