ರಾಯಚೂರು: ವ್ಯಾಪಾರ-ವಹಿವಾಟು ಮುಕ್ತ, ಮುಂಜಾಗ್ರತೆ ವಹಿಸಲು ಸಲಹೆ

ಅಲ್ಲದೇ ನಿತ್ಯ ಸ್ಯಾನಿಟೈಸೇಶನ್‌ ಮಾಡುವಂತೆಯೂ ತಿಳಿಸಲಾಗಿದೆ ಎಂದು ವಿವರಿಸುತ್ತಾರೆ ಅಧಿಕಾರಿಗಳು

Team Udayavani, Jun 21, 2021, 8:13 PM IST

Unlock

ರಾಯಚೂರು: ಕೊರೊನಾ 2ನೇ ಅಲೆ ಕಾರಣಕ್ಕೆ ಲಾಕ್‌ಡೌನ್‌ ಜಾರಿಗೊಳಿಸಿದ ಪರಿಣಾಮ ಕೆಲ ದಿನಗಳಿಂದ ಜಿಲ್ಲಾದ್ಯಂತ ಹೇರಿದ್ದ ಲಾಕ್‌ ಡೌನ್‌ ತೆರವುಗೊಳಿಸಿದ್ದು, ಸೋಮವಾರದಿಂದ ವ್ಯಾಪಾರ ವಹಿವಾಟಿಗೆ ಮುಕ್ತಗೊಳಿಸಲಾಗಿದೆ. ಸಂಜೆ 7ಗಂಟೆ ನಂತರ ಮತ್ತೆ ನೈಟ್‌ ಕರ್ಫ್ಯೂ ಮುಂದುವರಿಯಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ನಿರ್ದಿಷ್ಟ ವ್ಯಾಪಾರ ವಹಿವಾಟು ಹೊರತಾಗಿಸಿ ಬಹುತೇಕ ಎಲ್ಲ ವ್ಯಾಪಾರ ಮೊದಲಿನಂತೆ ಇರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಕೋವಿಡ್‌-19ರ 2ನೇ ಅಲೆ ಸಾಂಕ್ರಾಮಿಕ ರೋಗ ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಜೂ.21ರ ಬೆಳಗ್ಗೆ 6 ಗಂಟೆಯಿಂದ ಜು.5ರ ಬೆಳಗ್ಗೆ 5 ಗಂಟೆವರೆಗೆ ಜಿಲ್ಲಾದ್ಯಂತ
ಕಂಟೈನ್‌ಮೆಂಟ್‌ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಕೆಲವೊಂದು ಚಟುವಟಿಕೆಗಳಿಗೆ ವಿನಾಯಿತಿ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸೋಂಕು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಅಗತ್ಯ ವಸ್ತುಗಳು ಖರೀದಿ, ಅಗತ್ಯ ಸೇವೆಗಳು ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು ಹಾಗೂ ಕೃಷಿ ಚಟುವಟಿಕೆಗಳನ್ನು ಒಳಗೊಂಡಂತೆ ಇನ್ನೂ ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಇನ್ನೂ ನಿತ್ಯ ಸಂಜೆ 7ರಿಂದ ಬೆಳಗ್ಗೆ 5 ಗಂಟೆವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ವಾರಂತ್ಯದ ಕರ್ಫ್ಯೂನ್ನು ಜೂ.25ರ ರಾತ್ರಿ 7ಗಂಟೆಯಿಂದ ಜೂ.28ರ ಬೆಳಗ್ಗೆ 5ರ ವರೆಗೆ ಹಾಗೂ ಜು.2ರ ರಾತ್ರಿ 7 ಗಂಟೆಯಿಂದ ಜು.5ರ ಬೆಳಗ್ಗೆ 5ರವರೆಗೆ ಜಾರಿಗೊಳಿಸಲಾಗುವುದು.

ಹವಾನಿಯಂತ್ರಿತ ಅಂಗಡಿಗಳು, ಹವಾನಿಯಂತ್ರಿತ ಶಾಪಿಂಗ್‌ ಸಂಕೀರ್ಣಗಳು, ಮಾಲ್‌ಗ‌ಳನ್ನು ಹೊರತುಪಡಿಸಿ ಎಲ್ಲ ಅಂಗಡಿಗಳಿಗೆ ಬೆಳಗ್ಗೆ 6ರಿಂದ ಸಂಜೆ 5ರವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಹವಾನಿಯಂತ್ರಿತ ಹೊರತುಪಡಿಸಿ ಎಲ್ಲ ಹೋಟೆಲ್‌ಗ‌ಳು, ರೆಸ್ಟೋರೆಂಟ್‌ಗಳು, ಬಾರ್‌ ಗಳು ಮತ್ತು ಕ್ಲಬ್‌ಗಳು ಬೆಳಗ್ಗೆ 6ರಿಂದ ಸಂಜೆ 5ರವರೆಗೆ ಆಸನದ ಸಾಮರ್ಥ್ಯ 50ರಷ್ಟು ಮೀರದಂತೆ ಕೆಲಸ ನಿರ್ವಹಿಸಬಹುದು. ಆದರೆ, ಬಾರ್‌, ರೆಸ್ಟೋರೆಂಟ್‌, ಕ್ಲಬ್‌ಗಳಲ್ಲಿ ಕುಳಿತು ಮದ್ಯ ಸೇವಿಸಲು ಅನುಮತಿ ಇರುವುದಿಲ್ಲ. ವಾರಂತ್ಯದ ಕರ್ಫ್ಯೂ ವೇಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅನುಮತಿಸಲಾಗಿದೆ.

ಸಾರಿಗೆ ಬಸ್‌ ಸಂಚಾರ ಆರಂಭ: ಇನ್ನೂ ಮುಖ್ಯವಾಗಿ ಸಾರಿಗೆ ಬಸ್‌ಗಳ ಸಂಚಾರ ಕೂಡ ಆರಂಭವಾಗಲಿದ್ದು, ಜಿಲ್ಲೆಯಲ್ಲಿ ಸೋಮವಾರದಿಂದ 100 ಬಸ್‌ಗಳು ಓಡಾಟ ಆರಂಭಿಸಲಿವೆ. ರಸ್ತೆಗಿಳಿಯಲಿವೆ. ಪ್ರತಿ ಬಸ್‌ ನಲ್ಲಿ ಕೇವಲ 30 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ, ವ್ಯಾಕ್ಸಿನೇಶನ್‌ ಹಾಗೂ ಕೊರೊನಾ ನೆಗೆಟಿವ್‌ ಇರುವ ಸಿಬ್ಬಂದಿಗೆ ಮಾತ್ರ ಸೇವೆಗೆ ಬರಲು ತಿಳಿಸಲಾಗಿದೆ. ಅಲ್ಲದೇ, ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಈಗಾಗಲೇ ಬಸ್‌ ಗಳು, ನಿಲ್ದಾಣಗಳು ಹಾಗೂ ಡಿಪೋಗಳನ್ನು ಸ್ಯಾನಿಟೈಸೇಶನ್‌ ಮಾಡಿಸಲಾಗಿದೆ. ಅಲ್ಲದೇ ನಿತ್ಯ ಸ್ಯಾನಿಟೈಸೇಶನ್‌ ಮಾಡುವಂತೆಯೂ ತಿಳಿಸಲಾಗಿದೆ ಎಂದು ವಿವರಿಸುತ್ತಾರೆ ಅಧಿಕಾರಿಗಳು

ಜೂ.21ರಿಂದ ಸಾರಿಗೆ ಬಸ್‌ ಸಂಚಾರಕ್ಕೆ ಅವಕಾಶ ಮಾಡಲಾಗಿದೆ. ಈಗಾಗಲೇ ನಮ್ಮ ನಿಗಮದ ಶೇ.96ರಷ್ಟು ಸಿಬ್ಬಂದಿ ವ್ಯಾಕ್ಸಿನ್‌ ಹಾಕಿಸಿಕೊಂಡಿದ್ದಾರೆ. ಅದರ ಜತೆಗೆ ಕೊರೊನಾ ನೆಗೆಟಿವ್‌ ವರದಿ ಇದ್ದವರು ಮಾತ್ರ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ತೆಲಂಗಾಣ, ಮಹಾರಾಷ್ಟ್ರಕ್ಕೆ ಅನುಮತಿ ಸಿಕ್ಕಿದ್ದು, ಸದ್ಯಕ್ಕೆ ಹೈದರಾಬಾದ್‌ ಗೆ ಮಾತ್ರ ಬಸ್‌ ಓಡಿಸಲಾಗುವುದು. ಕ್ರಮೇಣ ಬೇಡಿಕೆಯನುಸಾರ ಎಲ್ಲ ಕಡೆ ಸಂಚಾರಕ್ಕೆ ಮುಕ್ತ ಮಾಡಲಾಗುವುದು.
ವೆಂಕಟೇಶ, ವಿಭಾಗೀಯ
ನಿಯಂತ್ರಕರು, ಸಾರಿಗೆ ವಿಭಾಗ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.