ಸುಳ್ಳು ವದಂತಿ ಹಬ್ಬಿಸಿದರೆ ಕಠಿಣ ಕ್ರಮ

15ಸ್ವಯಂ ಸೇವಕರು ಸೇವೆಗೆ ಸನ್ನದ್ಧಅಗತ್ಯ ಮಾರ್ಗಸೂಚಿಗಳ ಹೊತ್ತಿಗೆ ಬಿಡುಗಡೆ

Team Udayavani, Mar 23, 2020, 4:51 PM IST

23-March-23

ರಾಯಚೂರು: ಕೋವಿಡ್-19  ವೈರಸ್‌ ಕುರಿತು ಸುಳ್ಳು ಸುದ್ದಿ ಹಾಗೂ ವದಂತಿಗಳನ್ನು ಹಬ್ಬಿಸುವವರ ಮೇಲೆ ವಿಶೇಷ ನಿಗಾವಹಿಸಲು ರಾಯಚೂರು ಕೋವಿಡ್-19  ಸೈನಿಕರ ತಂಡ ರಚಿಸಲಾಗಿದೆ. ಈ ಕಾರ್ಯನಿರ್ವಹಣೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಉತ್ಸಾಹಿ ಯುವಕರ ಸ್ವಯಂ ಸೇವಕ ಪಡೆಯೊಂದು ಜಿಲ್ಲೆಯಲ್ಲಿ ಸನ್ನದ್ಧಗೊಂಡಿದೆ.

ಈ ತಂಡವು ಕೋವಿಡ್-19  ವೈರಾಣು ಹರಡುವಿಕೆ ಕುರಿತು ವಿವಿಧ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬರುವ ವದಂತಿಗಳನ್ನು ಪತ್ತೆ ಹಚ್ಚಿ ಅವುಗಳ ನೈಜತೆ ಪರಾಮರ್ಶಿಸಿ ನಿಖರ ಮಾಹಿತಿ ನೀಡಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್‌ ಎಚ್‌.ಸಿ ತಿಳಿಸಿದರು.

ಈ ಕುರಿತು ನಗರದ ವಾರ್ತಾ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸ್ಥಳೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡುವುದು ಕೋವಿಡ್-19  ಸೈನಿಕರ ಕೆಲಸವಾಗಿದೆ. ಅದಕ್ಕಾಗಿ ಜಿಲ್ಲಾಮಟ್ಟದಲ್ಲಿ 15 ಸ್ವಯಂ ಸೇವಕರು ಕೊರೊನಾ ಸೈನಿಕರಾಗಲು ಆಸಕ್ತರಾಗಿ ಮುಂದೆ ಬಂದಿದ್ದಾರೆ ಎಂದು ತಿಳಿಸಿದರು. ಅಂತೆಯೇ ಪ್ರತಿ ತಾಲೂಕಿನಲ್ಲಿಯೂ 20 ಜನರ ತಂಡವು ನಿಗಾ ವಹಿಸಲಿದೆ. ಆಯ್ಕೆಯಾದ ಸೈನಿಕರು ಕೊರೋನಾ ವದಂತಿಗಳ ವಿರುದ್ಧ ಈ ಅಭಿಯಾನ ಜಾರಿಗೆ ತರಲಾಗಿದೆ.

ಈಗಾಗಲೇ ಕೋವಿಡ್-19  ಹರಡಿರುವ ಕುರಿತು ಎರಡು ಸುಳ್ಳು ಸುದ್ದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿರುವ ಬಗ್ಗೆ ಪತ್ತೆಯಾಗಿದ್ದು, ಗಾಳಿ ಸುದ್ದಿ ಹಾಗೂ ಸುಳ್ಳು ವದಂತಿಗಳನ್ನು ಹಬ್ಬಿಸಿದರೆ ದೂರು ದಾಖಲಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯ ನಾಗರಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು. ಸುಳ್ಳು ಸುದ್ದಿ ಹಬ್ಬಿಸುವವರ ಕುರಿತು ಮಾಹಿತಿ ನೀಡಬೇಕು. ಇದೇ ವೇಳೆ ಮಾರ್ಗಸೂಚಿಗಳ ಹೊತ್ತಿಗೆ ಬಿಡುಗಡೆ ಮಾಡಲಾಯಿತು. ಜಿಲ್ಲಾ ಯುವ ರೆಡ್‌ ಕ್ರಾಸ್‌ ಸಂಚಾಲಕ ವಿದ್ಯಾಸಾಗರ, ರೆಡ್‌ಕ್ರಾಸ್‌ನ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದಾರ, ಐಎಚ್‌ಒನ ಹ್ಯುಮಿಟೇಷನ್‌ ಆರ್ಗನೈಸೇಷನ್‌ನ ಓಂಕಾರ್‌ ಪಾಟೀಲ್‌, ದಿಗ್ವಿಜಯ ಎಚ್‌. ತಲಸ್ತೆ, ರುಷಿಕೇಶ್‌, ನಾಗೇಶ್‌ ವಾಡಿಕರ್‌, ಭಾರತೀಯ ರೆಡ್‌ ಕ್ರಾಸ್‌ನ ಟಿ.ರಾಮಯ್ಯ ನಾಯಕ, ಜಿಲ್ಲಾ ಕಾರ್ಯದರ್ಶಿ ಅತಾವುಲ್ಲಾ, ರೆಡ್‌ ಕ್ರಾಸ್‌ನ ಸದಸ್ಯ ಶ್ರೀನಿವಾಸ ರಾಯಚೂರಕರ್‌, ಈರಣ್ಣ ಬೆಂಗಾಲಿ, ನಮ್ಮ ರಾಯಚೂರು ಫೌಂಡೇಷನ್‌ ಅಧ್ಯಕ್ಷ ಪ್ರಭು ಯದ್ಲಾಪುರ ಇತರರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.