![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 26, 2020, 1:55 PM IST
ರಾಯಚೂರು: ಸಮೀಪದ ಮನ್ಸಲಾಪುರ ಕೆರೆಗೆ ವಿಷಪೂರಿತ ಕೆಮಿಕಲ್ ನೀರನ್ನು ಬಿಡುತ್ತಿದ್ದ ಲಾರಿಯನ್ನು ಗ್ರಾಮಸ್ಥರು ಶನಿವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ಕೈಗಾರಿಕೆ ವಲಯದಿಂದ ರಾತ್ರೋರಾತ್ರಿ ಈ ರೀತಿ ಕೆಮಿಕಲ್ ನೀರನ್ನು ಕೆರೆ ಸಮೀಪದ ಹಳ್ಳಕ್ಕೆ ಹರಿಸಲಾಗುತ್ತಿತ್ತು. ಇದರಿಂದ ಜಲಚರಗಳು ಮೃತಪಟ್ಟರೆ, ಬೆಳೆಗೆ ಹರಿಸಿದರೆ ಬೆಳೆಯೆಲ್ಲ ಸುಟ್ಟು ಹೋಗಿತ್ತಿತ್ತು. ಈ ಬಗ್ಗೆ ಗ್ರಾಮಸ್ಥರಲ್ಲಿ ಆತಂಕ ಮೂಡಿತ್ತು. ಕೆಲ ದಿನಗಳಿಂದ ಕಾದು ಕುಳಿತ್ತಿದ್ದ ಗ್ರಾಮಸ್ಥರಿಗೆ ನಿನ್ನೆ ರಾತ್ರಿ ಕೆಮಿಕಲ್ ಸಾಗಿಸುತ್ತಿದ್ದ ಲಾರಿ ಸಿಕ್ಕಿದೆ. ಆದರೆ, ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
ಕೂಡಲೇ ತನಿಖೆ ನಡೆಸಿ ರಾಸಾಯನಿಕವನ್ನು ಅವೈಜ್ಞಾನಿಕ ವಿಲೇವಾರಿ ಮಾಡುತ್ತಿದ್ದ ಕಂಪನಿಯನ್ನು ಸೀಜ್ ಮಾಡಬೇಕು ಎಂದು ಸ್ಥಳೀಯರು ಆಗ್ರಹ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾಮೀಣ ಠಾಣೆ ಪಿಎಸ್ಐ ರಂಗಪ್ಪ, ಲಾರಿ ರಸ್ತೆ ಬದಿ ನಿಂತಿದೆ. ಕೆಮಿಕಲ್ ಎಲ್ಲಿಗೆ ಸಾಗಿಸಲಾಗುತ್ತಿತ್ತು, ಲಾರಿ ಮಾಲೀಕರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.