ರಾಜಕೀಯ ಏಟಿಗೆ ಡಿಕೆಶಿ ರೂಟ್‌ ಬದಲು?


Team Udayavani, Nov 24, 2020, 6:36 PM IST

ರಾಜಕೀಯ ಏಟಿಗೆ ಡಿಕೆಶಿ ರೂಟ್‌ ಬದಲು?

ಸಿಂಧನೂರು: ತಾಲೂಕಿನಲ್ಲಿ ಕಾಂಗ್ರೆಸ್‌ ಪಕ್ಷ ಇಬ್ಬಣಗಳಾಗಿ ಬಹುದಿನಗಳೇ ಗತಿಸಿದ್ದು, ರಾಜ್ಯ ನಾಯಕರ ಭೇಟಿ ಕಾರ್ಯಕ್ರಮಗಳು ಪರಸ್ಪರಏಟು-ಎದಿರೇಟಿಗೆ ಅಸ್ತ್ರಗಳಾಗಿವೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಸೋಮವಾರ ಮಸ್ಕಿ ಕಾರ್ಯಕ್ರಮಕ್ಕೆ ಸಾಗುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಸಿಂಧನೂರಿಗೆ ಭೇಟಿ ನೀಡುವ ಕಾರ್ಯಕ್ರಮವಿದ್ದರೂ ಕೊನೆ ಕ್ಷಣದಲ್ಲಿ ಬದಲಾದ ರೂಟ್‌ ರಾಜಕೀಯ ವಲಯದಲ್ಲಿಸಂಚಲನ ಮೂಡಿಸಿದೆ. ಮಾಜಿ ಸಚಿವ ಶಿವರಾಜ್‌ ಅಂಗಡಿ ಅವರ ನಿವಾಸದಿಂದ ಕಾರಟಗಿ ಮೂಲಕ ಸಿಂಧನೂರು ಮಾರ್ಗವಾಗಿಯೇ ಮಸ್ಕಿಗೆಡಿಕೆಶಿ ಅವರು ತೆರಳಬೇಕಿತ್ತು. ಪೂರ್ವನಿಗದಿ ವೇಳಾಪಟ್ಟಿಯಿದ್ದರೂ ಕೊನೆಯಲ್ಲಿ ಅವರ ರೂಟ್‌ ಬದಲಾಯಿತು. ಹೆದ್ದಾರಿ ಮಾರ್ಗದ ಹತ್ತಿರದ ಮಾರ್ಗ ಹೊರತುಪಡಿಸಿ ಸುತ್ತುವರಿದು ಮಸ್ಕಿ ತಲುಪಿದರು.  ಸಿಂಧನೂರು ಭೇಟಿ ತಪ್ಪಿಸುವ ಮತ್ತೂಂದು ಬಣದ ಪರೋಕ್ಷ ಲಾಬಿಯೇ ಈ ಬೆಳವಣಿಗೆಗೆ ಕಾರಣವೆಂಬ ಶಂಕೆ ವ್ಯಕ್ತವಾಯಿತು.

ಜಿದ್ದಾಜಿದ್ದಿ ತೀವ್ರ: ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ಕೆ.ವಿರೂಪಾಕ್ಷಪ್ಪ ಅವರ ಹಿಡಿತದಲ್ಲಿಯೇ ಕಾಂಗ್ರೆಸ್‌ ಮುನ್ನಡೆದಿತ್ತು.ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಅವರ ಕುರಿತಾಗಿ ಉಂಟಾದ ಭಿನ್ನಮತಎರಡು ಬಣಗಳಾಗುವ ಮಟ್ಟಿಗೆ ಬೆಳೆದ ಮೇಲೆ ಜಿದ್ದಾಜಿದ್ದಿ ಜೋರಾಗಿದೆ. ಕೆಪಿಸಿಸಿ ಮಾಜಿಕಾರ್ಯದರ್ಶಿ ಕರಿಯಪ್ಪ ಹಾಗೂ ಬಸನಗೌಡಅವರು ಒಂದು ಗುಂಪಾಗಿಯೇ ಸಂಘಟನೆ ಮುಂದುವರಿಸಿದ್ದಾರೆ.

ಎರಡು ದಿನಗಳ ಹಿಂದೆಮಾಜಿ ಶಾಸಕರು, ಮಾಜಿ ಸಂಸದರ ನೇತೃತ್ವದಲ್ಲಿರೈತರ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆನಡೆದರೆ, ಅದೇ ದಿನ ಯುವ ಹಾಗೂ ಮಹಿಳಾ ಕಾಂಗ್ರೆಸ್‌ನಿಂದ ಒಂದೇ ಸಮಯದಲ್ಲಿ ಇಂದಿರಾಗಾಂಧಿ  ಅವರ ಜನ್ಮದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಇದಕ್ಕೂ ಎರಡು ತಿಂಗಳ ಮುನ್ನವೂ ಕೇಂದ್ರ, ರಾಜ್ಯ ಸರಕಾರದ ವೈಫಲ್ಯ ಖಂಡಿಸಿ ಎರಡು ಬಣಗಳಿಂದ ಪ್ರತ್ಯೇಕವಾಗಿತಹಶೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಎರಡು ಕಡೆ ಟೆಂಟ್‌ ಹಾಕಿ ಪ್ರತಿಭಟಿಸಲಾಗಿತ್ತು. ಆ ಟೆಂಟ್‌ನಲ್ಲಿದ್ದವರು ಈ ಕಡೆ ಬರಲಿಲ್ಲ. ಈ ಕಡೆಯಿದ್ದವರು ಆ ಕಡೆಗೆ ಸುಳಿದಿರಲಿಲ್ಲ.

ಪರೋಕ್ಷ ಏಟು: ಕಾಂಗ್ರೆಸ್‌ನ ರಾಜ್ಯ ನಾಯಕರು ಆಗಮಿಸಿದಾಗಲೆಲ್ಲ ಅವರನ್ನು ಸ್ವಾಗತಿಸಿಕೊಳ್ಳುವ ವಿಷಯದಲ್ಲಿ ಯುವ ಕಾಂಗ್ರೆಸ್‌ರಾಜ್ಯಾಧ್ಯಕ್ಷರೇ ಮುಂಚೂಣಿ. ಈ ಹಿಂದೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ತಮ್ಮ ನಿವಾಸಕ್ಕೆ ಕರೆದೊಯ್ದಿದ್ದರು. ರಾಹುಲ್‌ ಗಾಂಧಿ ರೈತ ಪರ ಯಾತ್ರೆ ಕೈಗೊಂಡಾಗಲೂ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷರೇ ಮುಂದೆ ನಿಂತು ಸ್ವಾಗತಿಸಿದ್ದರು. ಆದರೆ, ಇದೇ ಮೊದಲ ಬಾರಿಗೆ ಕೆಪಿಸಿಸಿ ಅಧ್ಯಕ್ಷರನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ನಡೆಸಿದ್ದ ಸಿದ್ಧತೆಗಳು ಫಲ ನೀಡಲಿಲ್ಲ. ಉದ್ದೇಶ ಪೂರ್ವಕವಾಗಿಯೇ ಡಿಕೆಶಿ ಅವರನ್ನು ಸಿಂಧನೂರಿಗೆ ಬರದಂತೆನೋಡಿಕೊಳ್ಳಲು ಮಾರ್ಗ ಬದಲಿಸಿ ಮಸ್ಕಿ ತಲುಪಿಸಲಾಗಿದೆ ಎಂಬ ಮಾತುಗಳು ಕೇಳಿಬಂದಿವೆ.

ಪೈಪೋಟಿ ಕಡಿಮೆಯಿಲ್ಲ : ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಅವರು ಸಿಂಧನೂರಿಗೆ ಆಗಮಿಸುವುದನ್ನು ತಪ್ಪಿಸಲು ಕಾರಣರೆಂದು ಯುವ ಕಾಂಗ್ರೆಸ್‌ ನವರು ಹೇಳಿಕೊಂಡರು. ಆದರೂ, ಪ್ರಯತ್ನ ಕೈ ಬಿಡದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಅವರು ಮಸ್ಕಿಗೆ ತೆರಳಿ ತಮ್ಮ ಬೆಂಬಲಿಗರ ನೇತೃತ್ವದಲ್ಲಿ ಡಿಕೆಶಿ ಅವರಿಗೆ ಹೂಮಾಲೆ ಹಾಕಿ ಸ್ವಾಗತಿಸಿದ್ದಾರೆ. ಮಸ್ಕಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿಕೊಳ್ಳಲು ಹೋಗಿದ್ದ ವೇಳೆಯೂಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮುಂಚೂಣಿಯಲ್ಲಿದ್ದರು. ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ ಇದ್ದರು.

 

-ಯಮನಪ್ಪ ಪವಾರ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.