
ಸಂಡೇ ನೋ ಪಾಸಿಟಿವ್
Team Udayavani, May 25, 2020, 2:38 PM IST

ರಾಯಚೂರು: ಜಿಲ್ಲೆಯಲ್ಲಿ ಶನಿವಾರ 40 ಕೋವಿಡ್ ಪಾಸಿಟಿವ್ ಬಂದು ದಿಗ್ಭ್ರಾಂತಿ ಮೂಡಿಸಿದ್ದರೆ ರವಿವಾರ ಯಾವುದೇ ಪಾಸಿಟಿವ್ ಪ್ರಕರಣ ಬಾರದಿರುವುದು ಜಿಲ್ಲೆಯ ಜನ ನಿಟ್ಟುಸಿರು ಬಿಡುವಂತೆ ಮಾಡಿತು.
ಮುಂಬಯಿನಿಂದ ವಲಸೆ ಬಂದವರಲ್ಲಿ ಪಾಸಿಟಿವ್ ಗಳ ಸಂಖ್ಯೆ ಮಿತಿ ಮೀರುತ್ತಿದೆ. ಕೇವಲ ಐದು ದಿನದಲ್ಲೇ 66 ಪ್ರಕರಣಗಳು ದೃಢಪಟ್ಟಿದ್ದವು. ಏರುಗತಿಯಲ್ಲಿ ಸಾಗಿದ್ದ ಈ ಸಂಖ್ಯೆ ರವಿವಾರ ಎಷ್ಟು ಬರಬಹುದು ಎಂಬ ಕುತೂಹಲ ಮೂಡಿಸಿತ್ತು. ಆದರೆ, ಯಾವುದೇ ಪಾಸಿಟಿವ್ ಬಾರದೆ ತುಸು ನೆಮ್ಮದಿ ತರಿಸಿತು.
ಜಿಲ್ಲೆಯಿಂದ ರವಿವಾರ 1,413 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, 973 ವರದಿಗಳು ನೆಗೆಟಿವ್ ಬಂದಿವೆ. 3,135 ವರದಿ ಬರಬೇಕಿದೆ. ಫೀವರ್ ಕ್ಲಿನಿಕ್ಗಳಲ್ಲಿಂದು 1,398 ಜನರನ್ನು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲಾಗಿದೆ. ಐದು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈವರೆಗೆ 10,498 ಜನರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿದ್ದು, ಅವುಗಳಲ್ಲಿ 5,878 ವರದಿಗಳು ನೆಗೆಟಿವ್ ಆಗಿವೆ. ರೋಗ ಲಕ್ಷಣಗಳಿಲ್ಲದ ಕಾರಣ 6 ವರದಿಗಳು ತಿರಸ್ಕೃತಗೊಂಡಿವೆ. ವೈರಸ್ ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ಸಂಜೆ ನಾಲ್ವರು ಮುಂಬಯಿನಿಂದ ಬಂದಿದ್ದು, ಕ್ವಾರಂಟೈನ್ ಮಾಡಲಾಗಿದೆ. ರವಿವಾರ ಬೆಳಗ್ಗೆ ಮುಂಬಯಿನಿಂದ ಎರಡು ಬಸ್ಗಳಲ್ಲಿ ವಲಸಿಗರು ಬಂದಿದ್ದು, ಅವರಿಗೆಲ್ಲ ಜಿಲ್ಲಾಡಳಿತ ರೆಡ್ ಕ್ರಾಸ್ ಸಂಸ್ಥೆ ಹಾಗೂ ಎನ್ಜಿಒಗಳ ಸಹಯೋಗದಲ್ಲಿ ಊಟ ಉಪಹಾರ ಕಲ್ಪಿಸಲಾಗಿದೆ. ನಗರದ ಜಹೀರಾಬಾದ್ಗೆ ಬಳ್ಳಾರಿಯಿಂದ ಮಹಿಳೆಯೊಬ್ಬರು ಬಂದಿದ್ದು, ಅಕ್ಕಪಕ್ಕದ ಜನ ಆತಂಕಗೊಂಡಿದ್ದಾರೆ. ಅವರನ್ನು ಕ್ವಾರಂಟೈನ್ ಮಾಡುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ ಪ್ರಸಂಗ ನಡೆದಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.