ರಾಯಚೂರು: ಮಹಾಶಿವರಾತ್ರಿ ಸಂಭ್ರಮ-ಜಾಗರಣೆ

ಪ್ರಮುಖ ದೇವಸ್ಥಾನಗಳ ಮುಂದೆ ಜನದಟ್ಟಣೆ ಹೆಚ್ಚಾಗದಂತೆ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದರು.

Team Udayavani, Mar 12, 2021, 6:22 PM IST

Maha

ರಾಯಚೂರು: ನಗರ ಸೇರಿದಂತೆ ಜಿಲ್ಲಾದ್ಯಂತ ಮಹಾಶಿವರಾತ್ರಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಜಾಗರಣೆ ನಿಮಿತ್ತ ವಿವಿಧ ದೇವಸ್ಥಾನಗಳ ವಿಶೇಷ ಪೂಜೆ ನಡೆದರೆ, ಸಂಘ-ಸಂಸ್ಥೆಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ನಗರದ ಚಂದ್ರಮೌಳೇಶ್ವರ, ನಂದೀಶ್ವರ ದೇವಸ್ಥಾನ, ಏಗನೂರು ಟೆಂಪಲ್‌, ನೀಲಕಂಠೇಶ್ವರ ದೇವಸ್ಥಾನ, ನಗರೇಶ್ವರ ದೇವಸ್ಥಾನ, ರಾಮಲಿಂಗೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳ ಪುರಾಣ ಪ್ರವಚನ, ಸಂಗೀತ ಕಾರ್ಯಕ್ರಮ, ಭಜನೆಯಂಥ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವಿಧೆಡೆ ಶಿವಪುರಾಣ ಪ್ರವಚನ ಆಯೋಜಿಸಿದ್ದರೆ ಜನ ಜಾ ಗರಣೆ ನಿಮಿತ್ತ
ಇಡೀ ದಿನ ಶಿವಧ್ಯಾನ, ಶಿವಪೂಜೆಯಲ್ಲಿ ತೊಡಗಿದ್ದು ಕಂಡು ಬಂತು.

ಶಿವನ ದೇವಸ್ಥಾನಗಳಲ್ಲಿ ಗುರುವಾರ ಬೆಳಗಿನ ಜಾವದಿಂದಲೇ ಪೂಜಾ, ವಿಧಿ- ವಿಧಾನ ಕೈಂಕರ್ಯಗಳನ್ನು ಜರುಗಿದವು. ಶಿವನನ್ನು ಒಲಿಸಲು ಕೆಲವು ಪ್ರಮುಖ ದೇವಸ್ಥಾನಗಳಲ್ಲಿ ರುದ್ರಾಭಿಷೇಕ ನೆರವೇರಿಸಲಾಯಿತು. ದೇವರಿಗೆ ವಿಶೇಷ ಪುಷ್ಪಾಲಂಕಾರ ಮಾಡಲಾಗಿತ್ತು. ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ನಗರದ ಹೃದಯ ಭಾಗದಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಭಕ್ತರು ಸಾಲುಗಟ್ಟಿದ್ದು ಕಂಡು ಬಂತು. ಭಕ್ತರ ದರ್ಶನಕ್ಕಾಗಿ ವಿಶೇಷವಾಗಿ ಬೊಂಬುಗಳನ್ನು ಕಟ್ಟಲಾಗಿತ್ತು.

ಐಬಿ ರಸ್ತೆಯ ರಾಮಲಿಂಗೇಶ್ವರ ದೇವಸ್ಥಾನ, ನೇತಾಜಿ ನಗರದ ನಗರೇಶ್ವರ ದೇವಸ್ಥಾನ, ಮಾವಿನಕೆರೆ ಪಕ್ಕದ ನಂದೀಶ್ವರ ದೇವಸ್ಥಾನ, ಎನ್‌ಜಿಒ ಕಾಲೋನಿಯ ನೀಲಕಂಠೇಶ್ವರ ದೇವಸ್ಥಾನ, ಬೊಳಮಾನದೊಡ್ಡಿಯ ಏಗನೂರು ದೇವಸ್ಥಾನ, ನಿಜಲಿಂಗಪ್ಪ ಕಾಲೋನಿಯ ಈಶ್ವರ ದೇವಸ್ಥಾನ ಹಾಗೂ ಮಾಣಿಕಪ್ರಭು ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಇನ್ನೂ ತಾಲೂಕಿನ ದೇವಸೂಗೂರಿನ ಸೂಗೂರೇಶ್ವರ ದೇವಸ್ಥಾನ, ಮನ್ಸಲಾಪುರದ ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲೂ ವಿಶೇಷ ಪೂಜೆ ಜರುಗಿಸಲಾಯಿತು.

ಪ್ರಮುಖ ದೇವಸ್ಥಾನಗಳ ಮುಂದೆ ಜನದಟ್ಟಣೆ ಹೆಚ್ಚಾಗದಂತೆ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದರು. ಕೆಲ ದೇವಸ್ಥಾನಗಳಲ್ಲಿ ಪ್ರಸಾದದ ವ್ಯವಸ್ಥೆ ಮಾಡಿದ್ದರೆ, ಕೆಲವೆಡೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಜ್ಯೋತಿರ್ಲಿಂಗಗಳ ಮೆರವಣಿಗೆ:
ಮಹಾಶಿವರಾತ್ರಿ ಪ್ರಯುಕ್ತ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ನಗರದ ಬಸವೇಶ್ವರ ವೃತ್ತದ ಪಕ್ಕದಲ್ಲಿರುವ ವಾಲ್ಕಟ್‌ ಮೈದಾನದಲ್ಲಿ
ವಿಶೇಷ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಂಜೆ 6 ಅಡಿ ಎತ್ತರದ ವಿಶೇಷ ಶಿವಲಿಂಗ ಮತ್ತು ದ್ವಾದಶ ಜ್ಯೋತಿರ್ಲಿಂಗಗಳ ಶಾಂತಿಯಾತ್ರೆ ಜರುಗಿತು.

ರಂಗಮಂದಿರ ಬಳಿ ಸಂಸ್ಥೆಯ ಸ್ಮಿತಾ ಸಹೋದರಿ ಚಾಲನೆ ನೀಡಿದರು. ಅಲ್ಲಿಂದ ಅಂಬೇಡ್ಕರ್‌ ವೃತ್ತ, ತೀನ್‌ ಕಂದಿಲ್‌, ನೇತಾಜಿ ವೃತ್ತ, ಪಟೇಲ್‌ ವೃತ್ತ, ಬಸವೇಶ್ವರ ವೃತ್ತದ ಮೂಲಕ ವಾಲ್ಕಟ್‌ ಮೈದಾನಕ್ಕೆ ಯಾತ್ರೆ ತಲುಪಿತು. ಸಂಜೆ 6ಕ್ಕೆ ವಾಲ್ಕಟ್‌ ಮೈದಾನದಲ್ಲಿ ಅವರು ಸಂಗೀತ ಕಾರ್ಯಕ್ರಮ ಜರುಗಿತು. ವಿವಿಧ ಮುಖಂಡರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.