![1-dee](https://www.udayavani.com/wp-content/uploads/2025/02/1-dee-1-415x221.jpg)
![1-dee](https://www.udayavani.com/wp-content/uploads/2025/02/1-dee-1-415x221.jpg)
Team Udayavani, Dec 14, 2021, 12:06 PM IST
ಹುಮನಾಬಾದ: ದತ್ತ ಜಯಂತಿ ಹಾಗೂ ಮಾಣಿಕಪ್ರಭುಗಳ ಜಾತ್ರಾ ಮಹೋತ್ಸವ ನಿಮಿತ್ತ ಸೋಮವಾರ ತಾಲೂಕಿನ ಮಾಣಿಕನಗರದ ಪ್ರಭು ಸಂಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು.
ತೀರ್ಥ ಸ್ಥಾನ, ಯೋಗದಂಡ ಪೂಜೆಯೊಂದಿಗೆ ಜಾತ್ರೋತ್ಸವದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಸೋಮವಾರ ಬೆಳಗ್ಗೆ ಮಾಣಿಕಪ್ರಭುಗಳ ಸಂಜೀವಿನಿ ಸಮಾಗೆ ಸಂಸ್ಥಾನದ ಪೀಠಾಧಿಪತಿ ಡಾ| ಜ್ಞಾನರಾಜ ಮಾಣಿಕಪ್ರಭುಗಳ ನೇತೃತ್ವದಲ್ಲಿ ವಿಶೇಷ ಪೂಜೆ ಮಾಡಲಾಯಿತು.
ಈ ವೇಳೆ ಸಂಸ್ಥಾನದ ಕಾರ್ಯದರ್ಶಿಗಳಾದ ಆನಂದರಾಜ ಪ್ರಭುಗಳು, ಚೈತನ್ಯರಾಜ ಇದ್ದರು. ವಿವಿಧೆಡೆಯಿಂದ ಆಗಮಿಸಿದ ನೂರಾರು ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಡಿ.17ರಂದು ಗುರುಪೂಜೆ, ಡಿ.18ರಂದು ಪ್ರಭುಗಳ 204ನೇ ಜಯಂತಿ ಹಾಗೂ ದತ್ತ ಜಯಂತಿ ಆಚರಣೆ. ಡಿ.19ರಂದು ಪ್ರಭು ಸಂಗೀತ ದರ್ಬಾರ ಕಾರ್ಯಕ್ರಮ ನಡೆಯಲಿವೆ ಎಂದು ಸಂಸ್ಥಾನದ ಮುಖಂಡರು ಮಾಹಿತಿ ನೀಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.