ಮೋದಿ ಕಾರ್ಯಕ್ರಮಕ್ಕೆ ಆಹ್ವಾನ ಬಂದಿಲ್ಲ: ಶ್ರೀರಾಮುಲು
Team Udayavani, Jan 19, 2023, 11:30 PM IST
ರಾಯಚೂರು: ಎಷ್ಟು ಜನರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂಬುದರ ಬಗ್ಗೆ ಪ್ರಧಾನಿ ಕಚೇರಿಯಿಂದ ಶಿಷ್ಟಾಚಾರ ಬಂದಿರುತ್ತದೆ. ಯಾದಗಿರಿ ಹಾಗೂ ಕಲಬುರಗಿಯಲ್ಲಿ ನಡೆಯುತ್ತಿರುವ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಬಂದಿಲ್ಲ. ಆ ಕಾರಣದಿಂದ ನಾನು ತೆರಳಿಲ್ಲ ಎಂದು ಸಾರಿಗೆ ಖಾತೆ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ಯಾವುದೇ ದಾಳಿಯಾದರೂ ಅದನ್ನು ರಾಮುಲು ಅವರಿಗೆ ಸಂಬಂಧ ಕಲ್ಪಿಸುವುದು ಸರಿಯಲ್ಲ. ಬಳ್ಳಾರಿಯಲ್ಲಿ ಸಾಕಷ್ಟು ಜನರು ಪರಿಚಿತರಿದ್ದಾರೆ. ಆ ಕಾರಣಕ್ಕೆ ನನ್ನನ್ನು ಎಳೆಯುವುದು ಸರಿಯಲ್ಲ. ಆ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ, ಅದು ವ್ಯಾಪಾರಸ್ಥರ ಮೇಲೆ ನಡೆದ ದಾಳಿಯಾಗಿದ್ದು, ಕಾನೂನು ಪ್ರಕಾರ ಕ್ರಮವಾಗುತ್ತದೆ ಎಂದರು.
ಜನಾರ್ದನ ರೆಡ್ಡಿ ಕಾರ್ಯಕ್ರಮದ ಕುರಿತು ನನ್ನ ಟ್ವಿಟರ್ ಖಾತೆಯಿಂದ ಸಂದೇಶ ಹೋಗಿರುವ ವಿಚಾರವನ್ನು ಈಗಾಗಲೇ ಸಂಬಂ ಧಿಸಿದವರೊಂದಿಗೆ ಚರ್ಚಿಸಲಾಗಿದ್ದು, ಖಾತೆ ಹ್ಯಾಕ್ ಆಗಿರುವುದರ ಬಗ್ಗೆ ತಿಳಿಸಿದ್ದಾರೆ. ಈ ವಿಚಾರವನ್ನು ಪೊಲೀಸರ ಗಮನಕ್ಕೆ ತರಲಾಗಿದೆ. ರಹಸ್ಯವಾಗಿ ಜನಾರ್ದನ ರೆಡ್ಡಿ ಅವರನ್ನು ಭೇಟಿ ಮಾಡುವ ಅಗತ್ಯ ನನಗಿಲ್ಲ. ಭೇಟಿಯಾಗುವುದಾದರೆ ಬಹಿರಂಗವಾಗಿ ಭೇಟಿಯಾಗುವೆ. ರೆಡ್ಡಿ ಪಕ್ಷ ಬಿಜೆಪಿ ಬಿ ಟೀಮ್ ಎನ್ನುವ ಆರೋಪ ಸತ್ಯಕ್ಕೆ ದೂರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.