ರಾಯಚೂರು ವಿವಿ ಬಲವರ್ಧನೆಗೆ ಪ್ರಸಾವನೆ


Team Udayavani, Feb 6, 2021, 1:02 PM IST

JNANA

ರಾಯಚೂರು: ಇಷ್ಟು ದಿನ ಆಮೆ ವೇಗದಲ್ಲೇ ಸಾಗಿದ್ದ ರಾಯಚೂರು ಪ್ರತ್ಯೇಕ ವಿಶ್ವವಿದ್ಯಾಲಯ ಪೂರ್ಣ ಪ್ರಮಾಣದಲ್ಲಿ ಸಕ್ರಿಯವಾಗಲು ಆರ್ಥಿಕ ಅಡಚಣೆಗಳು ಎದುರಾಗಿವೆ. ಈಚೆಗೆ ನೇಮಕಗೊಂಡಿರುವ ಕುಲಪತಿಗಳು ವಿವಿ ಬಲವರ್ಧನೆಗಾಗಿ ಸರ್ಕಾರಕ್ಕೆ 600 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರದ ಸ್ಪಂದನೆ ಬೇಕಿದೆ.

ಸರ್ಕಾರ ಪ್ರತಿ ವರ್ಷ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ದೊಡ್ಡ ಮೊತ್ತದ ಹಣ ಬಿಡುಗಡೆ ಮಾಡುತ್ತದೆ. ಆದರೆ, ರಾಯಚೂರು ಪ್ರತ್ಯೇಕ ವಿವಿ ಘೋಷಣೆಯಾಗಿ ವರ್ಷಗಳೇ ಕಳೆದರೂ ಇಂದಿಗೂ ಅನುದಾನ ಬಿಡುಗಡೆ ಮಾಡದ ಕಾರಣ ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ಉಪಕುಲಪತಿಯನ್ನು ನೇಮಿಸಿದ್ದು, ಆಡಳಿತಾತ್ಮಕ ಚಟುವಟಿಕೆಗಳಿಗೆ ತುಸು ಜೀವಕಳೆ ಬಂದಿದೆ. ವ್ಯವಹಾರಗಳ ನಿರ್ವಹಣೆ ಜತೆಗೆ ವಿವಿ ಬಲವರ್ಧನೆಗೆ ಬೇಕಾದ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಸಲಾಗಿದೆ.

ಮೂರು ಪ್ರತ್ಯೇಕ ಪ್ರಸ್ತಾವನೆ: ಗುಲ್ಬರ್ಗ ವಿಶ್ವವಿದ್ಯಾಲಯದೊಂದಿಗೆ ಈಗ ಸಂಯೋಜಿತ ಕಾಲೇಜುಗಳನ್ನು ಪ್ರತ್ಯೇಕಿಸಿ ರಾಯಚೂರು ವಿವಿ ಅ ಧೀನಕ್ಕೆ ನೀಡಲಾಗಿದೆ. ಸುಮಾರು 224 ಕಾಲೇಜುಗಳು, 19 ಸ್ನಾತಕೋತ್ತರ ಕೇಂದ್ರಗಳು ಒಳಗೊಂಡಿವೆ. ಅದರ ಜತೆಗೆ ಹಣಕಾಸು ವ್ಯವಹಾರ ಕೂಡ ಇತ್ಯರ್ಥಗೊಂಡಿದೆ. ಗುಲ್ಬರ್ಗ ವಿವಿ ಸಿಂಡಿಕೇಟ್‌ ಮಂಡಳಿ ಕೂಡ ಪೂರಕವಾಗಿ ಕೆಲಸ ಮಾಡಿದ್ದು, ಆಡಳಿತಾತ್ಮಕ ಪ್ರಕ್ರಿಯೆಗಳು ವಿಳಂಬವಾಗುತ್ತಿಲ್ಲ. ಈಗ ಮುಖ್ಯವಾಗಿ ಬೇಕಿರುವುದು ಅನುದಾನ ಮಾತ್ರ. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯದಿಂದ ಮೂರು ಪ್ರತ್ಯೇಕ ಪ್ರಸ್ತಾವನೆಗಳು ಸಲ್ಲಿಸಲಾಗಿದೆ.ಪೂರ್ಣ ಪ್ರಮಾಣದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ, ಅಗತ್ಯ ಕಟ್ಟಡಗಳು,  ಆಡಳಿತ ಭವನ, ಕ್ಯಾಂಟೀನ್‌, ಸಿಬ್ಬಂದಿ ವಸತಿ  ಸಮುತ್ಛಯ, ವಸತಿ ನಿಲಯ, ಕುಡಿವ ನೀರು ಸೇರಿದಂತೆ ಮೂಲ ಸೌಲಭ್ಯಗಳ ಕುರಿತು ಬೇಡಿಕೆಸಲ್ಲಿಸಲಾಗಿದೆ. ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಕೈಗೊಳ್ಳಬಹುದಾದ ಯೋಜನೆಗಳು ಹಾಗೂ ಗುತ್ತಿಗೆ ನೌಕರರ ನೇಮಕ ಸಂಬಂಧಿ ಸಿದ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಕೆಯಾಗಿವೆ. ಒಟ್ಟಾರೆ 600 ಕೋಟಿಗೂ ಅ ಧಿಕ ಮೊತ್ತದ ಅಂದಾಜು ಪಟ್ಟಿ ಒಳಗೊಂಡ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಸರ್ಕಾರ ಏಕಕಾಲಕ್ಕೆ ಅಷ್ಟು ಅನುದಾನ ನೀಡುವ ಸಾಧ್ಯತೆಗಳು ಕಡಿಮೆಯಿದ್ದು, ಹಂತ-ಹಂತವಾಗಿ ನೀಡುವ ಸಾಧ್ಯತೆಗಳು ಹೆಚ್ಚಾಗಿದೆ. ಮೊದಲ ಹಂತದಲ್ಲಿ ಕನಿಷ್ಟ 150 ಕೋಟಿ ನೀಡಿದರೆ ಅನುಕೂಲವಾಗಲಿದೆ ಎಂಬುದು ಕುಲಪತಿಗಳ ಅನಿಸಿಕೆ.

ಇದನ್ನೂ ಓದಿ:ಶೇ.50ರಷ್ಟು ಅತಿಥಿ ಉಪನ್ಯಾಸಕರಿಗೆ ಕೋಕ್‌

ಬಜೆಟ್‌ನತ್ತ ಚಿತ್ತ: ವಿವಿಗೆ ಬೇಕಾದ ವಿಶೇಷ ಅನುದಾನದ ಕುರಿತು ಈಗಾಗಲೇ ಕುಲಪತಿಗಳು ಜಿಲ್ಲೆಯ ಕೆಲ ಜನಪ್ರತಿನಿ ಧಿಗಳೊಟ್ಟಿಗೆ ಚರ್ಚಿಸಿದ್ದು, ಪೂರಕ ಸ್ಪಂದನೆ ಸಿಕ್ಕಿದೆ. ಸರ್ಕಾರದ ಮಟ್ಟದಲ್ಲೂ ರಾಯಚೂರು ವಿವಿ ಅನುಷ್ಠಾನ ಸಂಬಂ ಧಿತ ಅ ಧಿಕಾರಿಗಳ ಮಟ್ಟದ ಸಭೆಯಲ್ಲಿ ಚರ್ಚೆ ಕೂಡ ಆಗಿದೆ. ಹೀಗಾಗಿ ಸರ್ಕಾರ ಈ ಬಜೆಟ್‌ನಲ್ಲಿ ಎಷ್ಟು ಅನುದಾನ ನೀಡಬಹುದು ಎಂಬ ನಿರೀಕ್ಷೆ ಗರಿಗೆದರಿದೆ. ರಾಯಚೂರು ವಿವಿ ಘೋಷಣೆಯಾಗಿದ್ದು, ಬಿಟ್ಟರೆ\ ಈವರೆಗೂ ಯಾವುದೇ ವಿಶೇಷ ಅನುದಾನ ಕಂಡಿಲ್ಲ. ಬಿಜೆಪಿ ನೇತೃತ್ವದ ಸರ್ಕಾರ ಜಿಲ್ಲೆಗೆ ನೀಡುವ ಕೊಡುಗೆಗಳಲ್ಲಿ ಪ್ರತ್ಯೇಕ ವಿವಿಗೆ ವಿಶೇಷ ಅನುದಾನ ಕೂಡ ಇರಲಿದೆಯೇ ಎಂಬ ನಿರೀಕ್ಷೆಗಳಿವೆ. ನಾನು ಅಧಿಕಾರ ವಹಿಸಿಕೊಂಡು ಎರಡೂವರೆ ತಿಂಗಳಾಗಿದೆ.

ಬಂದ ಕೂಡಲೇ ವಿವಿ ಪೂರ್ಣ ಪ್ರಮಾಣದಲ್ಲಿ ಸಕ್ರಿಯವಾಗಲು ಬೇಕಿರುವ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.ಏನೆಲ್ಲ ಬೇಕು ಎಂಬ ವಿಸ್ತೃತ ವರದಿಯನ್ನು  ಸರ್ಕಾರ ಕೇಳಿದ್ದು, ಮೂರು ಪ್ರಸ್ತಾವನೆಗಳಲ್ಲಿ ನೀಡಲಾಗಿದೆ. ಮೂಲ ಸೌಲಭ್ಯ, ಸಿಬ್ಬಂದಿ ಸೇರಿದಂತೆ ಎಲ್ಲ ಆಡಳಿತಾತ್ಮಕ ಚಟುವಟಿಕೆಗೆ ಆರಂಭಗೊಳ್ಳಬೇಕಾದರೆ ಕನಿಷ್ಟ 600 ಕೋಟಿಗೂ ಅಧಿ ಕ ಹಣ ಬೇಕಾಗಲಿದೆ. ಸರ್ಕಾರ ಈ ಬಜೆಟ್‌ನಲ್ಲಿ ಮೊದಲ ಹಂತದಲ್ಲಿ ಎಷ್ಟು ಹಣ ಬಿಡುಗಡೆ ಮಾಡಲಿದೆ ಎಂಬ ನಿರೀಕ್ಷೆಯಲ್ಲಿದೆ. ಜಿಲ್ಲೆಯ ಜನಪ್ರತಿನಿಧಿಗಳಿಂದಲೂ ಉತ್ತಮ ಸ್ಪಂದನೆ ಸಿಕ್ಕಿದ್ದು, ಸರ್ಕಾರದ ಮಟ್ಟದಲ್ಲೂ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.

ಪ್ರೊ| ಹರೀಶ ರಾಮಸ್ವಾಮಿ, ಕುಲಪತಿ, ರಾಯಚೂರು ವಿವಿ

ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.