ಅ.1ರಿಂದ ಜಾನುವಾರು ಗಣತಿ: ಸಚಿವ ನಾಡಗೌಡ


Team Udayavani, Sep 29, 2018, 6:30 AM IST

nadgouda-news.jpg

ರಾಯಚೂರು: ಅ.1ರಿಂದ 20ನೇ ರಾಷ್ಟ್ರೀಯ ಜಾನುವಾರು ಗಣತಿ ಪ್ರಕ್ರಿಯೆ ಶುರುವಾಗಲಿದೆ. ಮೊದಲ ಬಾರಿಗೆ ಎಲ್ಲ ಮಾಹಿತಿಯನ್ನು ಟ್ಯಾಬ್ಲೆಟ್‌ಗಳಲ್ಲಿ ದಾಖಲಿಸಲಾಗುತ್ತಿದೆ ಎಂದು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಖಾತೆ ಸಚಿವ ವೆಂಕಟರಾವ್‌ ನಾಡಗೌಡ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ಮೂರು ತಿಂಗಳು ಗಣತಿ ಕಾರ್ಯ ನಡೆಯಲಿದೆ. ಎಲ್ಲ ರೀತಿಯ ಸಾಕು ಪ್ರಾಣಿಗಳ ಮಾಹಿತಿ ಸಂಗ್ರಹಿಸಲಾಗುತ್ತಿದೆ. ದೇಶಾದ್ಯಂತ ಗಣತಿ ಕಾರ್ಯ ನಡೆಯಲಿದ್ದು, 30,227 ಗ್ರಾಮಗಳು, 623 ವಾರ್ಡ್‌ಗಳ 1.5 ಕೋಟಿ ಕುಟುಂಬಗಳಲ್ಲಿ ಗಣತಿ ನಡೆಸಲಾಗುವುದು.

ಕಳೆದ ಐದು ವರ್ಷಗಳ ಹಿಂದೆ ನಡೆಸಿದ ಸರ್ವೇಯಲ್ಲಿ ಜಾನುವಾರುಗಳ ಸಂಖ್ಯೆ ಇಳಿಮುಖವಾಗಿರುವುದು ಗಮನಕ್ಕೆ ಬಂದಿದೆ. ಯಾವ ರೈತರು ಕುರಿ, ಕೋಳಿ ಸಾಕಣೆ, ಮೀನುಗಾರಿಕೆಯಂಥ ಉಪಕಸುಬು ಮಾಡಿದ್ದಾರೋ ಅವರು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂಬ ವಿಚಾರ ಗೊತ್ತಾಗಿದೆ.ಹೀಗಾಗಿ ಆ ದಿಸೆಯಲ್ಲಿ ಸರ್ಕಾರ ಉಪಕಸುಬುಗಳಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದರು.

ಗಣತಿಯಲ್ಲಿ ಎಷ್ಟು ಮನೆಯಲ್ಲಿ, ಯಾವ ರೀತಿಯ ಎಷ್ಟು ಜಾನುವಾರುಗಳಿವೆ? ಕುರಿ, ಕೋಳಿ, ಹಂದಿ ಸೇರಿ ಯಾವೆಲ್ಲ ಪ್ರಾಣಿ ಸಾಕಲಾಗಿದೆ? ಅದರ ಜತೆಗೆ ಹಾಲು ಕರೆಯುವ ಯಂತ್ರ, ಹೊರೆ ಕಟ್ಟುವ ಯಂತ್ರ, ಮೇವು ಕಟಾವು ಯಂತ್ರ ಹೀಗೆ ಯಾವೆಲ್ಲ ಯಂತ್ರಗಳು ಬಳಕೆಯಾಗುತ್ತಿವೆ ಎಂಬಿತ್ಯಾದಿ ಮಾಹಿತಿ ಪಡೆಯಲಾಗುವುದು. ಅದರ ಜತೆಗೆ ಮಾಲೀಕರ ವಿವರ, ಸಾಮಾಜಿಕ ಸ್ಥಿತಿಗತಿ, ಜಾನುವಾರು ಹೊಂದಿರುವ, ಹೊಂದದಿರುವ ಕುಟುಂಬಗಳ ವಿವರ ದಾಖಲಿಸಲಾಗುವುದು ಎಂದರು.

ಪಶುಭಾಗ್ಯ ಯೋಜನೆ ಸರ್ವೇ ಆಗಿದ್ದು, ನಿರೀಕ್ಷೆಯಷ್ಟು ಅನುದಾನ ಬಂದಿಲ್ಲ. ಹೀಗಾಗಿ ಅದನ್ನು ತಡೆ ಹಿಡಿದಿದ್ದು, ಮುಖ್ಯಮಂತ್ರಿ ಜತೆ ಸಮಾಲೋಚಿಸಿ ಅದನ್ನು ಹೆಚ್ಚು ಮಾಡಿಸುವ ಪ್ರಯತ್ನಿಸಲಾಗುತ್ತಿದೆ. ಅದರ ಜತೆಗೆ ಎಸ್‌ಸಿ, ಎಸ್‌ಟಿ ಅನುದಾನ ಕೂಡ ಬರುತ್ತಿದೆ. ನರೇಗಾದಡಿ ದನದ ಕೊಟ್ಟಿಗೆ ನಿರ್ಮಿಸುವ ಕೆಲಸ ಕೈಗೊಳ್ಳಲು ಸೂಚಿಸಲಾಗಿದೆ. ಬಿಡಾಡಿ ದನಗಳ ಬಗ್ಗೆ ಆಯಾ ನಗರಸಭೆ, ಪಪಂ, ಪುರಸಭೆಗಳೇ ಕಾಳಜಿ ವಹಿಸಬೇಕು. ಗೋ ಶಾಲೆಗಳಿಗೆ ಸರ್ಕಾರ ಅನುದಾನದ ನೆರವು ನೀಡುತ್ತದೆ. ಅಂಥ ಜಾನುವಾರುಗಳನ್ನು ಅಲ್ಲಿ ಬಿಟ್ಟರೆ ಸರ್ಕಾರ ನಿಭಾಯಿಸಲಿದೆ. ಆದರೆ, ರಸ್ತೆಯಲ್ಲಿ ಬಿಟ್ಟರೆ ಸ್ಥಳೀಯ ಸಂಸ್ಥೆಗಳೇ ಕ್ರಮಕ್ಕೆ ಮುಂದಾಗಬೇಕು ಎಂದರು.

ಚಿಪ್‌ಗ್ಳ ಅಳವಡಿಕೆ: ರಾಜ್ಯದಲ್ಲಿ ಈಗಾಗಲೇ ಸುಮಾರು 50 ಲಕ್ಷ ಜಾನುವಾರುಗಳಿಗೆ ಚಿಪ್‌ ಅಳವಡಿಸಲಾಗಿದೆ. ಆ ಕಾರ್ಯ ಮುಂದುವರಿದಿದೆ. ಇದರಿಂದ ನಮಗೆ ಅಂಕಿ-ಅಂಶ ವಿವರ ಪಡೆಯಲು, ಮಾಲೀಕರ ಮಾಹಿತಿ ಪಡೆಯಲು ಅನುಕೂಲವಾಗುತ್ತಿದೆ. ಅದರ ಜತೆಗೆ ಬೇರೆ ಕಡೆಯಿಂದ ಬಂದ ಜಾನುವಾರುಗಳಿಂದ ಸೋಂಕು ತಗಲುವ ಸಾಧ್ಯತೆ ಇರುತ್ತದೆ. ಅಂಥ ಜಾನುವಾರುಗಳಿಗೆ ಸುಲಭಕ್ಕೆ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದರು.

ಬರದ ಹಿನ್ನೆಲೆಯಲ್ಲಿ ಈಗಾಗಲೇ ಮೇವು ಸಂಗ್ರಹದ ಜತೆ ಮೇವಿನ ಕಿಟ್‌ ವಿತರಿಸಲಾಗುತ್ತಿದೆ. ಇಷ್ಟು ದಿನ ಮಳೆ ಇದ್ದ ಕಾರಣ ವಿತರಣೆ ಮಾಡಿರಲಿಲ್ಲ. ಡೀಸಿಗಳಿಂದ ಮಾಹಿತಿ ಪಡೆದಿದ್ದು ಅಗತ್ಯ ಬಿದ್ದರೆ ಗೋಶಾಲೆ ಆರಂಭಿಸಲಾಗುವುದು.
– ವೆಂಕಟರಾವ್‌ ನಾಡಗೌಡ, ಪಶುಸಂಗೋಪನೆ ಖಾತೆ ಸಚಿವ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.