Raichur; ಅಂಗವಿಕಲರಿಂದ ಲಂಚ ಪಡೆಯುತ್ತಿದ್ದ ಎಂಆರ್ಡಬ್ಲ್ಯೂ ಲೋಕಾಯುಕ್ತ ಬಲೆಗೆ
Team Udayavani, Jul 11, 2024, 7:48 PM IST
ರಾಯಚೂರು: ಅಂಗವಿಕಲರಿಗೆ ತ್ರಿಚಕ್ರ ವಾಹನ ಮಂಜೂರು ಮಾಡಿಸುವುದಾಗಿ ಲಂಚ ಪಡೆಯುತ್ತಿದ್ದ ಮಾನ್ವಿ ತಾಲೂಕಿನ ವಿಕಲಚೇತನರ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ (Multi-Purpose Rehabilitation Worker) ಹನುಮಂತು ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಲಕ್ಷ್ಮಣ ಎನ್ನುವ ವಿಕಲಚೇತನರಿಂದ 20 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದು, ಐದು ಸಾವಿರ ರೂ.ಪಡೆಯುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. 80 ಸಾವಿರ ರೂ. ಮೌಲ್ಯದ ವಾಹನ ಮಂಜೂರಿಗೆ 20 ಸಾವಿರ ರೂ. ಕೊಡಬೇಕು ಎನ್ನುವ ಬೇಡಿಕೆ ಇಟ್ಟಿದ್ದ ಎಂದು ದೂರುದಾರ ತಿಳಿಸಿದ್ದಾರೆ. ಸರ್ಕಾರದ ಅಂಗವಿಕಲರ ಕಲ್ಯಾಣ ಇಲಾಖೆಯ ಅಧೀನವಾಗಿ ಕೆಲಸ ಮಾಡುವ ಸಂಸ್ಥೆಯ ಕಾರ್ಯಕರ್ತರಿಗೆ ಸರ್ಕಾರವೇ ವೇತನ ಪಾವತಿಸುತ್ತದೆ. ಹನುಮಂತುನನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಶಶಿಧರ, ಡಿಎಸ್ಪಿ ರಘು, ಇನ್ಸಪೆಕ್ಟರ್ ಅಮರೇಶ ಹುಬ್ಬಳಿ, ಕಾಳಪ್ಪ ಬಡಿಗೇರ್ ಸೇರಿ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.