ಭ್ರಷ್ಟ ಯೋಗೀಶ್ವರ ಸಚಿವನಾಗಿದ್ದೇ ನನಗೆ ಅಪಥ್ಯ: ಎಚ್.ವಿಶ್ವನಾಥ್ ಅಸಮಾಧಾನ

ಸಂಕ್ರಮಣದ ಬಳಿಕ ಒಬ್ಬೊಬ್ಬರಾಗಿ ಸಿಡಿ ಬಿಡುಗಡೆ ಮಾಡುತ್ತೇವೆ

Team Udayavani, Jan 14, 2021, 2:29 PM IST

ಭ್ರಷ್ಟ ಯೋಗೀಶ್ವರ ಸಚಿವನಾಗಿದ್ದೇ ನನಗೆ ಅಪಥ್ಯ: ಎಚ್.ವಿಶ್ವನಾಥ ಅಸಮಾಧಾನ

ರಾಯಚೂರು: ನನಗೆ ಸಚಿವ ಸ್ಥಾನ ನೀಡಿಲ್ಲ ಎನ್ನುವುದಕ್ಕಿಂತ ಭ್ರಷ್ಟ, ದಲ್ಲಾಳಿ ಸಿ.ಪಿ.ಯೋಗೀಶ್ವರ್‌ಗೆ ಸಚಿವ ಸ್ಥಾನ ನೀಡಿರುವುದು ನನಗೆ ಅಪಥ್ಯವಾಗಿದೆ. ಕೂಡಲೇ ಅವರನ್ನು ಸಂಪುಟದಿಂದ ಕೈ ಬಿಡಲಿ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಒತ್ತಾಯ ಮಾಡಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಪುಟ ವಿಸ್ತರಣೆ, ಪುನರ್ ರಚನೆ ಸಿಎಂ ಪರಮಾಧಿಕಾರ. ಇಂಥ ವೇಳೆ ಒತ್ತಡಗಳು ಸಹಜ. ಹಾಗಂತ ಭ್ರಷ್ಟನನ್ನು ಸಚಿವರನ್ನಾಗಿ ಮಾಡುವುದು ಎಷ್ಟು ಸರಿ. 9,731 ಜನರಿಂದ ಮೆಗಾಸಿಟಿ ಹೆಸರಲ್ಲಿ ನೂರಾರು ಕೋಟಿ ರೂ. ಕೊಳ್ಳೆ ಹೊಡೆದಿದ್ದಾನೆ. ಆತನ ವಿರುದ್ಧ ಜನ ನ್ಯಾಯಾಂಗ ಹೋರಾಟ ನಡೆಸಿದ್ದಾರೆ. ನ್ಯಾಯಾಲಯ ಕೂಡ ತನಿಖೆಗೆ ನಿರ್ದೇಶಿಸಿದೆ. ಇಂಥ ವ್ಯಕ್ತಿಗೆ ಸಚಿವ ಸ್ಥಾನ ನೀಡುವುದು ಎಷ್ಟು ಸರಿ ಎಂದರು.

ಸಿಎಂ ಬಿಎಸ್‌ವೈ ಮೇಲೆ ಅಪಾರ ನಂಬಿಕೆ ಇಟ್ಟು 17 ಜನ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರ ರಚಿಸಿದ್ದೇವೆ. ಆದರೆ, ದಲಿತ ಸಚಿವರನ್ನು ಕೈ ಬಿಟ್ಟು ಒಬ್ಬ ಭ್ರಷ್ಟನಿಗೆ ಸಚಿವ ಸ್ಥಾನ ನೀಡಿರುವುದು ಸರಿಯಲ್ಲ. ಮುನಿರತ್ನರಂಥವನ್ನು ಯಾಕೆ ಸಂಪುಟಕ್ಕೆ ಸೇರಿಸಿಕೊಂಡಿಲ್ಲ ಎಂದರು.

ಇದನ್ನೂ ಓದಿ:ಹಣೆಯಲ್ಲಿ ಬರೆದಿದ್ದರೆ ಸಚಿವ ಸ್ಥಾನ ಸಿಗುತ್ತದೆ, ಇಲ್ಲಾಂದ್ರೆ ಇಲ್ಲ: ಮುನಿರತ್ನ

17 ಜನ ಕ್ಷಿಪ್ರ ಕ್ರಾಂತಿ ಮಾಡಿ ಹೊರ ಬಂದಿದ್ದೆವು. ಒಳ್ಳೆಯದಾಗುತ್ತದೆ ಎಂದುಕೊಂಡಿದ್ದೇವೆ. ಆದರೆ ಈ ಬೆಳವಣಿಗೆ ಕಂಡು ಬೇಜಾರಾಗಿದೆ. ದಲಿತ ಸಮುದಾಯದ ನಾಗೇಶ್‌ರನ್ನು ಕೈ ಬಿಡಲಾಗಿದೆ. ಹಿಂದುಳಿದ ಸಮುದಾಯದ ಮುನಿರತ್ನರಿಗೂ ಅವಕಾಶ ನೀಡಿಲ್ಲ ಎಂದರು.

ಸನ್ ಸ್ಟ್ರೋಕ್: ಎಲ್ಲಾ ಗೊತ್ತಾಗುತ್ತದೆ. ಯತ್ನಾಳ್ ಅಥವಾ ಬೇರೆ ಯಾರೋ ಸಿಡಿ ಬಿಡುಗಡೆ ಮಾಡುತ್ತಾರೆ. ಬಿ.ಎಸ್.ಯಡಿಯೂರಪ್ಪ ಬಗ್ಗೆ ಈಗಲೂ ಅಭಿಮಾನವಿದೆ. ಆದರೆ ಬಿಜೆಪಿ ಸರ್ಕಾರದಲ್ಲಿ ಈಗ ನಡೆಯುತ್ತಿರುವುದು ಸನ್ ಸ್ಟ್ರೋಕ್. ಈ ಹಿಂದೆ ಜನತಾ ಪರಿವಾರ ಸನ್ ಸ್ಟ್ರೋಕ್‌ಗೆ ಒಳಗಾಗಿತ್ತು. ಇದೀಗ ಸನ್ ಸ್ಟ್ರೋಕ್, ಫ್ಯಾಮಿಲಿ ಸ್ಟ್ರೋಕ್‌ನಲ್ಲಿ ಬಿಜೆಪಿ ಹಾಳಾಗುತ್ತಿದೆ. ಕಾಂಗ್ರೆಸ್ ಸಹ ಸನ್ ಸ್ಟ್ರೋಕ್‌ನಲ್ಲಿ ಹಾಳಾಗಿ ಹೋಗಿದೆ. ವಿಜಯೇಂದ್ರನಿಂದ ಈಗ ಬಿಜೆಪಿ ಸನ್ ಸ್ಟ್ರೋಕ್‌ಗೆ ಒಳಗಾಗಿದೆ ಎಂದರು.

ಕುಟುಂಬ ರಾಜಕಾರಣಕ್ಕೆ ಬಿಎಸ್‌ವೈ ಬಲಿಯಾಗಿದ್ದಾರೆ ಎಂದು ಬೇಜಾರಾಗಿದೆ. ನಾಲಿಗೆ ಇರುವ ನಾಯಕರಾಗಿದ್ದ ಬಿಎಸ್‌ವೈ ನಾಲಿಗೆ ಇಲ್ಲದ ನಾಯಕರಾಗಿದ್ದಾರೆ. ಅವರು ಕರೆದು ಮಾತನಾಡಿದರೆ ಮಾತನಾಡುತ್ತೇವೆ. ನಾವು ಪರಿಸ್ಥಿತಿಯ ಶಿಶುಗಳಾಗಿದ್ದೇವೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಸರಿಯಾಗಿದ್ದರೆ ಇದೆಲ್ಲಾ ಆಗುತ್ತಿರಲಿಲ್ಲ. ನಾನೇನಾದರೂ ಅಸಂಬದ್ದವಾಗಿ ಮಾತನಾಡಿದರೆ ನನ್ನ ವಿರುದ್ದ ಕ್ರಮ ತೆಗೆದುಕೊಳ್ಳಲಿ. ಯಾರ ಮುಲಾಜು, ಯಾರ ಭಿಕ್ಷೆಯಿಂದ ಸಿಎಂ ಸ್ಥಾನದಲ್ಲಿ ಕುಳಿತಿದ್ದೀರಾ ಎನ್ನುವುದನ್ನು ಯೋಚಿಸಿಕೊಳ್ಳಲಿ ಎಂದು ಬಿಎಸ್‌ವೈ ವಿರುದ್ಧ ಗುಡುಗಿದರು.

ಸಂಕ್ರಮಣದ ಬಳಿಕ ಸಿಡಿ ಬಿಡುಗಡೆಯಾಗಲಿದೆ. ಒಬ್ಬೊಬ್ಬರಾಗಿ ಸಿಡಿ ಬಿಡುಗಡೆ ಮಾಡುತ್ತೇವೆ ಎಂದು ವಿಶ್ವನಾಥ್ ಹೇಳಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.