ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ ರಕ್ಷಿಸಿ: ಸಂಕನೂರ


Team Udayavani, Sep 14, 2022, 5:26 PM IST

13-arts

ಲಿಂಗಸುಗೂರು: ಪಾಶ್ಚಿಮಾತ್ಯ ಸಂಸ್ಕೃತಿ ಮತ್ತು ಆಧುನಿಕತೆ ಭರಾಟೆಯಲ್ಲಿ ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ ನಶಿಸುತ್ತಿದ್ದು, ಇಂತಹ ಪುರಾತನ ಪರಂಪರೆಯುಳ್ಳ ಗ್ರಾಮೀಣ ಸೊಗಡಿನ ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ ಸಂರಕ್ಷಣೆ ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದು ಎಸಿ ರಾಹುಲ್‌ ಸಂಕನೂರ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ನಿಮಿತ್ತ ಕರ್ನಾಟಕ ಜಾನಪದ ಪರಿಷತ್ತು ಮತ್ತು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾ ಧಿಕಾರದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಗಡಿ, ನಾಡು, ನುಡಿಚಿಂತನೆ ಮತ್ತು ಮುದಗಲ್‌ ಕೋಟೆ ಕೃತಿ ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಜಾನಪದ ಸಾಹಿತ್ಯವು ಕಥೆ, ನೃತ್ಯ, ಹಾಡು ಸೇರಿದಂತೆ ವಿಶಿಷ್ಟ ಆಯಾಮಗಳಲ್ಲಿ ಕಾಣಬಹುದಾಗಿದ್ದು, ಈ ಸಾಹಿತ್ಯವು ಯಾವಾಗ, ಯಾರು ರಚಿಸಿದರು ಎನ್ನುವುದಕ್ಕಿಂತ ಬಾಯಿಂದ ಬಾಯಿಗೆ ಬಂದಿರುವ ಶುದ್ಧ ಸಾಹಿತ್ಯವಾಗಿದೆ. ಇಂತಹ ವಿಶಿಷ್ಟ ಜಾನಪದ ಸಾಹಿತ್ಯ ಕಳೆದುಕೊಂಡರೆ ನಮ್ಮತನ ಕಳೆದುಕೊಂಡಂತಾಗಲಿದ್ದು, ಸನಾತನ ಭಾರತೀಯ ಪರಂಪರೆ ಜಾನಪದ ಸಾಹಿತ್ಯದ ಮರು ಆವಿಷ್ಕಾರವಾಗಬೇಕಿದೆ. ನಗರ ಪ್ರದೇಶ, ಶಾಲಾ-ಕಾಲೇಜುಗಳಲ್ಲಿ ಜಾನಪದ ಸಾಹಿತ್ಯ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಬೇಕಿದೆ ಎಂದರು.

ಪರಿಷತ್‌ ಜಿಲ್ಲಾಧ್ಯಕ್ಷೆ ಡಾ| ಅರುಣಾ ಹಿರೇಮಠ ಮಾತನಾಡಿ, ವಿಜ್ಞಾನ, ತಂತ್ರಜ್ಞಾನ ಬೆಳೆದಂತೆಲ್ಲ ನಗರ ಪ್ರದೇಶಗಳಲ್ಲಿ ಜಾನಪದ ಸಾಹಿತ್ಯ ಕ್ಷೀಣಿಸುತ್ತಿದ್ದು, ಜಾನಪದ ಪರಿಷತ್‌ ವತಿಯಿಂದ ಜಾನಪದ ಸಾಹಿತ್ಯ ಉಳಿವಿಗಾಗಿ ಸಮ್ಮೇಳನ ಮತ್ತು ಕಲೆ, ಸಾಹಿತ್ಯ ಸಂಕಿರಣ ಏರ್ಪಡಿಸುತ್ತ ಜಾನಪದ ಸಾಹಿತ್ಯದ ಕುರಿತು ಜಾಗೃತಿ ಮೂಡಿಸುವ ಕಾರ್ಯ ನಿರಂತರ ನಡೆಸಲಾಗುವುದು ಎಂದರು.

ಈ ವೇಳೆ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಡಾ| ಶರಣಪ್ಪ ಆನೆಹೊಸೂರು, ಸಾಹಿತಿ ಗಿರಿರಾಜ ಹೊಸಮನಿ, ಡಾ| ಅಶೋಕ ಪಾಟೀಲ್‌, ಲಕ್ಷ್ಮೀದೇವಿ ನಡುವಿನಮನಿ, ಶಿವಮ್ಮ ಪಟ್ಟದಕಲ್‌, ಗುರುರಾಜ ಗೌಡೂರು, ಮೌನೇಶ ಹಿರೇಹಣಗಿ, ಡಾ| ಮಹಾಂತಗೌಡ ಪಾಟೀಲ್‌, ಕೆ. ಖಾದರಪಾಶಾ, ಶಿವಾನಂದ ನರಹಟ್ಟಿ, ಡಾ| ಬಸವರಾಜ ನಾಯಕ, ವಿಜಯಲಕ್ಷ್ಮೀ, ಬಸವರಾಜ, ನಿರ್ಮಲಾ ಹಿರೇಮಠ, ಸುಮಂಗಲಾ ಪತ್ತಾರ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.