ಹುಡುಗಿ ವಿಚಾರದಲ್ಲಿ ಗಲಾಟೆ: ಕಟ್ಟಿಗೆಯಿಂದ ಹೊಡೆದು ಉಪನ್ಯಾಸಕನ ಮೇಲೆ ವಿದ್ಯಾರ್ಥಿಗಳ ಹಲ್ಲೆ
Team Udayavani, Jan 3, 2020, 1:29 PM IST
ಪ್ರತಿಭಟನಾ ನಿರತ ವಿದ್ಯಾರ್ಥಿಗಳು
ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಪ್ರಾಣೇಶ ಕುಲಕರ್ಣಿ ಮೇಲೆ ವಿದ್ಯಾರ್ಥಿ ಗುಂಪು ಹಲ್ಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.
ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪಿನ ನಡುವೆ ಹುಡುಗಿ ವಿಚಾರವಾಗಿ ಘರ್ಷಣೆ ನಡೆದಿತ್ತು. ಇದಕ್ಕೆ ಸಂಬಂಧಿಸಿ ಉಪನ್ಯಾಸಕರು ಉಭಯ ಗುಂಪುಗಳ ವಿದ್ಯಾರ್ಥಿಗಳನ್ನು ಕರೆದು ವಿಚಾರಿಸಿದ್ದರು. ಒಂದು ತಂಡದ ವಿದ್ಯಾರ್ಥಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು ಎಂದು ತಿಳಿದು ಬಂದಿದೆ. ಇದನ್ನು ಮನಸಿಲ್ಲಿಟ್ಟುಕೊಂಡು ಹಗೆ ಸಾಧಿಸಿದ ವಿದ್ಯಾರ್ಥಿಗಳ ತಂಡ ಗುರುವಾರ ಕೃಷಿ ವಿವಿ ಬಳಿ ಹಲ್ಲೆ ನಡೆಸಿದೆ.
ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳ ತಂಡದಿಂದ ಕಟ್ಟಿಗೆಯಿಂದ ಹೊಡೆದು ಗಂಭೀರವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದ ಪ್ರಾಣೇಶ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಪನ್ಯಾಸಕ ಪ್ರಾಣೇಶ ಕುಲಕರ್ಣಿ ಆರು ಜನ ವಿದ್ಯಾರ್ಥಿಗಳ ವಿರುದ್ಧ ಪಶ್ಚಿಮ ಠಾಣೆಗೆ ದೂರು ನೀಡಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಶುಕ್ರವಾರ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.