ನಿವೇಶನ ಹಂಚಿಕೆಯಾಗ್ತಿಲ್ಲ…ಭೂ ಖರೀದಿ ನಿಲ್ತಿಲ್ಲ


Team Udayavani, Jul 2, 2021, 9:11 PM IST

Udayavani Kannada Newspaper

ಸಿಂಧನೂರು: ವಾಜಪೇಯಿ ನಗರ ವಸತಿ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸುವುದಕ್ಕೆ 30.8 ಎಕರೆ ಭೂಮಿಯಿದ್ದರೂ ಪ್ರಗತಿಯಿಲ್ಲ. ಮತ್ತೆ ಜಮೀನು ಖರೀದಿಸುವ ಉತ್ಸಾಹ ಪ್ರದರ್ಶಿಸಿದ ಇಲ್ಲಿನ ನಗರಸಭೆಯ ಪ್ರಸ್ತಾವನೆಗೆ ರಾಜೀವ್‌ ಗಾಂಧಿ  ವಸತಿ ನಿಗಮ ಪರೋಕ್ಷವಾಗಿ ಚಾಟಿ ಬೀಸಿದೆ. ನಗರದಲ್ಲಿ ವಸತಿ ಸೌಲಭ್ಯ ವಂಚಿತ 5 ಸಾವಿರಕ್ಕೂ ಹೆಚ್ಚು ಜಾಗಕ್ಕಾಗಿ ಅರ್ಜಿ ಸಲ್ಲಿಸಿ 5 ವರ್ಷ ಕಳೆದರೂ ಅವುಗಳಿಗೆ ಮೋಕ್ಷ ಕಲ್ಪಿಸುವಲ್ಲಿ ಆಡಳಿತ ಪಲ್ಟಿ ಹೊಡೆದಿದೆ.

ಈಗಾಗಲೇ ಲಭ್ಯ ಇರುವ ಜಮೀನು ಬಳಸಿಕೊಂಡು ನಿವೇಶನಗಳನ್ನು ಅಭಿವೃದ್ಧಿಪಡಿಸಿ ಅರ್ಜಿದಾರರಿಗೆ ಮಂಜೂರಿ ಮಾಡುವ ಪ್ರಯತ್ನ ಫಲ ನೀಡಿಲ್ಲ. ಫಲಾನುಭವಿಗಳ ಆಯ್ಕೆಗೆ ಸಂಬಂ  ಧಿಸಿ ತೀರ್ಮಾನ ಕೈಗೊಳ್ಳುವುದಕ್ಕೂ ಕಾಳಜಿ ತೋರಿಲ್ಲ. ಇದ್ದ ಜಮೀನು ಬಳಸಿಕೊಳ್ಳದೇ ಮತ್ತೆ ಜಮೀನು ಬೇಕೆಂದು ಕೇಳಿದ್ದಕ್ಕೆ ರಾಜೀವ್‌ ಗಾಂಧಿ  ವಸತಿ ನಿಗಮ ಚಾಟಿ ಬೀಸಿದೆ. 30 ಎಕರೆ ಲಭ್ಯ-ಪ್ರಗತಿ ಏನು?: ನಿವೇಶನ ಹಂಚಿಕೆ ಮಾಡುವ ಮುನ್ನ ಮೊದಲು ಸರಕಾರಿ ಭೂಮಿಗೆ ಆದ್ಯತೆ ನೀಡಬೇಕು.

ಹೀಗಿದ್ದಾಗಲೂ ನಗರಸಭೆ ವ್ಯಾಪ್ತಿಯಲ್ಲಿ 30.8 ಎಕರೆ ಭೂಮಿಯನ್ನು ಸರಕಾರದ ಹಣ ವ್ಯಯಿಸಿ ಖರೀದಿ ಮಾಡಲಾಗಿದೆ. ಸರ್ವೆ ನಂಬರ್‌ 626ರಲ್ಲಿ 11.30 ಎಕರೆ ಜಮೀನು ಪ್ರತಿ ಎಕರೆಗೆ 19 ಲಕ್ಷ ರೂ.ನಂತೆ ಹಣ ಪಾವತಿಸಿ ಪಡೆಯಲಾಗಿದೆ. ಸರ್ವೆ ನಂಬರ್‌ 44ರಲ್ಲಿ 18.12 ಎಕರೆ ಜಮೀನು ಪ್ರತಿ ಎಕರೆಗೆ 22.50 ಲಕ್ಷ ರೂ. ಪಾವತಿಸಿ ಸರಕಾರದಿಂದ ಖರೀದಿ ಮಾಡಲಾಗಿದೆ. ಈ ಜಮೀನಿನಲ್ಲಿ ನಿವೇಶನಗಳನ್ನು ಕಲ್ಪಿಸುವ ಬದಲು ಮತ್ತೆ 42 ಎಕರೆ ಭೂಮಿ ಖರೀದಿಸಲು ಬೇಡಿಕೆ ಇಟ್ಟಿದ್ದನ್ನು ನಿಗಮ ಪ್ರಶ್ನಿಸಿದೆ. ಖರೀದಿಸಿದ ಜಮೀನಿನಲ್ಲಿ ನಿವೇಶನ ಕಲ್ಪಿಸಿದ ಯಾವುದೇ ಮಾಹಿತಿ ಇಲ್ಲವಾದ್ದರಿಂದ ಆ ಬಗ್ಗೆ ಪ್ರಗತಿ ವಿವರ ನೀಡಿ ಎಂದು ರಾಜೀವ್‌ ಗಾಂಧಿ  ವಸತಿ ನಿಗಮ ಕೇಳಿದೆ.

ಇತ್ಯರ್ಥ ಕಾಣದ ಹಳ್ಳ-ಕೊಳ್ಳ ತಗಾದೆ: ಬಡವರ ಕಷ್ಟಕ್ಕೆ ಸ್ಪಂದಿಸಿ ಅವರಿಗೆ ನಿವೇಶನ ಒದಗಿಸಿ, ಅಲ್ಲಿ ಆಶ್ರಯ ಮನೆ ಕಟ್ಟಲು ಖರೀದಿ ಮಾಡಲಾದ ಜಮೀನುಗಳ ಕುರಿತು ತಗಾದೆ ಎದ್ದಿವೆ. ಖರೀದಿ ಮಾಡಲಾದ 11.36 ಎಕರೆ ವಾಸಕ್ಕೆ ಯೋಗ್ಯವಾಗಿಲ್ಲ. 18.12 ಎಕರೆ ಖರೀದಿ ಮಾಡಿದ್ದರೂ ಹೋಗಲು ದಾರಿಯಿಲ್ಲ. ಇಂತಹ ವಿವಾದಗಳೇ ದೊಡ್ಡವಾಗಿದ್ದು, ಅವುಗಳಿಗೆ ಪರಿಹಾರ ಕಲ್ಪಿಸುವ ಇಲ್ಲವೇ ತಾರ್ಕಿಕ ಅಂತ್ಯಕ್ಕೆ ತಲುಪಿಸುವ ಪ್ರಯತ್ನಗಳು ನಡೆದಿಲ್ಲ. ಮಾಜಿ ಶಾಸಕರು ಹಾಗೂ ಹಾಲಿ ಶಾಸಕರ ಪೈಕಿ ಯಾರು ತಪ್ಪಿತಸ್ಥರು ಎಂಬ ಹುಡುಕಾಟವೇ ದೊಡ್ಡದಾಗಿದೆ. ಈ ನಡುವೆ ನಿವೇಶನ ಬಯಸಿದ ಬಡವರು ಬಡವಾಗುತ್ತಿದ್ದಾರೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.