ದಾರಿ ಕಾಣದೇ ಹೆದ್ದಾರಿಯಲ್ಲೇ ನಿಂತ ಕೊಚ್ಚೆ ನೀರು!


Team Udayavani, Jan 11, 2022, 9:47 PM IST

ಯಗ್ದಸಡೆರತಗವ

ರಾಯಚೂರು: ತಾಲೂಕು ಕೇಂದ್ರವಾಗಬೇಕು ಎಂಬ ಮಹತ್ವದ ಬೇಡಿಕೆಯುಳ್ಳ ಹೋಬಳಿ ಕೇಂದ್ರ ಗಬ್ಬೂರಿನಲ್ಲಿ ಸಮಸ್ಯೆಯೊಂದು ಬಗೆ ಹರಿಯದೆ ಉಳಿದಿದೆ. ರಾಯಚೂರು-ಕಲಬುರಗಿಗೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿಯಲ್ಲೇ ಚರಂಡಿ ನೀರು ಶೇಖರಣೆಯಾಗುತ್ತಿದ್ದು, ಸಾರ್ವಜನಿಕರಿಗೆ ಕಂಟಕವಾಗಿ ಪರಿಣಮಿಸಿದೆ.

ದೇವದುರ್ಗ ಕ್ಷೇತ್ರಕ್ಕೆ ಒಳಪಡುವ ಈ ಊರಿನ ಸಮಸ್ಯೆ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಮೇಲ್ನೋಟಕ್ಕೆ ಇದು ಸಂಪೂರ್ಣ ಅವೈಜ್ಞಾನಿಕ ಕಾಮಗಾರಿಯಿಂದಾದ ಸಮಸ್ಯೆ. ಗ್ರಾಪಂ ಕೇಂದ್ರವಾಗಿರುವ ಈ ಊರಿನಲ್ಲಿ ಸಮಸ್ಯೆಯೊಂದು ತಿಂಗಳಾನುಗಟ್ಟಲೇ ಜೀವಂತವಾಗಿರುವುದು ವಿಪರ್ಯಾಸ. ಇದು ರಾಜ್ಯ ಹೆದ್ದಾರಿಯಾಗಿದ್ದು, ನಿತ್ಯ ಸಾವಿರಾರು ವಾಹನಗಳು ಸಂಚರಿಸುವುದರಿಂದ ಸಮಸ್ಯೆ ತೀವ್ರತೆ ಹೆಚ್ಚಾಗುತ್ತಿದೆ. ಏನಿದು ಸಮಸ್ಯೆ?: ಸುಮಾರು 15 ವರ್ಷಗಳ ಹಿಂದೆ ಇಲ್ಲಿ ಚರಂಡಿ ನಿರ್ಮಿಸಲಾಗಿತ್ತು.

ಆಗ ಈ ಊರು ನಿರೀಕ್ಷಿತ ಮಟ್ಟದಲ್ಲಿ ಬೆಳೆದಿರಲಿಲ್ಲ. ಈಗ ತಾಲೂಕು ಕೇಂದ್ರವಾಗುವ ಮಟ್ಟಿಗೆ ಬೆಳೆದಿದ್ದು, ಜನಸಂಖ್ಯೆ, ಗ್ರಾಮದ ವಿಸ್ತಾರ ಕೂಡ ಹೆಚ್ಚಾಗಿದೆ. ಖಾಸಗಿಯವರ ಜಮೀನಿಗೆ ಚರಂಡಿ ಕಾಮಗಾರಿ ಕೊನೆಗಾಣಿಸಲಾಗಿತ್ತು. ಆದರೆ, ಈಗ ಆ ಜಮೀನಿನ ಮಾಲೀಕರು ಚರಂಡಿ ನೀರು ಹೊಲಕ್ಕೆ ಹರಿಸದಂತೆ ಆಕ್ಷೇಪ ವ್ಯಕ್ತಪಡಿಸಿದ್ದು, ಅಡ್ಡಗಟ್ಟಿದ್ದಾರೆ. ಬರೀ ಮಳೆ ನೀರಾದರೆ ಜಮೀನಿಗೆ ಹರಿಸಲು ಅಭ್ಯಂತರವಿಲ್ಲ. ಆದರೆ, ಕೊಚ್ಚೆ ನೀರು ಜಮೀನಿಗೆ ಬಿಟ್ಟುಕೊಳ್ಳುವುದು ಹೇಗೆ ಎಂಬುದು ಜಮೀನಿನ ಮಾಲೀಕರ ಆಕ್ಷೇಪ.

ಅಲ್ಲದೇ, ಇದೇ ಸ್ಥಳದಲ್ಲೇ ಕಾಲುವೆ ಹಾದು ಹೋಗಿದ್ದು, ಕಾಲುವೆಗೆ ಹರಿಸಿದರೆ ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶೀಘ್ರ ಇತ್ಯರ್ಥಗೊಳ್ಳಬೇಕಿದೆ: ಸಮಸ್ಯೆ ದಿನೇ-ದಿನೇ ಜಟಿಲಗೊಳ್ಳುತ್ತ ಸಾಗುತ್ತಿದೆ. ಗ್ರಾಮಸ್ಥರು ಈ ಸಮಸ್ಯೆ ಬಗ್ಗೆ ಈಗಾಗಲೇ ಸಂಬಂಧಿ ಸಿದ ಇಲಾಖೆಗಳ ಅ ಧಿಕಾರಿಗಳಿಗೆ ತಿಳಿಸಿದ್ದಾರೆ. ಅಧಿ ಕಾರಿಗಳು ಕೂಡ ಸ್ಥಳ ಪರಿಶೀಲಿಸಿದ್ದು, ಮುಂದಿನ ಕ್ರಮಗಳ ಭರವಸೆ ನೀಡಿದ್ದಾರೆ. ಆದರೆ, ತಿಂಗಳುಗಳೇ ಕಳೆದರೂ ಯಾವೊಂದು ಬೆಳವಣಿಗೆ ಕಂಡು ಬರುತ್ತಿಲ್ಲ.

ಈ ರಸ್ತೆ ಮುಖ್ಯ ವಾಣಿಜ್ಯಕ ತಾಣವಾಗಿದ್ದು, ಹೋಟೆಲ್‌ಗ‌ಳು, ವಾಣಿಜ್ಯ ಮಳಿಗೆಗಳು, ಬೃಹತ್‌ ದೇವಸ್ಥಾನ, ಮನೆಗಳ ಮಾಲೀಕರು ಇದೇ ಚರಂಡಿಗೆ ನೀರು ಹರಿಸುತ್ತಿದ್ದಾರೆ. ಎಲ್ಲ ನೀರು ರಸ್ತೆಯಲ್ಲೇ ನಿಂತ ಕಾರಣ ಫುಟಪಾತ್‌ ಕೂಡ ಮುಳುಗಿ ಓಡಾಡುವುದು ಕಷ್ಟವಾಗುತ್ತಿದೆ. ಕೊಚ್ಚೆ ನೀರಿನಲ್ಲಿ ಜನ ವ್ಯಾಪಾರ ಮಾಡಲು ಬಾರದ ಕಾರಣ ವರ್ತಕರಿಗೆ ನಷ್ಟವಾಗುತ್ತಿದೆ. ಹೆದ್ದಾರಿಯೆಲ್ಲ ಹಾಳಾಗಿ ಹೋಗಿದೆ. ಈ ಮಾರ್ಗದಿಂದ 3-4 ಕಿ.ಮೀ. ದೂರದಲ್ಲಿ ಹಳ್ಳ ಹರಿಯುತ್ತಿದ್ದು, ಅಲ್ಲಿಗೆ ಸಂಪರ್ಕ ಕಲ್ಪಿಸಲಿ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ, ಅದು ಎಷ್ಟರ ಮಟ್ಟಿಗೆ ಸಾಧ್ಯವಾಗಲಿದೆಯೋ ನೊಡಬೇಕಿದೆ.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.