![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 15, 2020, 4:24 PM IST
ನಾರಾಯಣಪುರ: ಕೊಡೇಕಲ್ ಪಟ್ಟಣದ ನ್ಯಾಯಬೆಲೆ ಅಂಗಡಿಗೆ ಶಾಸಕ ರಾಜುಗೌಡ ಭೇಟಿ ನೀಡಿ ಪರೀಶಿಲನೆ ನಡೆಸಿದರು
ನಾರಾಯಣಪುರ: ಬಯೋಮೆಟ್ರಿಕ್ ಇಲ್ಲ; ಓಟಿಪಿ ಬರಲಿಲ್ಲ ಎಂದು ಇಲ್ಲದ ನೆಪ ಹೇಳಿ ಯಾವ ಪಡಿತರದಾರರನ್ನು ವಾಪಸ್ ಕಳುಹಿಸಬೇಡಿ ಎಂದು ಶಾಸಕ ನರಸಿಂಹನಾಯಕ (ರಾಜುಗೌಡ) ಹೇಳಿದರು.
ಕೊಡೇಕಲ್ ಪಟ್ಟಣದ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಪಡೆದುಕೊಂಡು ಅವರು ಮಾತನಾಡಿದರು. ಇದೇ ವೇಳೆ ಪಡಿತರದಾರರು ಓರ್ವ ಮಹಿಳೆ “ನಮ್ಮಲ್ಲಿ ಫೋನ್ ಇಲ್ಲ. ಅದಕ್ಕೆ ನಮಗೆ ರೇಷನ್ ಇಲ್ಲ ಎಂದರೆ, ಇನೋರ್ವ ಮಹಿಳೆ ನಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕಿದ್ದು, ಅದಕ್ಕೆ ಪಡಿತರ ಬರುವುದಿಲ್ಲವಂತೆ ಎಂದು ತಮ್ಮ ಅಳಲು ಶಾಸಕರ ಮುಂದೆ ತೋಡಿಕೊಂಡರು.
ಈ ಕುರಿತು ಅಂಗಡಿ ಮಾಲೀಕರಿಂದ ಮಾಹಿತಿ ಪಡೆದ ಶಾಸಕರು, ಜಿಲ್ಲಾ ಆಹಾರ ನಿದೇರ್ಶಕರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಮುಖ್ಯಮಂತ್ರಿಗಳು ನೀಡಿರುವ ಆದೇಶ ಪ್ರತಿ ಕುರಿತಂತೆ ಮಾತನಾಡಿದರು. ಪ್ರತಿಯೊಬ್ಬ ಪಡಿತರದಾರರಿಗೆ ಸಹಿ ಪಡೆಯುವ ಮೂಲಕ ಪಡಿತರ ನೀಡುವಂತೆ ಆದೇಶ ಹೊರಡಿಸಿ ಎಂದು ಹೇಳಿದರು. ಸಿದ್ದನಗೌಡ ಕರಿಭಾವಿ, ಸಂತೋಷ ಕೊಡೇಕಲ್ಮಠ, ಬಸವರಾಜ ಭದ್ರಗೋಳ, ಪ್ರಮೋದ ಜೋಶಿ ಇದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.