![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 12, 2022, 9:46 PM IST
ರಾಯಚೂರು: ಮಂತ್ರಾಲಯದಲ್ಲಿ ಭಕ್ತರ ಆರಾಧ್ಯದೈವ, ಕಲಿಯುಗ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಿಮಿತ್ತ ಶುಕ್ರವಾರ ಪೂರ್ವಾರಾಧನೆ ವಿಜೃಂಭಣೆಯಿಂದ ನೆರವೇರಿಸಲಾಯಿತು.
ಪ್ರತಿ ವರ್ಷ ಮಧ್ಯಾರಾಧನೆ ದಿನ ರಾಯರಿಗೆ ತಿರುಪತಿ ತಿಮ್ಮಪ್ಪನ ಸನ್ನಿಧಾನದಿಂದ ಶೇಷವಸ್ತ್ರ ಬರುವ ಸಂಪ್ರದಾಯವಿದೆ. ಈ ಬಾರಿ ಪೂರ್ವಾರಾಧನೆ ದಿನ ತಮಿಳುನಾಡಿನ ಶ್ರೀರಂಗಂ ದೇವಸ್ಥಾನದಿಂದ ಶ್ರೀ ರಂಗನಾಥ ಸ್ವಾಮಿಯ ಶೇಷವಸ್ತ್ರಗಳನ್ನು ರಾಯರ ಆರಾಧನೆಗೆ ತಂದಿದ್ದು ವಿಶೇಷವಾಗಿತ್ತು.
ಪೂರ್ವಾರಾಧನೆ ನಿಮಿತ್ತ ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿಸಲಾಯಿತು. ಬೆಳಗಿನ ಜಾವ ನಿರ್ಮಾಲ್ಯ ವಿಸರ್ಜನೆ, ಗ್ರಂಥ ಪಾರಾಯಣ ಬಳಿಕ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ವೃಂದಾವನಕ್ಕೆ ವಿಶೇಷ ಅಭಿಷೇಕ, ಅಲಂಕಾರ ಸೇವೆ ನೆರವೇರಿಸಲಾಯಿತು. ಜತೆಗೆ ರಾಯರ ಪ್ರಭಾವಳಿ ಇಟ್ಟು ಬೃಂದಾವನವನ್ನು ಅಲಂಕರಿಸಲಾಗಿತ್ತು.
ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಪ್ರಹ್ಲಾದರಾಜರ ಪಾದುಕೆ ಪೂಜೆ ನೆರವೇರಿಸಿದರು. ನಂತರ ಚಿನ್ನದ ಮಂಟಪದಲ್ಲಿ ಶ್ರೀಮೂಲ ರಘುಪತಿ ವೇದವಾಸ್ಯರ ಪೂಜೆ, ಅಲಂಕಾರ ಸಂತರ್ಪಣೆ, ಹಸ್ತೋದಕ, ಮಹಾಮಂಗಳಾರತಿ ಸೇವೆ ನೆರವೇರಿಸಲಾಯಿತು.
ಅದಕ್ಕೂ ಮುನ್ನ ಶ್ರೀರಂಗಂನಿಂದ ಆಗಮಿಸಿದ ಶೇಷವಸ್ತ್ರಗಳನ್ನು ಬರಮಾಡಿಕೊಂಡ ಶ್ರೀಗಳು, ಅವುಗಳನ್ನು ರಾಯರಿಗೆ ಸಮರ್ಪಿಸಿದರು. ಈ ವೇಳೆ ಆಶೀರ್ವಚನ ನೀಡಿ, ತಮಿಳುನಾಡು ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವಿಶೇಷ ಆದೇಶ ಹೊರಡಿಸುವ ಮೂಲಕ ಮಂತ್ರಾಲಯ ರಾಯರ ಮಠಕ್ಕೆ ಶ್ರೀರಂಗಂ ದೇವಸ್ಥಾನದಿಂದ ಶೇಷವಸ್ತ್ರ ಕಳುಹಿಸಿರುವುದು ಖುಷಿಯ ವಿಚಾರ. ಇದು ಕೇವಲ ಒಂದು ದೇವಸ್ಥಾನಕ್ಕೆ ಸೀಮಿತವಾಗಬಾರದು. ಎಲ್ಲ ಸಂತರ ಸನ್ನಿಧಿಗಳಿಗೂ ಈ ರೀತಿ ಪ್ರಸಾದ ರೂಪದ ವಸ್ತ್ರ ಕಳುಹಿಸುವ ನಿಟ್ಟಿನಲ್ಲಿ ಸರ್ಕಾರಗಳು ಕ್ರಮ ವಹಿಸಬೇಕು. ಇಷ್ಟು ವರ್ಷ ತಿರುಪತಿಯಿಂದ ಸನ್ನಿಧಿಗೆ ತಿಮ್ಮಪ್ಪನ ಶೇಷವಸ್ತ್ರ ಬರುತ್ತಿತ್ತು. ಈ ವರ್ಷದಿಂದ ಶ್ರೀರಂಗಂ ಸನ್ನಿ ಧಿಯಿಂದಲೂ ಬರುತ್ತಿದೆ. ಈ ಸೇವೆ ನೀಡಲು ಬಂದ ತಮಿಳುನಾಡು ಸರ್ಕಾರದ ಪ್ರತಿನಿ ಧಿಗಳಿಗೆ ದೇವಸ್ಥಾನದ ಆಡಳಿತ ಮಂಡಳಿಗೆ ಧನ್ಯವಾದಗಳು ಎಂದರು.
ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಶ್ರೀಮಠದ ಪ್ರವಚನ ಮಂದಿರದಲ್ಲಿ ಪೂರ್ವಾರಾಧನೆ ನಿಮಿತ್ತ ವಿವಿಧ ಪಂಡಿತರಿಂದ ಪ್ರವಚನ ಜರುಗಿತು. ಪೂರ್ವಾರಾಧನೆಗೆ ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು ಸೇರಿ ದೇಶ-ವಿದೇಶಗಳಿಂದ ಭಕ್ತರ ದಂಡು ಹರಿದು ಬಂದಿದೆ. ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ಸ್ನಾನಕ್ಕೆ ಅವಕಾಶ ಇಲ್ಲದಿರುವುದು ಭಕ್ತರ ಬೇಸರಕ್ಕೆ ಕಾರಣವಾಯಿತು. ಅಪಾಯದ ಹಿನ್ನೆಲೆಯಲ್ಲಿ ಭಕ್ತರು ನದಿಗೆ ಇಳಿಯದಂತೆ ಪದೇಪದೆ ಸೂಚನೆ ನೀಡಲಾಗುತ್ತಿತ್ತು. ನದಿ ಪಾತ್ರದಲ್ಲಿರುವ ಶವರ್ಗಳಲ್ಲೇ ಸ್ನಾನ ಮಾಡಿದ ಭಕ್ತರು, ರಾಯರ ದರ್ಶನ ಪಡೆದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.